ದಕ್ಷಿಣ ಕನ್ನಡ | ಅಕ್ರಮಗಳನ್ನೇ ನೀತಿಯನ್ನಾಗಿಸಿದ ಬಿಜೆಪಿಯನ್ನು ಸೋಲಿಸಿ: ಬಾಲಕೃಷ್ಣ ಶೆಟ್ಟಿ

Date:

ಮೋದಿ ನೇತೃತ್ವದ ಬಿಜೆಪಿ ಸರಕಾರ ಜನ ಸಾಮಾನ್ಯರ ಆಶೋತ್ತರಗಳನ್ನೆಲ್ಲಾ ಕಡೆಗಣಿಸಿ ಚುನಾವಣಾ ಬಾಂಡ್ ಮೂಲಕ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿದೆ. ಅಕ್ರಮ ದಾರಿಗಳ ಮೂಲಕ ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚನ್ನು ರೂಪಿಸಿ, ದೇಶದಲ್ಲಿ ಅಕ್ರಮಗಳನ್ನೇ ನೀತಿಯನ್ನಾಗಿಸಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸಬೇಕೆಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಕರೆ ನೀಡಿದರು.

ಅವರು ಭಾನುವಾರ ಮಂಗಳೂರಿನ ನಾಸಿಕ್ ಬಂಗೇರ ಸಭಾಭವನದಲ್ಲಿ ನಡೆದ ಪ್ರಜಾಪ್ರಭುತ್ವ ಜಾತ್ಯಾತೀತತೆಯ ಉಳಿವಿಗಾಗಿ ಮತ್ತು ದ.ಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ನಡೆದ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಬಂಡವಾಳಶಾಹಿಗಳ ಜೊತೆ ಅಪವಿತ್ರ ಮೈತ್ರಿಯ ಮೂಲಕ ದೇಶದ ಸಾರ್ವಜನಿಕ ಸಂಪತ್ತುಗಳನ್ನು ಕಾರ್ಪೊರೇಟ್ ‌ಕಂಪನಿಗಳಿಗೆ ಮಾರಿದ್ದಲ್ಲದೆ, ಇದ್ದ ಕಾರ್ಮಿಕ ಪರ ನೀತಿಗಳನ್ನು ರದ್ದುಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಗಳನ್ನು ಜಾರಿಗೊಳಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಷಕ್ಕೆರಡು ಕೋಟಿ ಉದ್ಯೋಗಗಳ ಸೃಷ್ಟಿಸುವ ಭರವಸೆಯನ್ನು ಈವರೆಗೂ ಈಡೇರಿಸಲು ಸಾಧ್ಯವಾಗಿಲ್ಲ. ಉದ್ಯೋಗಳನ್ನು ಕಳಕೊಂಡು ಬೀದಿಗೆ ಬರುವಂತಹ ಆರ್ಥಿಕ ನೀತಿಗಳನ್ನು ಜಾರಿಗೊಳಿಸಿರುವುದೇ ಬಿಜೆಪಿ ಆಡಳಿತದ ಸಾಧನೆ. ದೇಶ ದಿವಾಳಿಗೊಂಡು ಜನ ಬದುಕಲು ಸಂಕಷ್ಟಪಡುತ್ತಿರುವ ಈ ಕಾಲದಲ್ಲಿ ಬಿಜೆಪಿಗೆ ಈ ಚುನಾವಣೆಯಲ್ಲೂ ಸೋಲಾಗದಿದ್ದಲ್ಲಿ, ಈ ದೇಶದ ಜನಸಾಮಾನ್ಯರ ಬದುಕು ಸೋಲಲಿದೆ, ಜನರ ಬದುಕು ಅವರ ಆಶೋತ್ತರಗಳು ಗೆಲ್ಲಬೇಕಾದರೆ ಬಿಜೆಪಿ ಸೋಲಲೇ ಬೇಕಾಗಿದೆ ಎಂದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡುತ್ತಾ, ದೇಶದಲ್ಲಿ ದ್ವೇಷವನ್ನೇ ಬಿತ್ತುವ ಮೂಲಕ ಮತೀಯ ರಾಜಕಾರಣ ಮಾಡಿದ್ದಲ್ಲದೆ, ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿರೋಧಿಯಾಗಿ ವರ್ತಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ದೀರ್ಘಾವಧಿಯಿಂದ ಗೆಲ್ಲುತ್ತಾ ಬರುತ್ತಿರುವ ಬಿಜೆಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಯಾವೊಂದು ಕೊಡುಗೆ ನೀಡಲೂ ಸಾಧ್ಯವಾಗಿಲ್ಲ ಎಂದರು.

ಜಿಲ್ಲೆಯ ಅಭಿವೃದ್ಧಿಯ ಕಡೆಗಣನೆಗೆ ಹಿಂದಿನ ಸಂಸದ ನಳಿನ್ ಕುಮಾರ್ ಕಟೀಲೊಬ್ಬರೇ ಹೊಣೆಯಲ್ಲ ಅದಕ್ಕೆಲ್ಲಾ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂಪೂರ್ಣ ಹೊಣೆಹೊರಬೇಕು. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಯುವಜನರನ್ನು ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿನಿಂದ ವಂಚಿಸಿದ್ದಲ್ಲದೆ ಮತೀಯ ರಾಜಕಾರಣದ ಕಾಲಾಳುಗಳಾಗಿ ಬಳಸಿ ಬಲಿಪಡೆದಿರುವುದು ಈ ಜಿಲ್ಲೆಯ ಬಿಜೆಪಿ ಪಕ್ಷ ಮತ್ತು ಆರ್‌ಎಸ್‌ಎಸ್ ಎಂದು ಹೇಳಿದರು.

ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ರಾಜಕೀಯ ಸಮಾವೇಶದ ಅಧ್ಯಕ್ಷತೆಯನ್ನು ಭಾರತಿ ಬೋಳಾರ ವಹಿಸಿದ್ದರು. ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ರಾಜಕೀಯ ಸಮಾವೇಶದ ನೇತೃತ್ವ ವಹಿಸಿ ನಿರೂಪಿಸಿದರು ಹಾಗೂ ಪ್ರದೀಪ್ ಕುಲಾಲ್ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...