ದಕ್ಷಿಣ ಕನ್ನಡ | ಕೋಮು ರಾಜಕಾರಣ ನಮ್ಮದಲ್ಲ; ಕೋಮು ರಾಜಕಾರಣದ ವಿರುದ್ಧ ಧ್ವನಿ ಎತ್ತಿದ ಕರಾವಳಿ ಬ್ರಾಹ್ಮಣ ಸಮುದಾಯ

Date:

ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ, ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ ವಿರುದ್ಧ ಧ್ವನಿಯೆತ್ತಿದ್ದಾರೆ.

ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ, ಇತ್ತೀಚಿನ ವರ್ಷಗಳಿಂದ ಬಿಜೆಪಿ ಬ್ರಾಹ್ಮಣ ನಾಯಕತ್ವಕ್ಕೆ ಮಣೆ ಹಾಕಿದ್ದು ಹೆಚ್ಚು.‌ ಇದು ಬ್ರಾಹ್ಮಣ ಸಮುದಾಯ ಬಿಜೆಪಿಯತ್ತವಾಲಲು ಮುಖ್ಯ ಕಾರಣವಾಗಿತ್ತು.

ಬಿಜೆಪಿಯೇತರ ಪಕ್ಷದ ಬ್ರಾಹ್ಮಣ ಸಮುದಾಯದ ಮುಖಂಡರು, ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸುವ ರಾಜಕೀಯ ತಂತ್ರಗಾರಿಕೆ ಕೂಡ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ನಡೆದಿತ್ತು. ಇಂತಹ ಧೋರಣೆಗಳಿಗೆ, ಬೆದರಿಕೆಗಳಿಗೆ ಉತ್ತರ ನೀಡುವ ಸಲುವಾಗಿ ಈ ಸಭೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ ಸಭೆ ಸೇರಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಾಹ್ಮಣರೆಲ್ಲರೂ ಬಿಜೆಪಿಗರು, ಬಿಜೆಪಿಗೆ ಬೆಂಬಲಿಸದವರು ಬ್ರಾಹ್ಮಣರೇ ಅಲ್ಲ ಹಿಂದೂಗಳೇ ಅಲ್ಲ ಎಂಬಂತ ಬೆದರಿಕೆಯ ಸ್ವರೂಪದ ಪ್ರಚಾರದ ವಿರುದ್ಧ ಅಭಿಪ್ರಾಯ ರೂಪಿಸುವ ನಿರ್ಣಯವನ್ಮು ಈ ಸಭೆ ಕೈಗೊಂಡಿದೆ.

ಕೋಮುವಾದವನ್ನೇ ಬಂಡವಾಳವಾಗಿಸಿಕೊಂಡಿರುವ ಕರಾವಳಿಯ ರಾಜಕೀಯ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ಇದೊಂದು ಹೊಸ ಆಶಾದಾಯಕ ಬೆಳವಣಿಗೆಯಾಗಿದೆ.

ಬಡ ಬ್ರಾಹ್ಮಣರಿಗೆ ನೆರವು

ಬಡತನದಲ್ಲಿರುವ ಬ್ರಾಹ್ಮಣರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ  ತಲುಪಿಸುವ ಯೋಜನೆ ರೂಪಿಸಲೂ ಕೂಡ ಈ ಚಿಂತನ ಮಂಥನ ಸಭೆ  ನಿರ್ಧರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬ್ರಾಹ್ಮಣ ಸಮಾಜದ ಪ್ರಭಾವಿ ನಾಯಕ ಶ್ರೀಧರ ಭಿಡೆ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

ಬ್ರಾಹ್ಮಣರು ದೇಶದ ಸಮಗ್ರ ಜನರನ್ನೂ ಪ್ರೀತಿಸುವ ಮತ್ತು ಸಮಾಜದ ಸುಧಾರಣೆಯ ನಾಯಕತ್ವವನ್ನು ವಹಿಸಿದವರು. ಹಿಂದೂ ಮುಸ್ಲಿಂ ಸಂತ ಪರಂಪರೆಯನ್ನು ಬೆಳೆಸಿದವರು.ಈ ಕಾಲಘಟ್ಟದಲ್ಲಿ ಕೂಡ ಎಲ್ಲರ ಜೊತೆಗೆ ಹೆಜ್ಜೆ ಹಾಕುವ ಹೃದಯ ವೈಶಾಲಿಗಳು ಎಂದು ಸಭೆಯಲ್ಲಿ ಅಭಿಪ್ರಾಯ ಪಟ್ಟರು. ಕರಾವಳಿಯಲ್ಲಿ  ‌ಬ್ರಾಹ್ಮಣರು ಒಂದೇ ಪಕ್ಷಕ್ಕೆ ಸೀಮಿತಗೊಂಡವರಲ್ಲ ಎಂಬುದನ್ನು ಈ ಸಭೆಯ ಮೂಲಕ ನಿರೂಪಿಸುತ್ತಿದ್ದೇವೆ ಎಂದು ಶ್ರೀಧರ ಭಿಡೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಖ್ಯಾತ ಚಿಂತಕ ಪ್ರೊ. ರಾಜಾರಾಮ ತೋಳ್ಪಾಡಿ ಅವರು ಮಾತನಾಡಿ, ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ಬರುತ್ತಿರುವಾಗ ಸಮಾನ ಮನಸ್ಕ ಬ್ರಾಹ್ಮಣರು ಈ ನಿಟ್ಟಿನಲ್ಲಿ ತಮ್ಮ ಸಮುದಾಯಕ್ಕೆ ಸತ್ಯ ಸಂದೇಶ ತಿಳಿಸುವ   ಕಾರ್ಯ ನಡೆಸಬೇಕಾಗಿದೆ ಎಂದರು.

