ದ‌.ಕನ್ನಡ | ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ!

Date:

ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ ಅಥವಾ ರ‌್ಯಾಲಿ ನಡೆಯುವುದು ಸಾಮಾನ್ಯ ಸಂಗತಿ.

ಈ ರ‌್ಯಾಲಿಗಳ ವೇಳೆ ಹಲವಾರು ಕಡೆಗಳಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ದ್ಯೋತಕವಾಗಿ ಪರಸ್ಪರರು ಸಿಹಿ ತಿಂಡಿ-ಪಾನೀಯ ಹಂಚುವುದು ಸಾಮಾನ್ಯವಾಗಿದೆ. ‌ಅದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪಮಟ್ಟಿಗೆ ವಿಚಿತ್ರ ರೀತಿಯ ಬೆಳವಣಿಗೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಂತೂರು ಎಂಬಲ್ಲಿರುವ ಭಜನಾ ಮಂದಿರವೊಂದರ ಆಡಳಿತ ಮಂಡಳಿಯವರು, ಸ್ಥಳೀಯ ಮಸೀದಿಗೆ ಪತ್ರ ಬರೆದಿದ್ದಾರೆ. ‌ಈ ಪತ್ರದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯ ವೇಳೆ ನಿಮ್ಮ ಸಮುದಾಯ(ಮುಸ್ಲಿಮರು)ದವರು ತಿಂಡಿ-ತಿನಿಸು ನೀಡಬೇಡಿ ಎಂದು ತಿಳಿಸಿದ್ದಾರೆ. ಅಲ್ಲದೇ, ಕಳೆದ ವರ್ಷ ನೀವು ನೀಡಿದ್ದ ಸಿಹಿ ತಿಂಡಿಯನ್ನು ಸೇವಿಸಿದ್ದ ಹಿಂದೂ ಮಕ್ಕಳು ಅಸ್ವಸ್ಥರಾಗಿದ್ದರು ಎಂಬ ಅಂಶವನ್ನೂ ಕೂಡ ಉಲ್ಲೇಖಿಸಿರುವುದು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗೂ ಕಾರಣವಾಗಿದೆ. ಸದ್ಯ ಭಜನಾ ಮಂದಿರದ ಆಡಳಿತ ಮಂಡಳಿಯವರು ಮಸೀದಿಗೆ ಬರೆದಿರುವ ಪತ್ರದ ಪ್ರತಿಯು ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001603903
ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರುವ ಪತ್ರ

ಬಂಟ್ವಾಳ ತಾಲೂಕಿನ ಬೋಳಂತೂರಿನ ಸಮೀಪ ಇರುವ ತುಳಸೀವನ ಶ್ರೀ ಸಿದ್ದಿ ವಿನಾಯಕ ಭಜನಾ ಮಂದಿರವು ಈ ಪತ್ರವನ್ನು ಸ್ಥಳೀಯ ಮಸೀದಿಯ ಆಡಳಿತ ಕಮಿಟಿಗೆ ಕಳೆದ ಗುರುವಾರ(ಸೆ.5)ರಂದು ತಲುಪಿಸಿರುವುದಾಗಿ ತಿಳಿದು ಬಂದಿದೆ.

ವೈರಲಾಗಿರುವ ಪತ್ರದಲ್ಲಿ, “ಕಳೆದ ವರ್ಷದ ಸಾರ್ವಜನಿಕ ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಪಾನೀಯ ಮತ್ತು ಸಿಹಿತಿಂಡಿ ವಿತರಣೆಯನ್ನು ತಮ್ಮ ಸಮಾಜ ಬಾಂಧವರು ನೀಡಿರುತ್ತಾರೆ. ಅದನ್ನು ಸ್ವೀಕರಿಸಿದ ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿರುತ್ತಾರೆ. ಇದರಿಂದ ನಮ್ಮ ಸಾಮರಸ್ಯ ಕೆಡುತ್ತದೆ. ಇದರ ಮುಂಜಾಗ್ರತೆಗಾಗಿ ತಮ್ಮಲ್ಲಿ ಮನವಿ ಮಾಡುವುದೇನೆಂದರೆ, ಇನ್ನು ಮುಂದಕ್ಕೆ ಶೋಭಾ ಯಾತ್ರೆಯಲ್ಲಿ ತಮ್ಮ ಸಮಾಜ ಬಾಂಧವರು ಯಾವುದೇ ಪಾನೀಯ ಹಾಗೂ ತಿಂಡಿ ತಿನಸುಗಳನ್ನು ನೀಡಬಾರದಾಗಿ ಈ ಮೂಲಕ ವಿನಂತಿಸುತ್ತೇವೆ. ಆದ್ದರಿಂದ ನಮ್ಮ ಶೋಭಾಯಾತ್ರೆಗೆ ನಿಮ್ಮ ಎಲ್ಲಾ ಸಮಾಜ ಬಾಂಧವರು ಮೇಲಿನ ವಿಷಯಕ್ಕೆ ಸಹಕರಿಸುವಂತೆ ನಿಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತೇವೆ” ಎಂದು ಉಲ್ಲೇಖಿಸಲಾಗಿದೆ.

