ದಕ್ಷಿಣ ಕನ್ನಡ | ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆ ನಡೆಸಲು ನಿರ್ಧಾರ: ಡಿಸಿಪಿ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.

ಭಾನುವಾರ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಈಗಾಗಲೇ ನಗರ ಪೊಲೀಸ್ ಆಯುಕ್ತರ ಕಚೇರಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸಭೆಗಳು ನಡೆಯುತ್ತಿವೆ. ಅಂತೆಯೇ, ಬೀಟ್ ಸಭೆಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಆ ಸಭೆಗಳಲ್ಲಿ ಕೆಲವೇ ಜನರು ಭಾಗವಹಿಸುತ್ತಾರೆ. ಆದ್ದರಿಂದ, ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರಿಂದ ಸಮುದಾಯದ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳು ತಕ್ಷಣ ಪರಿಹರಿಸಬಹುದು” ಎಂದು ತಿಳಿಸಿದರು.

“ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್ ಇನ್ಸ್‌ಪೆಕ್ಟರ್‌ಗಳು ಸಭೆಗಳನ್ನು ನಡೆಸಲು ಕಾಲೋನಿಗಳಿಗೆ ಭೇಟಿ ನೀಡುತ್ತಾರೆ. ಒಂದು ಕಾಲೋನಿಯಲ್ಲಿ ಬಹುತೇಕ ಪ್ರಮುಖ ಸಮಸ್ಯೆಗಳಿದ್ದರೆ, ಡಿಸಿಪಿಗಳು ಮತ್ತು ಎಸಿಪಿಗಳೂ ಕೂಡ ಸಭೆಗಳಲ್ಲಿ ಭಾಗವಹಿಸುತ್ತಾರೆ. ಆಯ್ದ ಕಾಲೋನಿಯಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಕಳೆದ ಒಂದು ವರ್ಷದಿಂದ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಎಸ್‌ಸಿ/ಎಸ್‌ಟಿ ಸಭೆಗಳ ಬಗ್ಗೆ ಸದಸ್ಯೆ ಅಮಲಾ ಜ್ಯೋತಿ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಕಂಕನಾಡಿಯ ಪ್ರೀತಿ ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ದಲಿತ ಸದಸ್ಯರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಡಿಸಿಪಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...