ಸೈಬರ್ ವಂಚನೆ | ಆನ್​ಲೈನ್​ನಲ್ಲಿ ₹82 ಲಕ್ಷ ಕಳೆದುಕೊಂಡ ಟೆಕ್ಕಿ

Date:

  • ಒಂದು ವರ್ಷದೊಳಗೆ ₹700 ಕೋಟಿ ಹಣ ಕಳೆದುಕೊಂಡ ಜನ
  • ಈ ಸೈಬರ್‌ ವಂಚನೆ ಜಾಲಕ್ಕೂ ಭಯೋತ್ಪಾದಕ ಸಂಘಟನೆಗೂ ಸಂಬಂಧ

ದೇಶದಲ್ಲಿ ನಿತ್ಯ ಹಲವಾರು ಸೈಬರ್‌ ವಂಚನೆ ಪ್ರಕರಣಗಳು ವರದಿಯಾಗುತ್ತಿದ್ದು, ಇತ್ತೀಚೆಗೆ ಹೈದರಾಬಾದ್‌ನ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರು ಆನ್‌ಲೈನ್‌ನಲ್ಲಿ ₹82 ಲಕ್ಷ ಕಳೆದುಕೊಂಡಿದ್ದರು. ಈ ಬಗ್ಗೆ ತನಿಖೆ ಆರಂಭಿಸಿದ ಹೈದರಾಬಾದ್ ಪೊಲೀಸರು ಇದರಲ್ಲಿ ಚೀನಾದ ವ್ಯಕ್ತಿಗಳ ಕೈವಾಡವಿರುವ ಜಾಲವನ್ನು ಪತ್ತೆ ಮಾಡಿದ್ದಾರೆ.

ಚೀನಾದ ವ್ಯಕ್ತಿಗಳ ಕೈವಾಡವಿರುವ ಸೈಬರ್ ವಂಚನೆ ಜಾಲವು ದೇಶ ವಿದೇಶಗಳಲ್ಲಿ ಜನರನ್ನು ಹೂಡಿಕೆ ಹಾಗೂ ಅರೆಕಾಲಿಕ ಉದ್ಯೋಗಗಳನ್ನು ಕೊಡಿಸುವ ನೆಪದಲ್ಲಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ವಂಚನೆಯ ಸುಳಿಗೆ ಒಂದು ವರ್ಷದೊಳಗೆ ಕನಿಷ್ಠ 15 ಸಾವಿರ ಭಾರತೀಯರು ಸಿಲುಕಿ ₹700 ಕೋಟಿಗೂ ಅಧಿಕ ಹಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.

ಹೈದರಾಬಾದ್‌ನ ಸಾಪ್ಟ್‌ವೇರ್ ಇಂಜಿನಿಯರ್ ಶಿವು ಎಂಬುವವರು ಆನ್‌ಲೈನ್‌ನಲ್ಲಿ ಬರೋಬ್ಬರಿ ₹82 ಲಕ್ಷ ಕಳೆದುಕೊಡಿದ್ದರು. ಸೈಬರ್ ಕ್ರೈಂ ಜಾಲದೊಳಗೆ ಸಿಲುಕಿದ್ದ ಇವರು ಹೈದರಾಬಾದ್ ಪೊಲೀಸ್‌ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವು ದೂರು ನೀಡಿದ ಬೆನ್ನಲ್ಲೇ, ಹೈದರಾಬಾದ್ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದರು. ಈ‌ ಪ್ರಕರಣವನ್ನು ಭೇದಿಸಿದ ಸೈಬರ್ ಕ್ರೈಂ ವಿಭಾಗದ ಪೊಲೀಸರು ಚೀನಾ ಸೈಬರ್ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚನೆಯ ಮಾಸ್ಟರ್​ಮೈಂಡ್ ಅಹಮದಾಬಾದ್​ನ ಪ್ರಕಾಶ್ ಪ್ರಜಾಪತಿ ಹಾಗೂ ಕುಮಾರ್ ಪ್ರಜಾಪತಿ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೀನಾದ ಕೆವಿನ್ ಜುನ್, ಲು ಲಾಂಗ್ಶೋ ಮತ್ತು ಶಾಶಾ ಎಂಬ ಮೂವರನ್ನು ಒಳಗೊಂಡ ಈ ತಂಡ ಭಾರತದಲ್ಲಿ ಕೆಲವರ ಸಹಕಾರದೊಂದಿಗೆ ಸೈಬರ್ ವಂಚನೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ.

