ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

Date:

ಬೋಳಿಯಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯ ಅವ್ಯವಸ್ಥೆ‌ಯನ್ನು ಸರಿಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ಕಾರ್ಯಕರ್ತರು ಬೋಳಿಯಾರ್ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು.

“ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ(ಕರಿಸಾಲೆ)ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು, ಬೀಳುವ ಸ್ಥಿತಿಯಲ್ಲಿದೆ. ಪಕ್ಕದಲ್ಲೇ ಕಾರ್ಯಾಚರಿಸುತ್ತಿರುವ ಅಂಗನವಾಡಿಯಲ್ಲಿರುವ ಪುಟ್ಟ ಪುಟ್ಟ ಮಕ್ಕಳು ಆವರಣದ ಗೋಡೆ ಕುಸಿಯುವ ಭೀತಿಯಲ್ಲಿಯೇ ಕೂತು ಪಾಠ ಕೇಳಬೇಕಾಗಿದೆ. ಅಂಗನವಾಡಿ ಕಟ್ಟಡದ ಗೋಡೆಯೂ ಕೂಡ ಬಿರುಕು ಬಿಟ್ಟಿದ್ದು, ಕುಸಿಯುವ ಭೀತಿ ಎದುರಾಗಿದೆ. ಜನಪ್ರತಿನಿಧಿಗಳಿಗೆ ವಿವರವಾಗಿ ತಿಳಿಸಿದರೂ ಚಕಾರ ಎತ್ತುತ್ತಿಲ್ಲ” ಎಂದು ಆರೋಪಿಸಿದರು. ‌

ಬೋಳಿಯಾರ್

“ಜಿಲ್ಲೆಯಲ್ಲಿ ಈಗಾಗಲೇ ಗೋಡೆ ಬಿದ್ದಿರುವ ಹಲವಾರು ಘಟನೆಗಳು ನಡೆದು ಹೋಗಿ ಜೀವಹಾನಿ ಸಂಭವಿಸಿದೆ. ಸ್ಥಳೀಯ ಶಾಸಕರು ಚುನಾವಣೆ ಸಂದರ್ಭದಲ್ಲಿ ಮತದಾನ ಮಾಡಲು ಬರುವ ಶಾಲೆ ಇದಾಗಿದೆ. ಶಾಲೆಯ ಸಮೀಪದಲ್ಲಿಯೇ ಶಾಸಕರ ಶಾಶ್ವತ ವಿಳಾಸದ ಮನೆಯೂ ಇದೆ. ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಕಾರ್ಯಾಚರಿಸುತ್ತಿರುವ ಈ ಶಾಲೆಯ ಗೋಡೆಗಳು ಬಿರುಕು ಬಿಟ್ಟಿರುವುದರಿಂದ ಮಳೆಗಾಲದಲ್ಲಿ ಮಳೆನೀರು ಸೋರುತ್ತಿರುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೋಳಿಯಾರ್‌ನ ಜಾರದಗುಡ್ಡೆ ಅಂಗನವಾಡಿ

“ಮಳೆನೀರಿನಿಂದ ಗೋಡೆ ತೋಯ್ದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಕಾರಣಕ್ಕಾಗಿ ಶಾಲೆಯ ಒಂದು ಕಟ್ಟಡದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಇಷ್ಟೆಲ್ಲ ಅವ್ಯವ್ಯಸ್ಥೆಯಿಂದ ಕೂಡಿದ ಈ ಶಾಲೆಯನ್ನು ಸರಿಪಡಿಸಲು ಸ್ಥಳೀಯ ಜನಪ್ರತಿನಿಧಿಗಳು ಮುಂದೆ ಬಾರದ ಕಾರಣ ಶಾಲೆಯು ಬಂದಾಗುವ ಭೀತಿ ಎದುರಾಗಿದೆ. ಹಾಗಾಗಿ ಸರ್ಕಾರಿ ಶಾಲೆ‌ ಉಳಿಸುವ ದೃಷ್ಟಿಯಿಂದ ಶಾಲೆಯಲ್ಲಿರುವ ಎಲ್ಲ ಅವ್ಯವಸ್ಥೆಗಳನ್ನು ಸರಿಪಡಿಸಬೇಕು” ಎಂದು ಡಿವೈಎಫ್‌ಐ ಕಾರ್ಯಕರ್ತರು ಆಗ್ರಹಿಸಿದರು.

ಬೋಳಿಯಾರ್‌ನ ಜಾರದಗುಡ್ಡೆ ಅಂಗನವಾಡಿ 1

ಈ ಸುದ್ದಿ ಓದಿದ್ದೀರಾ? ಕೋಲಾರ | ವಕ್ಕಲೇರಿ ಶಾಲೆಯ ವಿದ್ಯಾರ್ಥಿಗಳಿಗೆ ಹೋಂಡಾ ಕಂಪೆನಿಯಿಂದ ನೋಟ್ ಬುಕ್, ಬ್ಯಾಗ್ ವಿತರಣೆ

ನಿಯೋಗದಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ, ಉಪಾಧ್ಯಕ್ಷ ರಝಾಕ್ ಮುಡಿಪು, ಮುಖಂಡರಾದ ಇರ್ಫಾನ್ ಇರಾ, ಸಾಮಾಜಿಕ ಕಾರ್ಯಕರ್ತ ಶಮೀರ್, ಸ್ಥಳೀಯರಾದ ಫಯಾಜ್, ರಫೀಕ್, ಸಲಾಮ್ ಜಾರದಗುಡ್ಡೆ, ಬಾಪು ಅಮ್ಮೆಂಬಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...