ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

Date:

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಕೂಡಲೇ ಹೊಂಡ ಗುಂಡಿ ಮುಚ್ಚಿ ರಸ್ತೆ ದುರಸ್ತಿಗೊಳಿಸಲು ಒತ್ತಾಯಿಸಿ, ನಾಗರಿಕರು ಮತ್ತು ಆಟೋ ರಿಕ್ಷಾ ಚಾಲಕರು ಡಿವೈಎಫ್ಐ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಬೈಕಂಪಾಡಿ ಕ್ರಾಸ್ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ನೆಲ ಜಲವನ್ನು ತ್ಯಾಗ ಮಾಡಿದ ಜನರನ್ನೇ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ ಮಾಡುವ ದುಸ್ಥಿತಿಗೆ ತಂದು ನಿಲ್ಲಿಸಿದೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ. ನಮ್ಮ ಕ್ಷೇತ್ರದ ಶಾಸಕರು ಅಸೆಂಬ್ಲಿ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಬಗ್ಗೆ ಮಾತನಾಡುತ್ತಿಲ್ಲ. ವಾಹನ ಸವಾರರು ರಸ್ತೆ ಹೊಂಡ ಗುಂಡಿಗೆ ಬಿದ್ದು ಸಾಯುತ್ತಿದ್ದರು ಅವರಿಗೆ ಅದರ ಬಗ್ಗೆ ಚಿಂತೆ ಇಲ್ಲ. ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವ ಬಡ ರಿಕ್ಷಾ, ಟೆಂಪೋ ಚಾಲಕರ ನೋವುಗಳು ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿಲ್ಲ. ಮುಂದಿನ 15 ದಿನದೊಳಗೆ ರಸ್ತೆ ದುರಸ್ತಿ ಆಗದಿದ್ದಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿದಾಗ ಪೊಲೀಸರು ರಸ್ತೆ ನಿರ್ಲಕ್ಷ್ಯ ಮಾಡಿದ ಇಲಾಖೆಗಳ ಅಧಿಕಾರಿಗಳ ಮೇಲೆ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದರು.

ಡಿವೈಎಫ್ಐ ಸುರತ್ಕಲ್ ವಲಯ ಕಾರ್ಯದರ್ಶಿ ಶ್ರೀನಾಥ್ ಕುಲಾಲ್ ಮಾತನಾಡಿದರು. ಈ ಸಂದರ್ಭದಲ್ಲಿ ಬೈಕಂಪಾಡಿ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ನವೀನ್ ಬೈಕಂಪಾಡಿ, ಪೂವಪ್ಪ ದೇವಾಡಿಗ, ಮೋನಪ್ಪ, ಲತೀಫ್ ಅಂಗರಗುಂಡಿ, ಶಾಫಿ, ಶಬ್ಬೀರ್, ಮುಸ್ತಫಾ ಎಸ್.ಎಂ ಫಾರೂಕ್ ದೇಶ್ ಪ್ರೇಮಿ, ಟೆಂಪೋ ಚಾಲಕರ ಸಂಘದ ನಾಯಕರಾದ ಫೈವ್ ಸ್ಟಾರ್ ಖಾದರ್, ರಹೀಮ್, ಹೈದರ್, ಅಬ್ದುಲ್ ಕಾದರ್, ಬಸ್ ಮಾಲಕರ ಸಂಘದ ಇಚ್ಛಾಲಿ ಎಸ್. ಎಂ,ಡಿವೈಎಫ್ಐ ಮುಖಂಡರಾದ ಬಿ.ಕೆ ಮಕ್ಸೂದ್, ತೌಸೀಫ್ ಅಂಗರಗುಂಡಿ, ಶಕೀಲ್, ನಿಜಾಮ್, ಮುಸ್ತಫಾ, ನವಾಜ್ ಕುಳಾಯಿ, ಇಕ್ಬಾಲ್ ಜೋಕಟ್ಟೆ, ಸಾದಿಕ್ ಮೂಲ್ಕಿ, ಅನ್ಸಾರ್, ಫರಾನ್,ಸೈಫಲ್, ಸಾಬಿತ್,ಜಿಯಾದ್, ನಿಶಾನ್ ಎಂ.ಕೆ, ನಾಸಿರ್, ರಫೀಕ್ ನೌಫಾನ್, ರಾಝಿಕ್, ಎನ್.ಎಫ್.ಸಿ ಕ್ರಿಕೆಟರ್ಸ್ ಪ್ರಮುಖರಾದ  ಸಲೀಮ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...