ದಕ್ಷಿಣ ಕನ್ನಡ | ಸೇತುವೆ ಮುಚ್ಚಿ ಎರಡು ವರ್ಷ ಕಳೆದರೂ ದುರಸ್ತಿ, ನಿರ್ಮಾಣ ಪ್ರಕ್ರಿಯೆ ನಡೆಸಿಲ್ಲ: ಮುನೀರ್‌ ಕಾಟಿಪಳ್ಳ ಆರೋಪ

Date:

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಉಡುಪಿ ಜಿಲ್ಲೆಯ ಕಾಪು ತಾಲೂಕುಗಳ ಗಡಿಯಲ್ಲಿರುವ ಪಲಿಮಾರು ಹಾಗೂ ಬಳ್ಕುಂಜೆ ಗ್ರಾಮಗಳಿಗೆ ಕೊಂಡಿಯಾಗಿ ಶಾಂಭವಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯನ್ನು ಸಂಚಾರಕ್ಕೆ ಮುಚ್ಚಿ ಎರಡು ವರ್ಷ ಕಳೆದರೂ ದುರಸ್ತಿಯನ್ನೂ ನಡೆಸಿಲ್ಲ, ಹೊಸ ಸೇತುವೆ ನಿರ್ಮಾಣದ ಪ್ರಕ್ರಿಯೆಯೂ ಆರಂಭಗೊಂಡಿಲ್ಲ ಎಂದು ಮುನೀರ್ ಕಾಟಿಪಳ್ಳ ಆರೋಪ ವ್ಯಕ್ತಪಡಿಸಿದರು.

ಈ ಬಗ್ಗೆ ಪತ್ರಿಕೆ ಪ್ರಕಟಣೆ ಹೊರಡಿಸಿರುವ ಅವರು, “ಅಕ್ರಮ ಮರಳುಗಾರಿಕೆಯಿಂದಲೋ, ಇನ್ನೇನೋ ಕಾರಣದಿಂದಲೋ ಈ ಸೇತುವೆ ದುರ್ಬಲಗೊಂಡಿದೆ ಎಂಬ ಕಾರಣ ಮುಂದಿಟ್ಟು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ಲೋಕೋಪಯೋಗಿ ಇಲಾಖೆಗೆ ಸೇರಿದ ಈ ಪ್ರಮುಖ ರಸ್ತೆಯ ಸೇತುವೆಯನ್ನು ಮುಚ್ಚಿಸಿದೆ. ಲಘು ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಒದಗಿಸಿದೆ” ಎಂದರು.

“ಸೇತುವೆಯಲ್ಲಿ ಘನವಾಹನ ಓಡಾಟ ನಿರ್ಬಂಧಿಸುವ ಆದೇಶ ಹೊರಡಿಸುವ ಸಂದರ್ಭ ಈ‌ ಸೇತುವೆಯನ್ನು ಶೀಘ್ರ ದುರಸ್ತಿಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ, ಅದೇ ಸಂದರ್ಭ ಹೊಸ ಸೇತುವೆ ನಿರ್ಮಿಸುವ ಕುರಿತು ಉಲ್ಲೇಖಿಸಲಾಗಿದೆ. ಅಚ್ಚರಿ ಆಂದರೆ, ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿ ಎರಡು ವರ್ಷ ದಾಟಿದೆ. ಆದರೂ ಯಾವುದೇ ತೆರವು ಕಾರ್ಯಾಚರಣೆಗಳು ಕಂಡುಬಂದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮುಲ್ಕಿ ಸೇತುವೆ

