ದ.ಕ. | ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಿ: ನ್ಯಾಯಾಧೀಶ ಜೈಶಂಕರ್

Date:

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು.

ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು ಅತಿ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದ.ಕ. | ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್: ಸಂಸದ ಚೌಟ

ಖಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ ಎಂದು ತಿಳಿಸಿದರು. ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು  ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಇಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | 13 ಸ್ಥಳಗಳನ್ನು ಗುರುತಿಸಿದ ದೂರುದಾರ: ಮಹಜರು ನಾಳೆಗೆ ಮುಂದೂಡಿಕೆ

ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಇಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ. ಇಲ್ಲಿನ ಆದೇಶವು ಅಂತಿಮವಾಗಿದ್ದು, ಮೇಲ್ಮನವಿಗೆ ಅವಕಾಶವಿಲ್ಲ. ರೂ.1 ಕೋಟಿವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡಾ ಇಲ್ಲಿ ದಾಖಲಿಸಬಹುದು ಎಂದು ಹೇಳಿದರು. ಖಾಯಂ ಜನತಾ ನ್ಯಾಯಾಲಯವು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 6ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯನ್ನು ಹೊಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು | ಮಾದಕ ದ್ರವ್ಯ ಸೇವನೆ; ಮೂವರ ಬಂಧನ

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಜಲ್ ರಹೀಮ್, ಲಾವಣ್ಯ  ರೈ ಹೆಗ್ಡೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...