ಬೀದರ್‌ | ಸೂಕ್ತ ಸೌಲಭ್ಯ, ಗೌರವಧನ ಒದಗಿಸಲು ಬೆಳೆ ಸಮೀಕ್ಷೆದಾರರ ಒಕ್ಕೂಟ ಒತ್ತಾಯ

Date:

  • ಜಿಲ್ಲೆಯಲ್ಲಿ ಐನೂರಕ್ಕೂ ಅಧಿಕ ಬೆಳೆ ಸಮೀಕ್ಷೆದಾರರಿಂದ ಕಾರ್ಯ ನಿರ್ವಹಣೆ
  • ಎಲ್ಲ ಋತುಮಾನದಲ್ಲೂ ಸಮೀಕ್ಷೆ ನಡೆಸಿದರೂ ಕನಿಷ್ಠ ಗೌರವಧನ ಕೂಡ ಇಲ್ಲ

ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರತಿ ವರ್ಷ ಮುಂಗಾರು, ಹಿಂಗಾರು, ಬೇಸಿಗೆ ಋತುವಿನಲ್ಲಿ ಬೆಳೆ ಸಮಿಕ್ಷೆ ಕಾರ್ಯಕೈಗೊಳ್ಳುತ್ತೇವೆ. ಆದರೆ ಸದರಿ ಬೆಳೆ ಸಮೀಕ್ಷೆ ಕಾರ್ಯ ಸುಗಮ ರೀತಿಯಲ್ಲಿ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಲ್ಲಿ ಹಲವು ಸಮಸ್ಯೆಗಳು ಎದುರಿಸುತ್ತಿದ್ದು, ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವಂತೆ ಜಿಲ್ಲಾ ಬೆಳೆ ಸಮೀಕ್ಷೆದಾರರು (ಪಿ.ಆರ್)‌ ಆಗ್ರಹಿಸಿದರು.

ಈ ಸಂಬಂಧ ಬೀದರ್ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಕೃಷಿ ಜಂಟಿ ನಿರ್ದೇಶಕರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ಕರ್ನಾಟಕ ಸರಕಾರದ ಆದೇಶದಂತೆ ಪ್ರತಿ ವರ್ಷ ಬೀದರ ಜಿಲ್ಲೆಯ ರೈತರ ಪಹಣಿ ಪ್ರತಿಕೆಯಲ್ಲಿ ಬೆಳೆ ನಮೂದು ಆಗಲು ಹಾಗೂ ಪ್ರಧಾನ ಮತ್ರಿ ಫಸಲ್ ಬಿಮಾ ಯೋಜನೆ ಪಡೆಯಲು ಬೆಳೆ ವಿಮೆ ಪಡೆಯಲು ವಿವಿಧ ಬೆಳೆ ಹಾನಿ ಪ್ರಸಂಗಗಳಲ್ಲಿ ಬೆಳೆ ಹಾನಿ ಪರಿಹಾರ ಪಡೆಯಲು ಮಾರುಕಟ್ಟೆಯಲ್ಲಿ ಬೆಳೆ ಮಾರಾಟ ಮಾಡಲು ಬೆಳೆ ಸಮೀಕ್ಷೆ ಅತ್ಯಗತ್ಯವಾಗಿರುತ್ತದೆ. ಸರ್ಕಾರದ ಯೋಜನೆಗಳಿಗೆ ಬೆಳೆ ಸಮೀಕ್ಷೆ ನಡೆಸಲು ಜಿಲ್ಲಾದ್ಯಂತ ಸುಮಾರು ಐನೂರಕ್ಕೂ ಅಧಿಕ ಸಮೀಕ್ಷೆದಾರರು ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಋತುಮಾನದಲ್ಲಿ ಕ್ಷೇತ್ರದಲ್ಲಿ ಬೆಳೆ ಸಮೀಕ್ಷೆ ನಡೆಸುವ ನಮಗೆ ಇಲಾಖೆಯಾಗಲಿ, ಸರ್ಕಾರವಾಗಲಿ ಯಾವುದೇ ಸಂರಕ್ಷಣೆ ನೀಡುತ್ತಿಲ್ಲ. ಅಷ್ಟೇ ಅಲ್ಲದೆ ಕನಿಷ್ಠ ಗೌರವಧನ ಕೂಡ ನೀಡುತ್ತಿಲ್ಲ. ಪಿಯುಸಿ, ಪದವಿ ಮುಗಿಸಿದ ನಮಗೆ ಜೀವನ ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿದ್ದೇವೆ. ಕೂಡಲೇ ನಮ್ಮ ಸಮಸ್ಯೆಗಳಿಗೆ ಬಗೆಹರಿಸಬೇಕೆಂದು ಒತ್ತಾಯಿಸಿದರು