“ಇದರಿಂದಾಗಿ ಕಿನ್ನಿಗೋಳಿ ಇನ್ನಾ ನಡುವಿನ ಗ್ರಾಮಗಳಾದ ಪಲಿಮಾರು, ಬಳ್ಕುಂಜೆ, ಕರ್ನಿರೆ ಸಹಿತ ಹಲವು ಊರಿನ ಗ್ರಾಮಸ್ಥರು ತೀರಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಯಾಣಿಕರ ಬಸ್ಸುಗಳ ಓಡಾಟವನ್ನು ನಿರ್ಬಂಧಿಸಿರುವುದರಿಂದ ವಿದ್ಯಾರ್ಥಿಗಳು ಹತ್ತಾರು ಕಿ ಮೀ ಸುತ್ತಿ-ಬಳಸಿ ಶಾಲಾ ಕಾಲೇಜುಗಳಿಗೆ ತಲುಪುತ್ತಿದ್ದಾರೆ. ಕಾರ್ಮಿಕರು, ದುಡಿಯುವ ಜನರು ದುಬಾರಿ ದರ ತೆತ್ತು ಆಟೋಗಳಲ್ಲಿ ಓಡಾಡುವ ಸ್ಥಿತಿ ಎದುರಾಗಿದೆ. ಒಟ್ಟಾರೆ ಇವರ ಕಷ್ಟ ಇಲ್ಲಿ‌ ಕೇಳುವವರಿಲ್ಲ. ಸೇತುವೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧೀನದಲ್ಲಿ ಇರುವುದರಿಂದ ಅಪರ ಜಿಲ್ಲಾಧಿಕಾರಿಗಳಲ್ಲಿ ವಿಚಾರಿಸಿದರೆ ದುರಸ್ತಿ, ಹೊಸ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ” ಎಂದು ಉತ್ತರಿಸಿದರು.

“ಬಸ್ಸು ಸಹಿತ ಘನವಾಹನಗಳ ಓಡಾಟಕ್ಕೆ‌ ಅವಕಾಶವಾಗದಂತೆ ಲಘುವಾಹನಗಳ ಸಂಚಾರಕ್ಕೆ ಮಾತ್ರ ಸ್ಥಳಾವಕಾಶ ನೀಡಿ ಸೇತುವೆಗೆ ಅಡ್ಡಲಾಗಿ ಕಲ್ಲುಗಳನ್ನು ಕಟ್ಟಿದ್ದರೂ, ಮಿನಿ ಲಾರಿಗಳಲ್ಲಿ ಅತಿ ಭಾರದ ಕೆಂಪು ಕಲ್ಲುಗಳ ಸಾಗಾಟ, ಮರಳು ಸಾಗಾಟ ಯಾವುದೇ ಅಡೆತಡೆ ಇಲ್ಲದೆ ನಡೆಯುತ್ತಿದೆ. ಇದಕ್ಕಿಂತ ಕಡಿಮೆ ಭಾರದ ಪ್ರಯಾಣಿಕರ ಬಸ್ಸುಗಳಿಗೆ ಮಾತ್ರ ಅವಕಾಶ ನಿರಾಕರಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಲ್ಕಿ ಸೇತುವೆ 1

“ಇದೇ ರೀತಿಯಲ್ಲಿ‌ ಬಿರುಕುಗಳು ಕಂಡುಬಂದ ಅಡ್ಡೂರು, ಪೊಳಲಿ ಸೇತುವೆ, ಮರವೂರು ಸೇತುವೆಗಳಲ್ಲಿ‌ ದುರಸ್ತಿ ನಡೆಸಿ ವಾಹನ ಸಂಚಾರಕ್ಕೆ ಅವಕಾಶ ಒದಗಿಸಲಾಗಿತ್ತು. ಕೂಳೂರು ಕಮಾನು ಸೇತುವೆಯನ್ನೂ ಬಿರುಕು ಮುಚ್ಚಿ ತಾತ್ಕಾಲಿಕವಾಗಿ ಸಂಚಾರಕ್ಕೆ ಅವಕಾಶ ಕೊಡಲಾಗಿದೆ. ಅದೇ ಸಂದರ್ಭದಲ್ಲಿ ಇಲ್ಲೆಲ್ಲ ಹೊಸ ಸೇತುವೆಯ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಫಲಿಮಾರು ಬಳ್ಕುಂಜೆಯಲ್ಲಿ ಮಾತ್ರ ದುರಸ್ತಿಯೂ ಇಲ್ಲ, ಹೊಸ ಸೇತುವೆಯೂ ಇಲ್ಲ, ಸಂಚಾರವೂ ಇಲ್ಲ ಎಂಬಂತಾಗಿದೆ. ಈ ಸೇತುವೆಯ ಎರಡೂ ಬದಿಗಳಲ್ಲಿ ಬಿಜೆಪಿ(ಕಾಪು, ಮೂಲ್ಕಿ ಮೂಡಬಿದ್ರೆ ಕ್ಷೇತ್ರ ಗಳು) ಶಾಸಕರು ಇದ್ದಾರೆ. ಅವರುಗಳು ಎರಡು ವರ್ಷಗಳಾದರು ಈ ಸೇತುವೆಯ ಕುರಿತು ಗಮನ ಹರಿಸಿಲ್ಲ, ಸ್ಥಳೀಯವಾಗಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ಮುಖಂಡರೂ ಈ ಗ್ರಾಮಸ್ಥರ ಸಮಸ್ಯೆಯ ಕುರಿತು ಧ್ವನಿ ಎತ್ತಿಲ್ಲ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಲು ಡೇರಿ ಕಾರ್ಯದರ್ಶಿಗಳ ಬೇಡಿಕೆಗಳ ಈಡೇರಿಕೆಗಾಗಿ ಕೋಮುಲ್ ಎಂಡಿಗೆ ಮನವಿ

