ದ.ಕನ್ನಡ | ಡಿ.8ರಂದು ಸಿಪಿಐಎಂ ಬೃಹತ್ ರ‍್ಯಾಲಿ, ಬಹಿರಂಗ ಸಭೆ

Date:

ಅಸಮಾನ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಬಾಧಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು‌ ರೂಪಿಸಬೇಕು ಎಂದು ಆಗ್ರಹಿಸಿ “ಜನಸಾಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ” ಎಂಬ ಘೋಷಣೆಯಡಿಯಲ್ಲಿ ಡಿ.8ರಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಹೊರಡಲಿದ್ದು, 11 ಗಂಟೆಗೆ ಸರಿಯಾಗಿ ಕ್ಲಾಕ್ ಟವರ್ ಬಳಿ ಬಹಿರಂಗ ಸಭೆ ನಡೆಯಲಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್‌ ಕಾಟಿಪಳ್ಳ ತಿಳಿಸಿದ್ದಾರೆ.

ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ, ಕೈಗಾರಿಕೆಗಳು, ಕೃಷಿ, ಮೀನುಗಾರಿಕೆಗೆ ಸಂಬಂಧಿಸಿ ಸ್ಥಳೀಯ ಜನತೆಯ ಹಿತಾಸಕ್ತಿಗಳನ್ನು ಎತ್ತಿಹಿಡಿಯಬೇಕು. ಜಿಲ್ಲೆಯ ಹೊಸ ತಾಲೂಕುಗಳಿಗೆ ತಾಲೂಕು ಆಸ್ಪತ್ರೆಗಳನ್ನು ಮಂಜೂರು ಮಾಡಬೇಕು. ಕಿದ್ವಾಯಿ, ಜಯದೇವ ಆಸ್ಪತ್ರೆಗಳನ್ನು ಮಂಗಳೂರಿನಲ್ಲಿ ಸ್ಥಾಪಿಸಬೇಕು. ಆರೋಗ್ಯ ರಂಗದಲ್ಲಿ ಪಿಪಿಪಿ ಮಾದರಿಗೆ ಅವಕಾಶ ನೀಡಬಾರದು. ಜಿಲ್ಲೆಯ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಕಡ್ಡಾಯಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಂಗಳೂರು ಮೀನುಗಾರಿಕಾ ಬಂದರು ಅಭಿವೃದ್ಧಿ ಪಡಿಸುವುದು, ಬೇಕಾಬಿಟ್ಟಿ ಟೋಲ್ ಗೇಟ್ ನಿರ್ಮಾಣಕ್ಕೆ ಕಡಿವಾಣ ಹಾಕುವುದು, ಗಲ್ಫ್ ರಾಷ್ಟ್ರಗಳಲ್ಲಿ ದುಡಿಯುವ ರಾಜ್ಯದ ಅನಿವಾಸಿ ಶ್ರಮಿಕರಿಗೆ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವುದು, ಮಂಗಳೂರು ನಗರ ಸಹಿತ ರಸ್ತೆಗುಂಡಿಗಳನ್ನು ಮುಚ್ಚುವುದು, ಕೆಂಪುಕಲ್ಲು ದರ ಇಳಿಸುವುದು, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದು, ಆದಿವಾಸಿ, ಅಲೆಮಾರಿ, ದಲಿತರು ಸೇರಿದಂತೆ ಕಳೆವರ್ಗಗಳ ಹಿತಾಸಕ್ತಿ ಕಾಪಾಡುವುದು, ಬೀಡಿ ನಿರ್ಮಾಣ ವಿಭಾಗ ಸೇರಿದಂತೆ ಅಸಂಘಟಿತ ಕಾರ್ಮಿಕರ ಶೋಷಣೆಗೆ ಕಡಿವಾಣ ಹಾಕುವುದು ಸೇರಿದಂತೆ ಮುಂತಾದ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

ಅಭಿವೃದ್ದಿ ಎಂಬುದು ಸಮಾಜದ ಮೇಲ್ಪದರದಲ್ಲಿರುವ ಜನಗಳಿಗಷ್ಟೇ ಸೀಮಿತವಾಗದೆ ಸಮಸ್ತ ಜನವಿಭಾಗಗಳನ್ನು ಒಳಗೊಳ್ಳುವಂತೆ ಯೋಜನೆಗಳನ್ನು ರೂಪಿಸಬೇಕು ಎಂಬ ಆಗ್ರಹದೊಂದಿಗೆ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.

ಶಿಕ್ಷಣ, ಆರೋಗ್ಯದ ಲಾಬಿಗಳು, ರಿಯಲ್ ಎಸ್ಟೇಟ್ ಮುಂತಾದ ದೊಡ್ಡ ಉದ್ಯಮಿಗಳ ಪರವಾಗಿ ಜಿಲ್ಲೆಯ ಆಳುವ ವರ್ಗ ರೂಪಿಸುತ್ತಿರುವ ಇಂದಿನ ಏಕಪಕ್ಷೀಯ ಅಭಿವೃದ್ಧಿಗೆ ಪರ್ಯಾಯವಾದ ಕಣ್ಣೋಟದೊಂದಿಗೆ, ಜನ ಸಾಮಾನ್ಯರ ಬದುಕು ಉತ್ತಮ ಗೊಳಿಸುವ ಉದ್ದೇಶದೊಂದಿಗೆ ನಡೆಯುತ್ತಿರುವ ಈ ಜನಾಗ್ರಹ ಕಾರ್ಯಕ್ರಮವನ್ನು ಜಿಲ್ಲೆಯ ಜನತೆ ಬೆಂಬಲಿಸಬೇಕು ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...