ಈ ಚೀನಾ ಮೂಲದ ಸೈಬರ್ ವಂಚನೆ ತಂಡವು ಯುಟ್ಯೂಬ್ ಹಾಗೂ ಫೇಸ್‌ಬುಕ್ ಮೂಲಕ ಅಮಾಯಕರನ್ನು ಟಾರ್ಗೆಟ್ ಮಾಡಿ ನಾನಾ ಕಂಪನಿಗಳ ಹೆಸರಿನಲ್ಲಿ 48 ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು ₹548 ಕೋಟಿ ಜಮಾ ಆಗಿದೆ. ಇನ್ನುಳಿದಂತೆ ₹128 ಕೋಟಿ ಹಣವನ್ನು ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಚೀನಾದ ಸೈಬರ್‌ ವಂಚನೆ ಜಾಲಕ್ಕೂ ಭಯೋತ್ಪಾದಕ ಸಂಘಟನೆಗೂ ಸಂಬಂಧವಿದೆ ಎನ್ನಲಾಗಿದೆ. ಖಾತೆಗೆ ಬಂದ ಹಣವನ್ನು ಈ ತಂಡ ದುಬೈ ಮೂಲಕ ಚೀನಾಗೆ ರವಾನಿಸಿದೆ. ಇನ್ನೂ ಕೆಲವು ಹಣವನ್ನು ಲೆಬನಾನ್‌ ಮೂಲದ ಭಯೋತ್ಪಾದಕ ಗುಂಪು ಹೆಜ್ಬುಲ್ಲಾ ನಿರ್ವಹಿಸುತ್ತಿರುವ ಖಾತೆಗೆ ಕಳುಹಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಅರೆಕಾಲಿಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ವಿಸ್ತರಣೆ ಮಸೂದೆ ಅಂಗೀಕಾರ

ಈ ವಂಚನೆಯ ಬಗ್ಗೆ ಕೇಂದ್ರ ಏಜೆನ್ಸಿಗಳು, ಕೇಂದ್ರ ಗೃಹ ಸಚಿವಾಲಯದ ಸೈಬರ್ ಕ್ರೈಂ ಘಟಕಕ್ಕೂ ವಿವರಗಳನ್ನು ನೀಡಲಾಗಿದೆ. ಈ ಜಾಲವು ಹಣದ ಒಂದು ಭಾಗವನ್ನು ಕ್ರಿಪ್ಟೋ ಕರೆನ್ಸಿಯಾಗಿ ಪರಿವರ್ತಿಸಲಾಗಿದೆ ಹಾಗು ಹಿಜ್ಬುಲ್ಲಾ ನಿರ್ವಹಿಸುವ ವ್ಯಾಲೆಟ್‌ಗೆ ಠೇವಣಿ ಮಾಡಲಾಗಿದೆ ಎಂದು‌ ಪೊಲೀಸರು ಹೇಳಿದ್ದಾರೆ.

ಈ ತಂಡವು ವಾಟ್ಸ್‌ಆಪ್ ಮತ್ತು ಟೆಲಿಗ್ರಾಮ್ ಮೂಲಕ ಅಮಾಯಕರನ್ನು ಸಂಪರ್ಕಿಸಿ ಹೂಡಿಕೆ ಮತ್ತು ಅರೆಕಾಲಿಕ ಉದ್ಯೋಗಗಳ ಹೆಸರಿನಲ್ಲಿ ಅಮಾಯಕ ಜನರನ್ನು ಯಾಮಾರಿಸಿ ಅವರಿಂದ ಕಡಿಮೆ ಹಣ ಹೂಡಿಕೆ ಮಾಡಿಸಿದ್ದಾರೆ. 5-6 ಲಕ್ಷ ಹಣವನ್ನು ಕಳೆದುಕೊಂಡವರನ್ನು ವಾಟ್ಸಾಪ್​ ಹಾಗೂ ಟೆಲಿಗ್ರಾಮ್​ನಲ್ಲಿ ಸಂಪರ್ಕಿಸಿ ಅವರಿಗೆ ₹5 ಸಾವಿರ ಮೊತ್ತದ ಸಣ್ಣ ಮೊತ್ತವನ್ನು ಹೂಡಿಕೆ ಮಾಡಲು ಕೇಳಿದ್ದಾರೆ. ಬಳಿಕ ಈ ಹೂಡಿಕೆಗೆ ದುಪ್ಪಟ್ಟು ಹಣ ನೀಡಿ ವಿಶ್ವಾಸ ಗಳಿಸಿದ್ದಾರೆ. ನಂತರ ಅಧಿಕ ಮೊತ್ತ ಹೂಡಿಕೆ ಮಾಡಲು ಪ್ರೇರೇಪಿಸಿ ಮೋಸ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...