ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

Date:

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧಿಸಿದ್ದು, ಹೋಂಗಾರ್ಡ್‌ಗಳು ವಾಪಸ್‌ ಕಳುಹಿಸುತ್ತಿದ್ದಾರೆ‌.

ಬುಧವಾರ ನಸುಕಿನಿಂದ ಚಂಡಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್ ಗಾತ್ರದ ಅಲೆಗಳು ಸಮುದ್ರದ ಅಂಚಿಗೆ, ಬಂಡೆ ಕಲ್ಲುಗಳಿಗೆ ಬಹುವೇಗವಾಗಿ ಅಪ್ಪಳಿಸುತ್ತಿವೆ. ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ನ, ಕೈಕೋ, ಹಿಲೆರಿಯಾನಗರ, ಸುಭಾಷನಗರ, ಕೈಕೊ, ಸಮ್ಮರ್ ಸ್ಯಾಂಡ್, ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಸಮುದ್ರ ತೀರದ ಜನರಿಗೆ ಸ್ಥಳೀಯ ಆಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ʼಬಿಪರ್‌ಜಾಯ್ʼ ಚಂಡಮಾರುತ ಆರಂಭ; ರಾಜ್ಯದಲ್ಲಿ ಮುಂಗಾರು ವಿಳಂಬ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಠಾಣಾ ಪೊಲೀಸರು, ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು, ಸಮುದ್ರ ತೀರಕ್ಕೆ ಬರುವ ಪ್ರವಾಸಿಗರನ್ನು ವಾಪಸ್‌ ಕಳುಹಿಸಲಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ರೂಪುಗೊಳ್ಳುತ್ತಿರುವ ಬಿಪರ್‌ಜಾಯ್ ಚಂಡಮಾರುತ, ಉತ್ತರ ದಿಕ್ಕಿನತ್ತ ಚಲಿಸಿದರೆ ಗೋವಾ, ಮುಂಬೈ ಕರಾವಳಿಗೆ ಅಪ್ಪಳಿಸಲಿದೆ. ಜತೆಯಲ್ಲೇ ಕೇರಳದಿಂದ ಮಹಾರಾಷ್ಟ್ರದ ಸಾಗರ ತೀರದ ಉದ್ದಕ್ಕೂ ಭಾರೀ ಮಳೆ ಆಗಲಿದೆ. ಕರ್ನಾಟಕದ ಕರಾವಳಿಯಲ್ಲಿ ಜೂನ್ 8ರಿಂದ ಜೂನ್ 10ರವರೆಗೆ ಪ್ರಕ್ಷುಬ್ಧ ವಾತಾವರಣ ಇರಲಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...