ಕಲಬುರಗಿ | ದೇಶದ ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅಗತ್ಯ: ಡಾ.ರಮೇಶ್ ಲಂಡನಕರ್

Date:

“ದೇಶದ ಇಂದಿನ ಸಾಂಸ್ಕೃತಿಕ, ವೈಚಾರಿಕ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅತ್ಯವಶ್ಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ರಮೇಶ ಲಂಡನಕರ್ ತಿಳಿಸಿದರು.

ನೇತಾಜಿ ಸುಭಾಷಚಂದ್ರ ಬೋಸ್ ಸ್ಮರಣ ಸಮಿತಿ, ಆವಿಷ್ಕಾರ ವೇದಿಕೆ, ಎಐಡಿಎಸ್‌ಓ, ಎಐಡಿವೈಓ, ಎಐಎಮ್ಎಸ್‌ಎಸ್ ಜಂಟಿಯಾಗಿ ಕಲಬುರಗಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿರುವ “ಸಾಂಸ್ಕೃತಿಕ ಜನೋತ್ಸವ” ಕಾರ್ಯಕ್ರಮದ ಎರಡನೇ ದಿನ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

“ನೇತಾಜಿ ಸುಭಾಶ್ಚಂದ್ರ ಬೋಸ್‌ರವರ ವಿಚಾರಧಾರೆ-ಅವರ ಸಮರಶೀಲ ಹೋರಾಟವು ಅತ್ಯಂತ ಪ್ರಸ್ತುತವಾಗಿದೆ. ಇಂದಿನ ರಾಜಕೀಯ-ಸಾಮಾಜಿಕ-ಆರ್ಥಿಕ ಹಾಗೂ ಸಾಂಸ್ಕೃತಿಕ ಸಮಸ್ಯೆಗಳಿಗೆ ಪರಿಹಾರವನ್ನು ನೇತಾಜಿಯವರ ರಾಜೀರಹಿತ ಹೋರಾಟದಲ್ಲಿ ಕಾಣಬಹುದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದೆಡೆ ಬ್ರಿಟಿಷರ ಆಳ್ವಿಕೆಯಡಿಯಲ್ಲಿ ದೇಶದ ಜನತೆಯು ಅತ್ಯಂತ ಶೋಷಣೆಗೊಳಗಾಗಿದ್ದರು. ಇನ್ನೊಂದೆಡೆ ಕಂದಾಚಾರ, ಮೌಢ್ಯತೆ ಹಾಗೂ ಜಡತ್ವ ತುಂಬಿತ್ತು. ಇಂತಹ ಸಂದರ್ಭದಲ್ಲಿ ನೇತಾಜಿಯವರು ಕಟ್ಟಿದಂತಹ ಸಮರಶೀಲ ಹೋರಾಟವು ಸ್ವಾತಂತ್ರ್ಯ ಸಂಗ್ರಾಮದ ದಿಕ್ಕನ್ನೇ ಬದಲಾಯಿಸಿ, ಜನರಲ್ಲಿ ಹೊಸ ಹುಮ್ಮಸ್ಸು ಕನಸು ನೀಡಿತು. ನೇತಾಜಿಯವರ ಸ್ವತಂತ್ರ ಭಾರತವು ಬಡತನಮುಕ್ತ, ಮಾನವನಿಂದ ಮಾನವನ ಶೋಷಣಾಮುಕ್ತ ಸಮಸಮಾಜ ನಿರ್ಮಾಣದ ಕನಸಿತ್ತು. ಆದರೆ ಅವರ ಕನಸು ಕನಸಾಗಿಯೇ ಉಳಿದಿದ್ದು, ಈಗ ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

“ಇಂದಿನ ಶಿಕ್ಷಣವು ವೈಜ್ಞಾನಿಕ ಹಾಗೂ ಧರ್ಮ ನಿರಪೇಕ್ಷವಾಗಿಲ್ಲದಿರುವುದರಿಂದ ಇಂದಿನ ಯುವಪೀಳಿಗೆ ಯಾವುದೇ ಆದರ್ಶ-ತಾತ್ವಿಕತೆ ಇಲ್ಲದೇ ಸೊರಗುತ್ತಿದೆ. ಸಮಾಜದಲ್ಲಿ ನೀತಿ, ನೈತಿಕತೆ ಹಾಗೂ ಸಾಂಸ್ಕೃತಿಕ ಅಧಃಪತನದಿಂದಾಗಿ ವಿದ್ಯಾರ್ಥಿ-ಯುವ ಸಮೂಹವು ಕವಲು ಸ್ಥಿತಿಯಲ್ಲಿದೆ. ಹಾಗಾಗಿ, ಇಂದು ಸಮಾಜವನ್ನು ಅಮೂಲಾಗ್ರವಾಗಿ ಬದಲಾಯಿಸಬೇಕೆಂದರೆ ಜನರ ಮನೋಭೂಮಿಕೆಯನ್ನು ಹದಗೊಳಿಸುವುದಕ್ಕಾಗಿ ಸಾಂಸ್ಕೃತಿಕ ಚಳುವಳಿ ಅತ್ಯವಶ್ಯಕ. ಹಾಗಾಗಿಕಲಬುರಗಿ ಜನತೆಯು ಸೇರಿಕೊಂಡು ಪ್ರತಿ ವರ್ಷ ನಡೆಸುತ್ತಿರುವ ಸಾಂಸ್ಕೃತಿಕ ಜನೋತ್ಸವ ಬಹುಮುಖ್ಯವಾದುದು” ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಎಐಎಮ್ಎಸ್ಎಸ್ ಜಿಲ್ಲಾ ಕಾರ್ಯದರ್ಶಿಗಳಾದ ಡಾ. ಸೀಮಾ ದೇಶಪಾಂಡೆ ಮಾತನಾಡಿ, “ನೇತಾಜಿರವರು ಲಿಂಗಭೇದ ಮಾಡದೇ ಸಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಕೈಗೆ ಬಂದೂಕು ನೀಡಿ, ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿಸಿದ್ದು ಕ್ರಾಂತಿಕಾರಿ ನಡೆಯೆಂದು ಹೇಳುತ್ತಾ, ನೇತಾಜಿಯವರ ಕನಸಿನ ಭಾರತವನ್ನು ನಿರ್ಮಾಣ ಮಾಡುವುದರಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾದದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ತ್ಯಾಗ-ಸ್ಫೂರ್ತಿಯ ಸಂಕೇತ ರಮಾಬಾಯಿ ಅಂಬೇಡ್ಕ‌ರ್: ಮಿಲಿಂದ್ ಸಾಗರ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ತುಳಜಾರಾಮ ರವರು ವಹಿಸಿಕೊಂಡಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ಡೊಳ್ಳಿನ ಪದಗಳು, ಕೊಳಲು ವಾದನ, ನೃತ್ಯ, ಕಾವ್ಯ-ಕುಂಚ-ನೃತ್ಯ, ಖವ್ವಾಲಿ, ಹಾಗೂ ಪ್ರೇತಾತ್ಮಗಳು ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...