ದಕ್ಷಿಣ ಕನ್ನಡ | ಸೌಹಾರ್ದ ಕಾರ್ಯಕ್ರಮಗಳಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಬಶೀರ್ ಮದನಿ

Date:

ಎಲ್ಲ ಧರ್ಮಗಳ ಬೋಧನೆಗಳು ಸತ್ಯದ ಹಾದಿಯಲ್ಲಿದ್ದು, ಮನುಷ್ಯ ಕುಲದ ಏಳಿಗೆಗಾಗಿ ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ, ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ ಎಂದು ಎಸ್‌ವಾಯ್‌ಎಸ್‌ ಜಿಲ್ಲಾ ಉಪಾಧ್ಯಕ್ಷ ಬಶೀರ್‌ ಮದನಿ ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಇಂತಹ ಕಂದಕ ಸೃಷ್ಟಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಸುನ್ನಿ ವಿದ್ವಾಂಸ ಹಾಗೂ ಎಸ್‌ಯುಎಸ್‌ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಸ್‌ಐ ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷ ಹೇಮಚಂದ್ರ ಕುಮಾರ್ ಮಾತನಾಡುತ್ತಾ, ಇಫ್ತಾರ್ ಕೂಟವು ನಿಜಕ್ಕೂ ಸೌಹಾರ್ದದ ಸಂದೇಶ ಸಾರುವ ಆಚರಣೆಯಾಗಿದೆ. ಮಾತ್ರವಲ್ಲ ಭಾಂಧವ್ಯದ ಸಂಕೇತವಾಗಿದೆ. ಒಬ್ಬರನ್ನೊಬ್ಬರನ್ನು ಪರಸ್ಪರ ಗೌರವಿಸಲು ಇಂತಹ ವೇದಿಕೆಗಳನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಹೇಳಿದರು.

ಸಾಮಾಜಿಕ ಚಿಂತಕ ಡಾ. ಕೆ.ಪ್ರಕಾಶ್‌ರವರು ಮಾತನಾಡಿ, ಜಗತ್ತಿನ 126ದೇಶಗಳ ಪೈಕಿ ಭಾರತದ ಹಸಿವಿನ ಸೂಚ್ಯಂಕವು 114ನೇ ಸ್ಥಾನದಲ್ಲಿದೆ. ದೇಶದಲ್ಲಿ ಹಸಿವಿನ ಹೆಚ್ಚಳದ ಜೊತೆಗೆ ಅಸಮಾನತೆಯೂ ಹೆಚ್ಚುತ್ತಿದೆ, ಸೌಹಾರ್ದತೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ನಾಸಿರ್ ಲಕ್ಕಿಸ್ಟಾರ್, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟಾನಿ ಅಲ್ವಾರೀಸ್, ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಅಧ್ಯಕ್ಷ ಮಹಮ್ಮದ್ ಮುಸ್ತಾಫ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿಯವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...