ಶಿವಮೊಗ್ಗ | ಗಾಜನೂರು ತುಂಗಾ ಡ್ಯಾಮ್‌ನಲ್ಲೂ ಕ್ರಸ್ಟ್‌ಗೇಟ್ ರೋಪ್ ಜಾಮ್; ಅನಾಹುತವಾದಲ್ಲಿ ಹೊಣೆ ಯಾರು?

Date:

ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಮುರಿದು ಹೋಗಿರುವ ಮಧ್ಯೆಯೇ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಜಲಾಶಯದಲ್ಲಿಯೂ ಕ್ರಸ್ಟ್ ಗೇಟಿನ ರೋಪ್ ಜಾಮ್ ಆಗಿರುವ ಸಂಗತಿ ಬೆಳಕಿಗೆ ಬಂದಿದೆ. ಒಂದು ವೇಳೆ ಅದನ್ನು ಬಲವಂತವಾಗಿ ಎತ್ತಲು ಮುಂದಾದರೆ ತುಂಡಾಗುವ ಭೀತಿ ಎದುರಾಗಿದೆ.

ತುಂಡಾಗುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕ್ರಸ್ಟ್ ಗೇಟ್ ತೆರೆಯದೇ ಬೇರೆ ಗೇಟುಗಳಿಂದ ಅಧಿಕಾರಿಗಳು ಜಲಾಶಯ ನಿರ್ವಹಣೆ ಮಾಡುತ್ತಿರುವ ವಿಚಾರ ಗೊತ್ತಾಗಿದೆ. ಒಂದು ವೇಳೆ ಜಾಮ್ ಆಗಿರುವ ಹಗ್ಗವು ತುಂಡಾಗಿ, ಅನಾಹುತವಾದಲ್ಲಿ ಹೊಣೆ ಯಾರು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ತುಂಗ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋಗಿರುವ ಬೆನ್ನಲ್ಲೇ ಈ ವಿಚಾರ ಬೆಳಕಿಗೆ ಬಂದಿದ್ದು, ಗಾಜನೂರು ತುಂಗಾ ಡ್ಯಾಮ್‌ನ ಈವರೆಗೆ ಅಧಿಕಾರಿಗಳು ಮಳೆಗಾಲ ಆರಂಭಕ್ಕೂ ಮೊದಲು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಜಲಾಶಯದಲ್ಲಿ ಜಲ ಹಾನಿ ತಪ್ಪಿದೆಯಾದರೂ, ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ.

ರಾಜ್ಯದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ತುಂಗಾ ಜಲಾಶಯದಲ್ಲೂ ಒಂದು ಕ್ರಸ್ಟ್‌ ಗೇಟ್ ಕೆಲಸ ಮಾಡುವುದು ನಿಂತಿದೆ. ಅಂದರೆ, ತುಂಗಾ ಜಲಾಶಯದ 22 ರೇಡಿಯಲ್ ಗೇಟ್‌ಗಳ ಪೈಕಿ ಒಂದು ಕ್ರಸ್ಟ್ ಗೇಟ್ ಅಂದರೆ 8ನೇ ಗೇಟ್‌ ಕೆಲಸ ಮಾಡುತ್ತಿಲ್ಲ ಎಂಬುದನ್ನು ಗಮನಿಸಿದ ಇಂಜಿನಿಯರ್‌ಗಳು ಆ ಗೇಟನ್ನು ತೆರೆಯುವುದನ್ನೇ ನಿಲ್ಲಿಸಿದ್ದಾರೆ.

WhatsApp Image 2024 08 12 at 5.44.21 PM 1

ಒಂದು ವೇಳೆ ರೋಪ್ ಜಾಮ್‌ನಿಂದ ಉಂಟಾಗಿರುವ ಕ್ರಸ್ಟ್‌ ಗೇಟನ್ನು ಬಲವಂತವಾಗಿ ತೆರೆಯಲು ಮುಂದಾದರೆ ಅದು ಮುರಿದು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ, ಈ ಗೇಟನ್ನು ಯಾವುದೇ ಕಾರಣಕ್ಕೂ ತೆರೆಯದಿರಲು ಸೂಚನೆ ನೀಡಿದ್ದಾರೆ. ತುಂಗಾ ಜಲಾಶಯದ 22 ಗೇಟುಗಳ ಪೈಕಿ 8ನೇ ಕ್ರಸ್ಟ್ ಗೇಟು ಮಾತ್ರ ಕೆಲಸ ಮಾಡದೇ ಸ್ಥಗಿತಗೊಂಡಿದೆ.

ತುಂಗಾ ಜಲಾಶಯಕ್ಕೆ ಜುಲೈನಲ್ಲಿ 85 ಸಾವಿರ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದ್ದಾಗ ಜಲಾಶಯದ ಎಲ್ಲ 22 ಗೇಟ್‌ಗಳನ್ನು ತೆರೆಯಲೇಬೇಕಾಗುತ್ತದೆ. ಆದರೆ, ಈ ಬಾರಿ 8ನೇ ಗೇಟ್ ಅನ್ನು ಓಪನ್ ಮಾಡದೆ 21 ಗೇಟ್ ಮೂಲಕವೇ ಎಲ್ಲ ನೀರನ್ನು ಹೊರಬಿಟ್ಟಿದ್ದಾರೆ.