ಈ ಬೆಳವಣಿಗೆಯ ಬಗ್ಗೆ ಈ ದಿನ.ಕಾಮ್ ಮಾಹಿತಿ ಸಂಗ್ರಹಿಸಲು ಯತ್ನಿಸಿತು. ಈ ಪತ್ರ ಬಂದಿರುವುದನ್ನು ದೃಢಪಡಿಸಿರುವ ಸ್ಥಳೀಯ ಮಸೀದಿ ಕಮಿಟಿಯ ಅಧ್ಯಕ್ಷರಾದ ಮುಹಮ್ಮದ್ ಅವರು, “ಪತ್ರ ಕಳೆದ ಗುರುವಾರ ನಮ್ಮ ಮಸೀದಿಗೆ ಬಂದಿದೆ. ನಾವು ಕಳೆದ ವರ್ಷ ಮಸೀದಿ ಕಮಿಟಿಯ ವತಿಯಿಂದ ಯಾವುದೇ ತಿಂಡಿಯಾಗಲೀ, ಪಾನೀಯವಾಗಲೀ ಶೋಭಾಯಾತ್ರೆಯ ವೇಳೆ ನೀಡಿರಲಿಲ್ಲ. ಊರಿನ ಕೆಲವು ಯುವಕರು ತಮ್ಮ ಕೈಯಿಂದ ಹಣ ಹಾಕಿ, ಐಸ್ ಕ್ರೀಂ ಹಾಗೂ ತಂಪು ಪಾನೀಯದ ವ್ಯವಸ್ಥೆ ಮಾಡಿದ್ದರು” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

ಕಳೆದ ವರ್ಷ ನೀಡಿದ್ದ ತಿಂಡಿ ತಿನಿಸುಗಳು ತಿಂದ ಬಳಿಕ ಹಿಂದೂ ಸಮುದಾಯದ ಮಕ್ಕಳು ಅಸ್ವಸ್ಥರಾಗಿದ್ದ ವಿಚಾರ ಏನಾದರೂ ಮಸೀದಿಯವರ ಗಮನಕ್ಕೆ ತಂದಿದ್ದರೇ ಎಂದು ಕೇಳಿದಾಗ, “ಇಲ್ಲ. ನಮಗೆ ಯಾವುದೇ ಮಾಹಿತಿ ಭಜನಾ ಮಂದಿರದ ಕಡೆಯಿಂದಾಗಲೀ, ಅಸ್ವಸ್ಥರಾಗಿದ್ದರು ಎನ್ನಲಾಗಿರುವ ಮಕ್ಕಳ ಪೋಷಕರಾಗಲೀ ತಿಳಿಸಿಲ್ಲ. ಈಗ ಪತ್ರದ ಬಂದಿದೆ. ಅದಕ್ಕೆ ನಾವು ಯಾವುದೇ ಉತ್ತರ ನೀಡಿಲ್ಲ. ಅದರಲ್ಲಿ ನಮಗೆ ಆಸಕ್ತಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಭಜನಾ ಮಂದಿರದ ಈ ನಿರ್ಧಾರದ ಹಿಂದೆ ಸ್ಥಳೀಯ ಬಜರಂಗದಳ ಹಾಗೂ ಸಂಘಪರಿವಾರದ ನಾಯಕರ ಕೈವಾಡ ಇರುವ ಆರೋಪ ಕೂಡ ಕೇಳಿಬಂದಿದೆ. ಈ ಪತ್ರವು ಕರಾವಳಿಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇದು ಸೌಹಾರ್ದ ವಾತಾವರಣ ಸೃಷ್ಟಿಸುವುದನ್ನು ತಡೆಯುವ ಪ್ರಯತ್ನವಾಗಿದೆ ಎಂದು ಜನರು ಸಾಸಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...