ಬೀದರ್‌ | ಸತತ ಮಳೆಗೆ ಬೆಳೆ ಹಾನಿ; ಪರಿಹಾರಕ್ಕೆ ರೈತ ಸಂಘ ಒತ್ತಾಯ

Date:

ಜಿಲ್ಲೆಯಲ್ಲಿ ಕಳೆದ ಎರಡು ವಾರ ನಿರಂತರವಾಗಿ ಸುರಿದ ಭಾರಿ ಮಳೆಗೆ ರೈತರು ಬೆಳೆದ ಉದ್ದು, ಹೆಸರು, ತೊಗರಿ ಹಾಗೂ ತರಕಾರಿ ಬೆಳೆಗಳು ಜಲಾವೃತಗೊಂಡು ಸಂಪೂರ್ಣ ನಾಶವಾಗಿವೆ. ಕೂಡಲೇ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ʼಜಿಲ್ಲೆಯ ಮಾರುಕಟ್ಟೆಯಲ್ಲಿ ಮುಂಗಾರಿನ ಬೆಳೆಗಳ ದರ ಕುಸಿತವಾಗಿದೆ. ಹೀಗಾಗಿ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದಿದ್ದರೆ ರೈತರಿಗೆ ಅನ್ಯಾಯವಾಗುತ್ತದೆ. ಈಗಾಗಲೇ ತಿಂಗಳಿಂದ ರಾಶಿ ಮಾಡಿದ ರೈತರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಕಾಟಾಚಾರಕ್ಕೆ ಎಂಬಂತೆ ಓರ್ವ ರೈತರಿಂದ 10 ಕ್ವಿಂಟಲ್ ಕಾಳು ಖರೀದಿ ಮಾಡುತ್ತೇವೆಂದು ಹೇಳಿತ್ತು. ಆದರೆ, ಇಲ್ಲಿಯವರೆಗೆ ಖರೀದಿ ಕೇಂದ್ರ ಪ್ರಾರಂಭ ಮಾಡಿಲ್ಲʼ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಈ ಹಿಂದೆ ಒಬ್ಬ ರೈತರಿಂದ 5 ಎಕರೆವರೆಗೆ 20 ಕ್ವಿಂಟಲ್ ಖರೀದಿ ಮಾಡುತ್ತಿತ್ತು, ಅದೇ ರೀತಿ ಎಕರೆಗೆ 20 ಕ್ವಿಂಟಲ್ ಖರೀದಿ ಮಾಡಬೇಕು. ಬೆಳೆ ವಿಮೆ ಕಟ್ಟಿದ ರೈತರಿಗೆ ವಿಮಾ ಹಣ ಪಾವತಿಸಬೇಕು. ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ಕೆಲ ರೈತರಿಗೆ ಇನ್ನು ಕಬ್ಬಿನ ಬಾಕಿ ಹಣ ಪಾವತಿಸಲಿಲ್ಲ. ಅಂತಹ ಕಾರ್ಖಾನೆಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು, ಬಾಕಿ ಉಳಿದ ರೈತರ ಹಣವನ್ನು ಕೂಡಲೇ ಬಡ್ಡಿ ಸಹಿತ ಪಾವತಿಸಬೇಕು ʼಎಂದು ಆಗ್ರಹಿಸಿದರು.

ಸರ್ಕಾರ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಶೀಘ್ರದಲ್ಲಿ ಸ್ಪಂದಿಸಿ ಬಗೆಹರಿಸಬೇಕು. ಇಲ್ಲವಾದರೆ ರೈತರು ಉಗ್ರ ಸ್ವರೂಪದ ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹಿರಿಯ ಸಾಹಿತಿ, ಪ್ರಾಧ್ಯಾಪಕ ಜಿ.ಬಿ.ವಿಸಾಜಿ ನಿಧನ

ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ವಿಠಲರಾವ ಮೇತ್ರೆ, ನಾಗಶೆಟ್ಟೆಪ್ಪ ಲಂಜವಾಡೆ, ಶಿವಕಾಂತ ಖಂಡೆ, ಬಸವರಾಜ ಅಷ್ಟೂರ್, ವಿಠಲರೆಡ್ಡಿ ಆಣದೂರ, ಕಾಶೆಪ್ಪಾ ಹುಡಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...