ದಕ್ಷಿಣ ಕನ್ನಡ | ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ: ಸಚಿವ ದಿನೇಶ್‌ ಗುಂಡೂರಾವ್

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೇವಸ್ಥಾನ, ಮಸೀದಿ, ಚರ್ಚ್ ಗಳ ಧಾರ್ಮಿಕ ಮುಖಂಡರು ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳಲ್ಲಿ ಜನರಿಗೆ ಸಾಧ್ಯವಾದಷ್ಟು ತಿಳಿವಳಿಕೆ ನೀಡಬೇಕು. ಜತೆಗೆ ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದರು.

ನಗರದ ನೆಹರೂ ಮೈದಾನದಲ್ಲಿ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, “ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೂ ನಮನ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ” ಎಂದರು.

“ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ವ್ಯಕ್ತಿಗಳ ಆದರ್ಶ ನಮ್ಮ ಯುವಪೀಳಿಗೆಯಲ್ಲಿ ಆದರ್ಶವಾಗಬೇಕು. ನಮ್ಮ ದೇಶ ಚೈತನ್ಯಯುತ ಅಭಿವೃದ್ಧಿ ಶೀಲ ರಾಷ್ಟ್ರವಾಗಬೇಕಾದರೆ ನಮ್ಮಲ್ಲಿ ಭಾರತೀಯತೆ, ದೇಶದ ಭವ್ಯತೆ-ದಿವ್ಯತೆ ಮತ್ತು ಪಾವಿತ್ರ್ಯತೆಗಳ ಅರಿವು, ದೇಶಪ್ರೇಮ, ದೇಶಭಕ್ತಿ ಉಕ್ಕಿ ಹರಿಯಬೇಕು. ಜಿಲ್ಲೆಯಲ್ಲಿ ಯಾವುದೇ ಬಾಹ್ಯ ಒತ್ತಡಕ್ಕೆ ಅವಕಾಶವಿಲ್ಲದೇ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೋಲಿಸ್ ಇಲಾಖೆಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಕೋಮು ಪ್ರಕರಣಗಳ ಮೂಲವನ್ನು ಅರಿಯಲು ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳ ಮುಖಂಡರೊಂದಿಗೆ ಶಾಂತಿ ಸೌಹಾರ್ದ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಮೂಡಿಬಂದ ಒಮ್ಮತದ ಅಭಿಪ್ರಾಯದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಈ ವೇಳೆ ಪೊಲೀಸ್‌ ತಂಡಗಳು, ಸಶಸ್ತ್ರ ಮೀಸಲು ಪಡೆ, ಕೆಎಸ್ಆರ್‌ಪಿ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್‌, ಭಾರತ ಸೇವಾ ದಳ ವಿದ್ಯಾರ್ಥಿಗಳ ಶಿಸ್ತಿನ ಪಥ ಸಂಚಲನ ನಡೆಸಿದರು.

ಈ ಸಂದರ್ಭದಲ್ಲಿ ಸಂಸದ ಕ್ಯಾ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ, ಮಾಜಿ ಸದಸ್ಯ ಹರೀಶ್ ಕುಮಾ‌ರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ, ಐಜಿಪಿ ಅಮಿತ್ ಸಿಂಗ್, ಎಸ್ಪಿ ಡಾ. ಅರುಣ್ ಕುಮಾರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ್ ನರ್ವಾಡೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...