ದಕ್ಷಿಣ ಕನ್ನಡ | 47,000 ಮಂದಿ ಹಿರಿಯ ಮತದಾರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ

Date:

  • ಹಿರಿಯ ಮತದಾರರು ಮತದಾನ ಕೇಂದ್ರಗಳಿಗೆ ಹೋಗಬೇಕಾಗಿಲ್ಲ: ಜಿಲ್ಲಾಧಿಕಾರಿ
  • ಹಿರಿಯ ಮತದಾರರು ಮನೆಯಿಂದಲೇ ಮತ ಚಲಾಯಿಸಲು ನಮೂನೆ 12ಡಿ ಅವಕಾಶ

ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಮತದಾರರು, ವಿಕಲಚೇತನರು ಸೇರಿದಂತೆ 60,934 ಮಂದಿ ಮತದಾರರಿಗೆ ಮನೆಯಲ್ಲೇ ಕುಳಿತು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರಿಗೆ ಮೇ 1ರಿಂದ 5ರವರೆಗೆ ಅವರ ಮನೆ ಬಾಗಿಲಿಗೆ ಫಾರ್ಮ್ 12ಡಿ ನೀಡಲಾಗುವುದು, ಇದರಿಂದ ಅವರು ಮೇ 10ರೊಳಗೆ ಮತ ಚಲಾಯಿಸಲು ಸಾಧ್ಯವಾಗುತ್ತದೆ.

ಅರ್ಹ ಮತದಾರರು ನಮೂನೆ ’12ಡಿ’ಗೆ ಸಹಿ ಹಾಕಬೇಕು. ಅವರ ಮನೆಗಳಿಗೆ ಚುನಾವಣಾಧಿಕಾರಿ ಭೇಟಿ ನೀಡಿ ಮೇ 10ರೊಳಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಒದಗಿಸುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 46,927 ಮಂದಿ ಮತದಾರರು, 14,007 ಮಂದಿ ಪಿಡಬ್ಲ್ಯೂಡಿ ಮತದಾರರಿದ್ದಾರೆ. ಆ ಮತದಾರರ ಅನುಕೂಲಕ್ಕಾಗಿ ಚುನಾವಣಾ ಆಯೋಗವು ವಿನೂತನ ಯೋಜನೆಯನ್ನು ಪರಿಚಯಿಸಿದೆ. ಚುನಾವಣೆಗೆ ಕನಿಷ್ಠ ಐದು ದಿನಗಳ ಮೊದಲು ನಮೂನೆ 12ಡಿ ಅರ್ಜಿಯನ್ನು ಅವರಿಗೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಾನಗರ ಪಾಲಿಕೆ ಬಜೆಟ್ ಮಂಡನೆ ಮುಂದೂಡಿಕೆ

“ಅರ್ಹ ಮತದಾರರು ತಮ್ಮ ಮನೆಗಳಿಂದಲೇ ಮತದಾನದ ಹಕ್ಕನ್ನು ಚಲಾಯಿಸಲು ನಮೂನೆ 12ಡಿ ಅರ್ಜಿ ಅವಕಾಶ ನೀಡುತ್ತದೆ. ಇದರಿಂದ ಅವರು ಮತದಾನ ಕೇಂದ್ರಗಳಿಗೆ ಹೋಗಬೇಕಾಗಿಲ್ಲ. ಅವರು ನಮೂನೆ 12ಡಿಗೆ ಸಹಿ ಹಾಕಿದ ನಂತರ, ವೀಡಿಯೊಗ್ರಾಫರ್ ಮತ್ತು ಪೊಲೀಸ್ ಸೇರಿದಂತೆ ಅಧಿಕಾರಿಗಳ ತಂಡವು ಅವರ ಮನೆಗಳಿಗೆ ಭೇಟಿ ನೀಡಲಿದೆ” ಎಂದು ತಿಳಿಸಿದರು.

“ಹಿರಿಯ ಮತದಾರರು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರ್ ಸಮ್ಮುಖದಲ್ಲಿ ಮತ ಚಲಾಯಿಸಬಹುದು. ಇಡೀ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡುವಾಗ, ಮತದಾನದ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಒಟ್ಟು 46,927 ಮತದಾರರಲ್ಲಿ 38,294 ಮಂದಿ 80 ವರ್ಷಕ್ಕಿಂತ ಮೇಲ್ಪಟ್ಟವರು, 8,102 ಮಂದಿ 90 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 531 ಮಂದಿ 100 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ  ಮತದಾರರಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...