ಚಿಕ್ಕಬಳ್ಳಾಪುರ | ಅಕಾಲಿಕ ಮಳೆಗೆ ಬೆಳೆ ನಾಶ; ಸಂಕಷ್ಟದಲ್ಲಿ ರೈತಾಪಿ ವರ್ಗ

Date:

ಬದಲಾದ ಕಾಲಮಾನದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಕೊಳೆಯುವ ಹಂತಕ್ಕೆ ತಲುಪಿದೆ. ಬೆಳೆ ಕೈಸೇರುವ ಕಾಲದಲ್ಲಿ ವಿಪರೀತ ಮಳೆಯಿಂದ ಬೆಳೆ ಹಾನಿಗೊಳಗಾಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಮಳೆಯಿಂದ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ರೈತಾಪಿ ವರ್ಗ ತತ್ತರಿಸಿ ಹೋಗಿದೆ. ರೈತರು ಬೆಳೆದ ಬೆಳೆಗಳು ಹೊಲದಲ್ಲೇ ಕೊಳೆಯುತ್ತಿವೆ.

ಸಾಮಾನ್ಯವಾಗಿ ನವೆಂಬರ್‌, ಡಿಸೆಂಬರ್‌ ತಿಂಗಳಿನಲ್ಲಿ ಬೆಳೆಯು ರೈತನ ಕೈ ಸೇರುತ್ತದೆ. ಆದರೆ ಈ ಬಾರಿ ಮಳೆಯಿಂದಾಗಿ ಬೆಳೆ ಜಮೀನಿನಲ್ಲಿಯೇ ಹಾಳಾಗುತ್ತಿದೆ. ಕೊಯ್ಲಿಗೆ ಬಂದಿರುವ ಹೂವು, ಹಣ್ಣು, ತರಕಾರಿಗಳು ಕೊಳೆಯುತ್ತಿವೆ. ಟೊಮ್ಯಾಟೋ, ಸೇವಂತಿಗೆ, ಚೆಂಡು ಹೂವು, ಶೇಂಗಾ(ಕಡಲೆಕಾಯಿ), ರಾಗಿ, ಮೆಕ್ಕೆ ಜೋಳ, ತೊಗರಿ ಮಳೆಯ ಹೊಡೆತಕ್ಕೆ ಸಿಲುಕಿ ನಾಶವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೊಮ್ಯಾಟೋ ಹಣ್ಣು, ಸೇವಂತಿಗೆ, ಚೆಂಡು ಹೂವು ಬೆಳೆದಿರುವ ರೈತರು ಸ್ಥಿತಿ ಹೇಳದಾಗಿದೆ. ಮಳೆಯಿಂದ ಟೊಮ್ಯಾಟೋ ಗಿಡಗಳಿಗೆ ಎಲೆ ಚುಕ್ಕಿ ರೋಗ, ಕಾಯಿ ಚುಕ್ಕಿ ರೋಗ ಬರುತ್ತಿದೆ. ಇದರಿಂದ ಕಾಯಿ ಕೊಳೆಯುತ್ತಿವೆ. ಚೆಂಡು ಹೂವು ಜಮೀನಿನಲ್ಲೇ ಕೊಳೆತು ಹೋಗುತ್ತಿದೆ. ಅರ್ಧ ಭಾಗ ಹೂವು, ತರಕಾರಿ ಮಾರುಕಟ್ಟೆಗೆ ಹೋದರೆ, ಉಳಿದದ್ದು ಹೊಲದಲ್ಲೇ ಹಾಳಾಗುತ್ತಿದೆ. ಇದರಿಂದ ಕಷ್ಟಪಟ್ಟು ಬೆಳೆದಿದ್ದ ಬೆಳೆ ಕೈಸೇರದಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ ಎಂಬುದು ಹೂವು, ತರಕಾರಿ ಬೆಳೆಗಾರರ ಅಳಲು.