“ಈ ಕುರಿತು ನಮ್ಮ ಗಮನಕ್ಕೆ ಕೆಲವರು ತಂದ ಕಾರಣ ಇಂದು ನ್ಯಾಯವಾದಿ ಹಾಗೂ ಜನಪರ ಚಳವಳಿಗಳಲ್ಲಿ‌ ಜೊತೆಗಿರುವ ದಿನೇಶ್ ಹೆಗ್ಡೆ ಉಳೆಪಾಡಿ, ನಾನು, ಸಿಪಿಐಎಂನ ಶ್ರೀನಾಥ್ ಕುಲಾಲ್ ಫಲಿಮಾರು, ಬಳ್ಕುಂಜೆಗೆ ಭೇಟಿ ನೀಡಿದೆವು. ಅಲ್ಲಿ‌ ನೆರೆದಿದ್ದ ಗ್ರಾಮಸ್ಥರ ಜತೆಗೆ ಸಮಾಲೋಚನೆ ನಡೆಸಿದೆವು, ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತಂದೆವು. ಸಂಬಂಧಪಟ್ಟ ಅಧಿಕಾರಿಗಳ ಬಳಿ ನಿಯೋಗ ಹೋಗಲು ನಿರ್ಧರಿಸಿದೆವು. ಹೊಸ ಸೇತುವೆ ನಿರ್ಮಾಣ, ಅಲ್ಲಿಯರಗೆ ಈಗಿರುವ ಸೇತುವೆಯನ್ನು ದುರಸ್ತಿಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂಬ ಗ್ರಾಮಸ್ಥರ ಬೇಡಿಕೆಯ ಜತೆಗೆ ನಿಲ್ಲುವುದಾಗಿ ನಿರ್ಧರಿಸಿದೆವು. ಹೋರಾಟ, ಪ್ರತಿಭಟನೆ ಅಗತ್ಯವಾದಲ್ಲಿ ಸಮಾನ ಮನಸ್ಕರ ಬೆಂಬಲ ಪಡೆದು ಗ್ರಾಮಸ್ಥರ ನೇತೃತ್ವದಲ್ಲಿ ಮುಂದುವರೆಯುವುದಾಗಿ ನಿರ್ಧರಿಸಲಾಯಿತು” ಎಂದು ಎಚ್ಚರಿಕೆ ನೀಡಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30, 40 ವರ್ಷಗಳಷ್ಟೇ ಆಗಿರುವ ಸೇತುವೆಗಳು ಸರಣಿಯಾಗಿ ದುರ್ಬಲಗೊಳ್ಳುತ್ತಿರುವುದು ಯಾಕೆ” ಎಂಬುದು ಅವರ ಬಹುದೊಡ್ಡ ಪ್ರಶ್ನೆಯಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...