ದಕ್ಷಿಣ ಕನ್ನಡ | ಗುತ್ಯಡ್ಕ ಗ್ರಾಮಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದ ಡಿಸಿ

Date:

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ಯಡ್ಕ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಆಲಿಸಿದರು.

“ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಹಾಗೂ ಪ್ರಸಿದ್ಧ ಚಾರಣ ತಾಣವಾದ ನೇತ್ರಾವತಿ ಬಿಂದುವಿನ ನಡುವೆ ಸಂಪರ್ಕ ಕಲ್ಪಿಸುವ ಎಳನೀರು–ಗುತ್ಯಡ್ಕ–ಕುರ್ಚಾರು ರಸ್ತೆಯು ಸುಮಾರು 11 ಕಿಮೀಗಳಷ್ಟಿದೆ. ಈ ಗ್ರಾಮಗಳ ಸುಮಾರು  80 ಕುಟುಂಬಗಳು ಸಂಪರ್ಕಕ್ಕೆ ಈ ರಸ್ತೆಯನ್ನೇ ಅವಲಂಬಿಸಿವೆ” ಎಂದು ಗುತ್ಯಡ್ಕ ಗ್ರಾಮಸ್ಥರು ಹೇಳಿದರು.

ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹಿಸಿದ ಗ್ರಾಮಸ್ಥರು, “ಸರ್ಕಾರವು ಅಭಿವೃದ್ಧಿ ವಿಚಾರದಲ್ಲಿ ಅನ್ಯಾಯ ಧೋರಣೆ ಅನುಸರಿಸುತ್ತಿದೆ” ಎಂದು ಆರೋಪಿಸಿ ಗುತ್ಯಡ್ಕ ಗ್ರಾಮಸ್ಥರು ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಲ್ಲೈ ಮುಗಿಲನ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಲೆಯಲ್ಲಿರುವ ಗುತ್ಯಡ್ಕಕ್ಕೆ ಭೇಟಿ ನೀಡಿದ ಮೊದಲ ಜಿಲ್ಲಾಧಿಕಾರಿ. ಎಳನೀರು– ಗುತ್ಯಡ್ಕ–ಕುರ್ಚಾರು ರಸ್ತೆಯ ಕಾಂಕ್ರೀಟ್‌ನ ಅಡಿಯ ಮಣ್ಣು ಕೊಚ್ಚಿಹೋಗಿದೆ. ಮುಂಬರುವ ಮಳೆಗಾಲದಲ್ಲಿ ಇಲ್ಲಿ ಭೂಕುಸಿತ ಉಂಟಾಗುವ ಅಪಾಯವಿದೆ” ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ತಿಳಿಸಿದರು.

“ಈ ರಸ್ತೆಯಲ್ಲಿ ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸಬೇಕಾದ ಸ್ಥಿತಿ ಎದುರಾಗಿದೆ” ಎಂದು ಸ್ಥಳೀಯರು ಜಿಲ್ಲಾಧಿಕಾರಿ ಬಳಿ ಅಳಲು ತೋಡಿಕೊಂಡರು.

ರಸ್ತೆಯ ತಳಭಾಗದ ಮಣ್ಣು ಕೊಚ್ಚಿ ಹೋದ ಪ್ರದೇಶಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ, “ದಯವಿಟ್ಟು ಮತದಾನ ಬಹಿಷ್ಕರಿಸಬೇಡಿ. ಅಧಿಕಾರಿಗಳು ಪರಿಶೀಲನೆ ನಡೆಸಿ ಗ್ರಾಮಸ್ಥರ ಬೇಡಿಕೆ ಈಡೇರಿಸಲು ಅಗತ್ಯ ಕ್ರಮವಹಿಸಲಿದ್ದಾರೆ” ಎಂದು ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೇರಿ ಕಿತ್ತ ಬಿಜೆಪಿ ರಾಜ್ಯ ಸಂಯೋಜಕ

ಇದಕ್ಕೂ ಮುನ್ನ ಜಿಲ್ಲಾಧಿಕಾರಿಯವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್‌, ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ, ಬೆಳ್ತಂಗಡಿಯ ತಹಸೀಲ್ದಾರ್‌ ಪೃಥ್ವಿ ಸಾನಿಕಂ ಸೇರಿದಂತೆ ಇತರ ಅಧಿಕಾರಿಗಳ ಜೊತೆ ನಾರಾವಿ ತಪಾಸಣಾ ಠಾಣೆ, ಕಜಕೆ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ತಯಾರಿಗಳ ಪರಿಶೀಲನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...