ಟೀಕೆಗಳು ಅಳಿಯುತ್ತವೆ; ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ: ಶಾಸಕ ಯಶವಂತರಾಯಗೌಡ

Date:

ಟೀಕೆಗಳು ಅಳಿಯುತ್ತವೆ, ನಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂಬ ಸಿದ್ದಾಂತದೊಂದಿಗೆ ರಾಜಕಾರಣ ಮಾಡುತ್ತಿದ್ದೇನೆ. ಯಾರು ಸಮರ್ಥರು ಎಂಬುದನ್ನು ಜನ ನಿರ್ಧರಿಸುತ್ತಾರೆ. ಇಂಡಿ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕೈಗೊಂಡು ಜನರ ಹೃದಯಕ್ಕೆ ಹತ್ತಿರವಾಗಿದ್ದೇನೆ. ಹೀಗಾಗಿ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ ಹೇಳಿದರು.

ವಿಜಯಪುರ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕು ಎನಿಸಿಕೊಂಡಿದ್ದ ಇಂಡಿಯನ್ನು ಅಭಿವೃದ್ಧಿ ಹೊಂದಿದ ತಾಲೂಕಾಗಿ ಪರಿವರ್ತಿಸಲಾಗಿದೆ. ಭೀಮಶಂಕರ ಸಹಕಾರ ಸಕ್ಕರೆ ಕಾರ್ಖಾನೆ ಆರಂಭ, ಕೆರೆ ತುಂಬುವ ಯೋಜನೆ, ನಿಂಬೆ ಅಭಿವೃದ್ಧಿ ಮಂಡಳಿ, ನಿಂಬೆ ಜಿಐ ಟ್ಯಾಗ್, ಸರಕಾರಿ ಕಚೇರಿಗಳ ಆರಂಭ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಇಂಡಿ ಕ್ಷೇತ್ರದಲ್ಲಿ ಜನರಿಗೆ ನೀಡಿದ ವಾಗ್ದಾನದಂತೆ ನಡೆದುಕೊಂಡಿದ್ದೇನೆ. ರೇವಣಸಿದ್ದೇಶ್ವರ ಏತ ನೀರಾವರಿ ಭೂಮಿ ಪೂಜೆ ಸಂದರ್ಭ ನಾನು ರಾಜಕಾರಣ ಮಾಡಿಲ್ಲ. ನಮ್ಮ ಭಾಗಕ್ಕೆ ನೀರಾವರಿ ಆಗುತ್ತದೆಂದು ಮುಕ್ತ ಮನಸ್ಸಿನಿಂದ ಭಾಗವಹಿಸಿದ್ದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲ್ಲ. ಬೇರೆಯವರು ಕೂಡ ಮಾಡಬಾರದು” ಎಂದು ಹೇಳಿದರು.

“ಜುಲೈ 14 ರಂದು ಇಂಡಿಯಲ್ಲಿ ನಡೆಯುತ್ತಿರುವುದು ಸರ್ಕಾರದ ಕಾರ್ಯಕ್ರಮ. ಶಿಷ್ಟಾಚಾರದ ಜೊತೆಗೆ ಸಂಸದರು ಸೇರಿದಂತೆ ಎಲ್ಲರೂ ಬನ್ನಿ ಎಂದು ಮಾಧ್ಯಮ ಮೂಲಕ ಆಹ್ವಾನಿಸುವೆ. ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಒಬ್ಬ ಅಧಿಕಾರಿಯೂ ಇರಲಿಲ್ಲ. ಯಾರೇ ಅಭಿವೃದ್ಧಿ ಕೆಲಸ ಕೈಗೊಂಡರು ಕ್ರೆಡಿಟ್ ಕೊಡುವ ಸ್ವಚ್ಛ ಮನಸ್ಸು ನನ್ನದು. ನಮ್ಮ ಜನರಿಗೆ ಕೆಲಸ ಆಗಬೇಕು ಅಷ್ಟೇ. ನಿತಿನ್ ಗಡ್ಕರಿ ಅವರ ರಸ್ತೆ ಅಭಿವೃದ್ಧಿ ಕಾರ್ಯವನ್ನು ಶ್ಲಾಘಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

“ಕಾಲುವೆ ಯೋಜನೆಗೆ ರಾಜ್ಯ ಸರ್ಕಾರ ಕೂಡ ಶೇ 40 ರಷ್ಟು ಅನುದಾನ ಕೊಡುತ್ತದೆ. ಸಿಡಬ್ಲ್ಯೂಸಿ ಬಗ್ಗೆ ನಮ್ಮ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ರಾಜ್ಯ ಸರ್ಕಾರ ಆದಷ್ಟು ಬೇಗ ಡಿಪಿಆರ್ ಸಿದ್ದಪಡಿಸಿ ಕಳಿಸಲಾಗಿದೆ ಎಂದು ತಿಳಿಸಿದರು. ಗೋಳಗುಮ್ಮಟ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದಿತ್ತು. ಗೋವಿಂದ ಕಾರಗೋಳ ಅವರು ವಿಮಾನ ನಿಲ್ದಾಣ ಮಾಡಿದ್ದಾರೆ. ಈಗ ಕೇಂದ್ರದಿಂದ ಪರಿಸರದ ಅನುಮತಿ ಕೊಡಸಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...