ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ

Date:

‘ಸಮಸ್ತ’ ಮದ್ರಸ ಮುಅಲ್ಲಿಂ ಒಕ್ಕೂಟವು ಆಯೋಜಿಸಿದ ಮುಸಾಬಖ ಕಾರ್ಯಕ್ರಮಗಳ ಮುಖಾಂತರ ಹೊರಬರುವ ನವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಬೇಕಾದ ಪ್ರೋತ್ಸಾಹ ಕೊಡಬೇಕಾದದ್ದು ನಮ್ಮ ಕರ್ತವ್ಯವಾಗಿದ್ದು, ಪ್ರತಿಭೆಗಳ ಬೆಳವಣಿಗೆಗೆ ಇಂತಹ ಅಭಿನಂದನಾ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಹಾಗೂ ಗಾಂಧಿನಗರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಕೆ ಎಂ ಮುಸ್ತಫಾ ಹೇಳಿದರು.

ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯಮಟ್ಟದ ಮುಸಾಬಕ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿ ಗಳಿಸಿದ ಅರಂತೋಡು ನಸ್ರತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳಿಗೆ‌ ಬಿಳಿಯಾರು ಬದ್ರುದ್ದೀನ್ ಪಟೇಲ್‌ ಅವರ ಮನೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಟೇಲ್ ಟ್ರಸ್ಟ್ ಮಾಡುತ್ತಿರುವ ಹಲವು ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ ಹಾಜ್ ಇಸಾಕ್ ಬಾಖವಿ ಮಾತನಾಡಿ, “ವಿದ್ಯಾರ್ಥಿಗಳ ಸಾಧನೆಯಿಂದ ನಾವು ಹೆಮ್ಮೆ ಪಡುವಂತಾಗಿದ್ದು, ನಮ್ಮ ಮದರಸದಿಂದ ಅರಳಿದ ಪ್ರತಿಭೆಗಳು ಇನ್ನೂ ಬೆಳಗಿ ಸಮಾಜಕ್ಕೆ ಬೆಳಕು ನೀಡುವಂತಾಗಲಿ. ಅದೇ ರೀತಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅದಕ್ಕೆ ವೇದಿಕೆಯನ್ನು ಕಲ್ಪಿಸಿ ಅವರನ್ನು ಸಾಧಕರನ್ನಾಗಿ ಮಾಡುವ ಪಟೇಲ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ವೈಖರಿ ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ” ಎಂದು ಹೇಳಿ ಎಲ್ಲ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಪಟೇಲ್ ಚಾರಿಟೇಬಲ್ ಟ್ರಸ್ಟ್ ಅರಂತೋಡು ವತಿಯಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಾದ ಮುಝಮ್ಮಿಲ್, ಮುಹಮ್ಮದ್ ಹಫೀಜ್, ಶಾಕಿರ್ ಗೂನಡ್ಕ ಅವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮ ಮಟ್ಟದಲ್ಲಿ ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲರು

ಪಟೇಲ್ ಟ್ರಸ್ಟ್‌ನ ಅಧ್ಯಕ್ಷ ಬದ್ರುದ್ದೀನ್ ಪಟೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟೇಲ್ ಟ್ರಸ್ಟ್‌ನ ಸಲಹಾ ಸದಸ್ಯರುಗಳಾದ ಹಾಜಿ ಅಹಮದ್‌ ಪಟೇಲ್, ಅಬ್ದುಲ್ ಖಾದ‌ರ್ ಪಟೇಲ್, ಅಬ್ದುಲ್ ರಹಿಮಾನ್ ಪಟೇಲ್, ಹಾಜಿ ಮಹಮ್ಮದ್ ಕುನ್ಹಿ, ಹಾಜಿ ಷರೀಫ್ ಪಟೇಲ್, ಅನ್ವರ್ ಪಟೇಲ್, ಪಟೇಲ್ ಟ್ರಸ್ಟ್‌ನ ಸದಸ್ಯರಾದ ಸಾಬಿತ್, ಅದ್ನಾನ್, ಮೌಶುಕ್, ಹಸೀಬ್ ಶಾಹಿದ್, ಶಾಹ್, ಹನ್ಸಿಬ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...