2019 ಮತ್ತು 20ರಲ್ಲಿ 1 ಲಕ್ಷ ಕ್ಯುಸೆಕ್ ಅಧಿಕ ನೀರು ಬಂದಿತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲ ಗೇಟ್ ಓಪನ್ ಮಾಡುವುದು ಅನಿವಾರ್ಯವಾಗಿತ್ತು. ಈ ಬಾರಿ 85 ಸಾವಿರ ಕ್ಯೂಸೆಕ್ಸ್ ಒಳಹರಿವು ಇದ್ದ ಕಾರಣ ಎಂಜಿನಿಯರ್‌ಗಳು ಅದನ್ನು ತೆರೆಯದೇ ಈ ರೀತಿಯಾಗಿ ನಿಭಾಯಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗ ನೀರಾವರಿ ಇಲಾಖೆಯ ಎಇಇ ತಿಪ್ಪ ನಾಯ್ಕ್ ಈ ದಿನ.ಕಾಮ್ ಜೊತೆಗೆ ಮಾತನಾಡಿದ್ದು, “ವಾರ್ಷಿಕ ಮೇಂಟೈನೆನ್ಸ್ ಮಾಡುವ ವೇಳೆಯಲ್ಲಿ ಗ್ರೀಸ್ ಕಾರಡಿಯಂ ಕಾಂಪೌಂಡ್ ಮಾಡುವಾಗ ರೋಪ್ ಜಾಮ್ ಆಗಿರುವುದನ್ನು ಗಮನಿಸಿದ್ದೇವೆ” ಎಂದು ತಿಳಿಸಿದರು.

ಈ ಬಗ್ಗೆ ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಲು ತಡಬಡಾಯಿಸಿದ ಅವರು, “ಸಂಬಂಧಪಟ್ಟ ಅಧಿಕಾರಿಗಳು ಸದ್ಯ ಈ ರೀತಿಯ ಕ್ರಮ ಕೈಗೊಂಡಿದ್ದಾರೆ” ಎಂದಷ್ಟೇ ತಿಳಿಸಿದರು.

ತುಂಗಾ ಡ್ಯಾಮ್

ಹೊಸಪೇಟೆ ತುಂಗಾಭದ್ರ ಡ್ಯಾಮ್ ರೀತಿ ಅವಘಡ ಸಂಭವ ಆಗಿದ್ದರೆ ಯಾರು ಹೊಣೆ ಎಂದು ಪ್ರಶ್ನಿಸಿದಾಗ, “ಆ ರೀತಿ ಆಗಲು ಅವಕಾಶ ಆಗದಂತೆ ನೋಡಿಕೊಳ್ಳುತ್ತೇವೆ. ಸದ್ಯ ಡ್ಯಾಮ್ ನೀರು ಕಡಿಮೆ ಆಗಬೇಕು. ಸದ್ಯದ ಮಟ್ಟಿಗೆ ಏನು ಮಾಡಲು ಆಗುವುದಿಲ್ಲ. ಆದಷ್ಟು ಶೀಘ್ರದಲ್ಲಿ ಸರಿಪಡಿಸುತ್ತೇವೆ” ಎಂದು ತಿಪ್ಪ ನಾಯ್ಕ್ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

ತುಂಗಾ ಜಲಾಶಯ

ತುಂಗಾ ಜಲಾಶಯದಿಂದ ನದಿಗೆ ನೀರು ಹರಿಸಿದ್ದಲ್ಲದೇ ಅಚ್ಚುಕಟ್ಟು ಪ್ರದೇಶಕ್ಕೆ, ಕೆರೆ ತುಂಬಿಸುವ ಯೋಜನೆಗಳಿಗೂ ನೀರು ಹರಿಯುತ್ತಿದೆ. ತುಂಗಭದ್ರಾ ಜಲಾಶಯ ತುಂಬಲು ಪ್ರಮುಖ ಆಸರೆಯೇ ತುಂಗಾ ಜಲಾಶಯ. 3.5 ಟಿಎಂಸಿ ಸಾಮರ್ಥ್ಯದ ಜಲಾಶಯ ಒಂದು ದೊಡ್ಡ ಮಳೆಗೆ ಭರ್ತಿಯಾಗುತ್ತದೆ. ನಂತರ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಗೆ, ತುಂಗಭದ್ರಾ ಜಲಾಶಯಕ್ಕೆ, ಶಿವಮೊಗ್ಗ, ನ್ಯಾಮತಿ, ಹೊನ್ನಾಳಿವರೆಗಿನ ಸಾವಿರಾರು ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ, ತುಂಗಾ ಏತ ನೀರಾವರಿ ಮೂಲಕ ಹತ್ತಾರು ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಹೆಚ್ಚುವರಿ ನೀರನ್ನು ನದಿಗೆ ಹರಿಸುವ ಜತೆಗೆ ಅದೇ ಸಮಯದಲ್ಲಿ ಉಳಿದ ಕಡೆಯೂ ನೀರು ಹರಿಸಬೇಕಾದ ಅನಿವಾರ್ಯತೆ ಇರುತ್ತದೆ. ನದಿಗೆ ಒಳಹರಿವು ಇಳಿಮುಖವಾದಾಗ ಕ್ರಸ್ಟ್ ಗೇಟ್ ಮೂಲಕ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...