ಬೇಡಿಕೆಗಳು:

  1. ಬೆಳೆ ಸಮೀಕ್ಷೆ ಕೈಗೊಳ್ಳಲು ಹೋದಾಗ ಹೊಲದಲ್ಲಿ ವಿವಿಧ ವಿಷಜಂತುಗಳಿಂದ ಸುರಕ್ಷಿತ ಕವಚಗಳನ್ನು (ಸೆಫ್ಟಿ ಶೂ ಹಾಗೂ ಇತ್ಯಾದಿಗಳು) ಕೊಡಬೇಕು.
  2. ಪಿ.ಆರ್‌.ಗಳಿಗೆ (PR) ಗುರುತಿನ ಚೀಟಿ ನೀಡಬೇಕು.
  3. ಸುಗಮ ರೀತಿಯಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಸುಗಮ ರೀತಿಯಲ್ಲಿ ಜಿ.ಪಿ.ಎಸ್ (G.P.S) ನಕ್ಷೆ ವ್ಯವಸ್ಥೆ ಮಾಡಿಕೊಡಬೇಕು.
  4. ಜೀವ ಹಾನಿ ಸಂಭವಿಸಿದಲ್ಲಿ 5 ಲಕ್ಷ ರೂಪಾಯಿ ಜೀವ ವಿಮೆ ಒದಗಿಸಿಕೊಡಬೇಕು.
  5. ಪ್ರತಿ ಪ್ಲಾಟ್‌ ಗೆ 50 ರೂ. ನಿಗದಿಪಡಿಸುವುದು ಅಥವಾ ಪಿ.ಆರ್ ಗಳಿಗೆ ಪ್ರತಿ ತಿಂಗಳಿಗೆ ನಿರ್ದಿಷ್ಟ ಮೊತ್ತ (10,000) ನಿಗದಿಪಡಿಸಬೇಕು.
  6. ಪಿ.ಆರ್‌.ಗಳು ಬೆಳೆ ಸಮೀಕ್ಷೆ ಮಾಡುವ ಸಮಯದಲ್ಲಿ ಫೋನ್ ಹಾಗೂ ಚಾರ್ಚಿಂಗ್ ತೊಂದರೆ ಆಗುತ್ತಿದ್ದು, ಹೊಸ ಮೊಬೈಲ್‌, ಪವರ್‌ ಬ್ಯಾಂಕ್‌ ಕೊಡಿಸಬೇಕು.
  7. ಪ್ರತಿ ವರ್ಷ ಜಿ.ಪಿ.ಎಸ್ (GPS) ನಕ್ಷೆ ಸರ್ವೆ ನಂಬರ ಮೂಲಕ ಬೆಳೆ ಸಮೀಕ್ಷೆ ಮಾಡಲಾಗುತ್ತಿತ್ತು. ಆದರೆ ಈಗ ಹಿಸ್ಸಾ ನಂಬರ ಜಿ.ಪಿ.ಎಸ್ ಮಾಡಲು ತುಂಬಾ ತೊಂದರೆ ಹಾಗೂ ಸಮಯ ವರ್ಥವಾಗುತ್ತಿದೆ. ಈ ಸಮಸ್ಯೆ ಬಗೆಹರಿಸಬೇಕು.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡಿದವರಿಗೆ 25 ಸಾವಿರ ರೂ. ದಂಡ

ಈ ಸಂದರ್ಭದಲ್ಲಿ ಬೀದರ ಜಿಲ್ಲೆಯ ವಿವಿಧ ತಾಲೂಕಿನ ಪಿ.ಆರ್‌ ಗಳಾದ ಲೋಕೇಶ, ಬಸವರಾಜ ಕುಪ್ಪೆ, ಸಂಜುಕುಮಾರ, ವೀರಶೆಟ್ಟಿ, ಏಕನಾಥ ಮೇತ್ರೆ, ನಾಗಶೆಟ್ಟಿ, ಸಂತೋಷ, ಶ್ರೀಕಾಂತ, ಸುಂದರ, ರಮೇಶ, ಸೊಗೇಲ್‌, ದಾವುದ್‌ ಮಿಯ್ಯಾ, ನಾಗರಾಜ, ಕಲ್ಯಾಣಿ, ನರಸಪ್ಪ, ಪ್ರಕಾಶ, ಬಲಭೀಮ, ಮಧುಕರ, ಗುಂಡಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಬೆಳೆ ಸಮೀಕ್ಷೆದಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...