ಟೊಮೊಟೊ ಹಣ್ಣು

ಮುಂಗಾರು ಹಂಗಾಮಿನ ಮಳೆಯಾಶ್ರಿತ ಬೆಳೆಯಾದ ಶೇಂಗಾ ಪ್ರಸಕ್ತ ವರ್ಷವೂ ಬಯಲುಸೀಮೆ ರೈತರ ಕೈಹಿಡಿಯುತ್ತಿಲ್ಲ. ಈಗಾಗಲೇ ಶೇಂಗಾ ಗಿಡಗಳನ್ನು ಕಿತ್ತಿರುವ ಕೆಲ ರೈತರು, ಮಳೆಯ ಕಾರಣ ಕಡಲೆಕಾಯಿ ಬಳ್ಳಿಯನ್ನು ಇನ್ನೂ ಹೊಲದಲ್ಲೇ ಬಿಟ್ಟಿದ್ದು, ಕಡಲೆಕಾಯಿ ಬಿಡಿಸಿಕೊಳ್ಳಲು ಸಾಧ್ಯವಾಗದಂತಾಗಿದೆ. ಕಡಲೆಕಾಯಿ ಬಳ್ಳಿಯಂತೂ ಮಳೆಯಿದ ಬಹುತೇಕ ಕೊಳೆತು ಹೋಗಿದ್ದು, ಹಸುಗಳಿಗೆ ಕಡಲೆಕಾಯಿ ಬಳ್ಳಿ ಮೇವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಹವಾಮಾನ ವೈಪರೀತ್ಯದಿಂದ ಸೃಷ್ಟಿಯಾದ ಈ ಸಮಸ್ಯೆಗೆ ಶೇಂಗಾ ಬೆಳೆಗಾರರು ಕಂಗಾಲಾಗಿದ್ದಾರೆ.

ಶೇಂಗಾ ಬೆಳೆ ನಷ್ಟ edited 2

ಬಾಗೇಪಲ್ಲಿ ತಾಲ್ಲೂಕು ಬಿಳ್ಳೂರ ನಲಸಾನಂಪಲ್ಲಿ ಗ್ರಾಮದ ಬಿ.ವಿ.ವೆಂಕಟರವಣ ಶೇಂಗಾ ಪ್ರಮುಖವಾಗಿ ಬೆಳೆಯಲಾಗುತ್ತಿದೆ.
ಪ್ರಸಕ್ತ ವರ್ಷ ಮಳೆ ನಿರೀಕ್ಷೆ ಮೀರಿ ಸುರಿದಿದೆ. ವಾಡಿಕೆಗಿಂತಲೂ ಹೆಚ್ಚು ಮಳೆಯಾದರೂ ರೈತರಲ್ಲಿ ಖುಷಿ ಇಲ್ಲ. ಶೇಂಗಾ ಬೆಳೆಗೆ ಮಳೆಯಿಂದ ಪ್ರಯೋಜನವಾಗಿಲ್ಲ. ಅಗತ್ಯ ಇರುವಾಗ ಕೈಕೊಟ್ಟ ಮಳೆ, ಬೆಳೆ ಕೈಸೇರುವ ಹಂತದಲ್ಲಿ ಅತಿಯಾಗಿ ಸುರಿದು ಸಂಪೂರ್ಣ ನಾಶ ಮಾಡಿದೆ ಎಂಬ ಕೊರಗು ರೈತರಲ್ಲಿದೆ. ಶೇಂಗಾ ಬಿತ್ತನೆಯ ಸಹವಾಸವೇ ಸಾಕು ಎನ್ನುವಷ್ಟು ರೈತರು ಹೈರಾಣಾಗಿದ್ದಾರೆ.

ರೈತ ಬಿ.ವಿ.ವೆಂಕಟರಮಣ ಮಾತನಾಡಿ, 5 ಎಕರೆ ಜಮೀನಿನಲ್ಲಿ ಶೇಂಗಾ ಬೆಳೆಗಳನ್ನು ಬೆಳೆದಿದ್ದೇವೆ. ಇನ್ನೇನು ಬೆಳೆಯನ್ನು ಕಟಾವು ಮಾಡಿ ಮನೆಗೆ ತರಬೇಕು ಎನ್ನುವಷ್ಟರಲ್ಲಿ ಮಳೆ ಆರಂಭವಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ರೈತರ ಬದುಕು ಮೂರಾಬಟ್ಟೆಯಾಗಿದೆ ಎಂದು ಹೇಳಿದರು.

ಕೆಲ ರೈತರು ಕಟಾವು ಮಾಡಿದರೆ, ಇನ್ನೂ ಕೆಲ ರೈತರು ಜಮೀನಿನಲ್ಲಿ ಬಿಟ್ಟಿದ್ದರು. ಆದರೆ, ಸತತ ಮಳೆಗೆ ಶೇಂಗಾ ಬೆಳೆ ಕೊಳೆತು ಹೋಗಿದೆ. ಸಾಲಸೋಲ ಮಾಡಿ ರೈತರು ಕಷ್ಟಪಟ್ಟು ಬೆಳೆ ಬೆಳೆದಿದ್ದಾರೆ. ಮಳೆಗೆ ಬೆಳೆದಿದ್ದ ಬೆಳೆ ಕಣ್ಣೆದುರೆ ನಾಶದ ಅಂಚಿಗೆ ಬಂದಿದೆ. ಹಾಗಾಗಿ, ಮಳೆಯಿಂದ ರೈತರಿಗೆ ಉಂಟಾದ ಬೆಳೆ ಹಾನಿಗೆ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...