ಬ್ಯಾಂಕ್ ನೌಕರ ಸಂಘದ ಹಿರಿಯ ನಾಯಕ ಟಿ .ಆರ್.ಭಟ್ ಮಾತನಾಡಿ, ಬ್ರಾಹ್ಮಣರೆಲ್ಲರೂ ನಿರ್ದಿಷ್ಟ ಸಿದ್ದಾಂತ ಮತ್ತು ಪಕ್ಷಕ್ಕೇ ಸೇರಬೇಕು ಅಥವಾ ಸೇರಿದ್ದಾರೆ ಎಂಬ ನಿಲುವಿನ ವಿರುದ್ದ ನಾವು ಮಾತನಾಡಲೇಬೇಕು. ದೇಶದ ಆಗುಹೋಗುಗಳ ಬಗ್ಗೆ ಭಿನ್ನಾಭಿಪ್ರಾಯ, ನಿಜ ಅಭಿಪ್ರಾಯ ವ್ಯಕ್ತಪಡಿಸುವ ಪರಿಸ್ಥಿತಿಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಸಂಘಟಕ ಎಂ.ಜಿ. ಹೆಗಡೆ ಮಾತನಾಡಿ, ಬಿಜೆಪಿ ಮತ್ತು ಕೋಮು ಸಂಘಟನೆಗಳಿಗೆ ಬೆಂಬಲಿಸದ ಬ್ರಾಹ್ಮಣರಿಗೆ ಕಿರುಕುಳ ನೀಡುವಂತಹ, ಹೀಯಾಳಿಸುವ, ವ್ಯವಹಾರಿಕವಾಗಿ ತೊಂದರೆ ಕೊಡುವ ಭಯದ ವಾತಾವರಣ ಕರಾವಳಿಯಲ್ಲಿ ಇದೆ. ಬ್ರಾಹ್ಮಣ ಸಮುದಾಯದವರೆಲ್ಲ ಒಂದೇ ಪಕ್ಷವನ್ನು ಬೆಂಬಲಿಸಬೇಕೆಂಬ ಬೆದರಿಕೆ ಧೋರಣೆಯ ವಿರುದ್ಧ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದರು.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬ್ರಾಹ್ಮಣರಿಗೆ ಸರ್ಕಾರದ  ಸವಲತ್ತು ಸಿಗುವಂತೆ ಸಮುದಾಯದ ಮುಖಂಡರೆಲ್ಲರೂ ಜೊತೆಯಾಗಿ ಕೆಲಸ ಮಾಡಲಿದ್ದೇವೆ ಎಂದು ಎಂ.ಜಿ.ಹೆಗಡೆ ತಿಳಿಸಿದರು.

ಸಭೆಯಲ್ಲಿ ಸುರತ್ಕಲ್‌ನ ಹಿರಿಯ ಮುಂದಾಳು ಗುರುರಾಜ ಆಚಾರ್ಯ, ಬೆಟ್ಟ  ರಾಜಾರಾಮ ಭಟ್, ಮಹೇಶ ಕುಮಾರ ಸುಳ್ಯ, ಸತ್ಯೇಂದ್ರ ವೇಣೂರು, ಡಾ.ಶಿವಾನಂದ ಮುಂಡಾಜೆ, ರಮೇಶ ಕೋಟೆ, ಕೆ. ರಾಘವೇಂದ್ರ, ವಿನಯ ಆಚಾರ್ಯ, ಬೆಟ್ಟ ಜಯರಾಮ ಭಟ್, ದಿನೇಶ್ ರಾವ್, ಬಾಲಕೃಷ್ಣ ಭಟ್, ಕೆಮ್ಮಟ್ಟು ಸ್ವರ್ಣ ಭಟ್, ವಕೀಲೆ ವಿಧ್ಯಾ ಭಟ್, ನಮಿತಾ ರಾವ್, ಚೈತನ್ಯ ಭಟ್, ಪ್ರವೀಣ ಭಟ್ ಪುತ್ತೂರು ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...