ದಕ್ಷಿಣ ಕನ್ನಡ | ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Date:

ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್  ವತಿಯಿಂದ ಲೈಫ್ ಲೈನ್ ಹೆಲ್ತ್‌ ಕೇರ್ ಪ್ಲಸ್ ಇವರ ಸಹಯೋಗದೊಂದಿಗೆ ಅ.15ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಮಾದಕ ವ್ಯಸನದ ವಿರುದ್ಧ ಜಾಗೃತಿ ಕಾರ್ಯಕ್ರಮ ಮತ್ತು ಹಿರಿಯ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಗುರುಪುರ ಕೈಕಂಬದಲ್ಲಿರುವ ಅಲ್-ಬಿ‌ರ್ರ್ ಕ್ಯಾಂಪಸ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಧಾರ್ಮಿಕ ಗುರುಗಳಾದ ಜಮಾಲುದ್ದೀನ್ ದಾರಿಮಿ  ದುವಾ ಮಾಡುವ ಮೂಲಕ ಚಾಲನೆ ನೀಡಿದರು.

ಉಚಿತ ಆರೋಗ್ಯ ಶಿಬಿರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾರುಸ್ಸಲಾಂ ಅಧ್ಯಕ್ಷ ಸಯ್ಯದ್ ಝೈನುಲ್ ಆಬಿದೀನ್ ಜೆಫ್ರಿ ತಂಙಳ್ ಮಾತನಾಡಿ, “ಮರ್ಹೂಂ ನೌಷಾದ್ ಹಾಜಿ ಸೂರಲ್ಪಾಡಿಡುವರ ಸೇವೆ ಮತ್ತು ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಸ್ಮರಣೆ ಸಂಚಿಕೆಯನ್ನು ರಚಿಸಬೇಕು” ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜನಾಬ್ ಇನಾಯತ್ ಅಲಿ ಮುಲ್ಕಿ ಮಾತನಾಡಿ, “ನೌಷಾದ್ ಹಾಜಿಯವರ ಸವಿ ನೆನಪಿಗಾಗಿ ಅವರ ಹೆಸರಿನಲ್ಲಿ ಒಂದು ಸ್ಮಾರಕ ಭವನವನ್ನು ನಿರ್ಮಿಸಬೇಕು” ಎಂದು ಸಲಹೆ ನೀಡಿದರು.

ಮಂಗಳೂರು

ಈ ಸಂದರ್ಭದಲ್ಲಿ ಸಮಾಜಕ್ಕೆ ಅರ್ಪೂವ ಸೇವೆ ಸಲ್ಲಿಸಿದ ಡಾ. ಕೆ ಸುಂದರ್ ಭಟ್, ಡಾ ರಮೇಶ್ ಮಲ್ಲಿ, ಡಾ ನಾಸಿರ್ ಹುಸೈನ್ ಕಿಲ್ಪಾಡಿ, ಡಾ. ಶ್ರೀಪತಿ ಕಿನ್ನಿಕಂಬಳ ಈ ನಾಲ್ವರು ಹಿರಿಯ ವೈದ್ಯರು ಮತ್ತು ರಫೀಕ್ ಮಾಸ್ಟರ್ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.ಕಾರ್ಯಕ್ರಮದಲ್ಲಿ ಮಾದಕ ವ್ಯಸನವನ್ನು ತಡೆಗಟ್ಟುವ ಕುರಿತು ರಫೀಕ್ ಮಾಸ್ಟರ್ ಮಾಹಿತಿ ನೀಡಿದರು.

ಈ ಶಿಬಿರದಲ್ಲಿ ಹಲವು ವಿಭಾಗಗಳ ತಜ್ಞ ವೈದ್ಯರು ಭಾಗವಹಿಸಿದ್ದರು. ಚರ್ಮ ರೋಗ, ಮೂಳೆ ಎಲುಬು, ಕಣ್ಣು, ಕಿವಿ ಮೂಗು ಹಾಗೂ ಗಂಟಲು ರೋಗ, ಮಕ್ಕಳ ರೋಗ, ಮಾನಸಿಕ ಕಾಯಿಲೆ, ಕ್ಯಾನ್ಸರ್ ರೋಗ, ಸಾಮಾನ್ಯ ರೋಗ, ನರ ರೋಗ, ಎದೆ ರೋಗ ಹೀಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ತಪಾಸಣೆ ನಡೆಯಿತು. ಅಗತ್ಯ ಇದ್ದವರಿಗೆ ಉಚಿತವಾಗಿ ಇಸಿಜಿ, ಮದುಮೇಹ ಮತ್ತು ರಕ್ತದೊತ್ತಡ ತಪಾಸಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

ಸುಮಾರು 488 ಮಂದಿ ಈ ಶಿಬಿರದ ಪ್ರಯೋಜನೆ ಪಡೆದುಕೊಂಡಿದ್ದು, ಆರ್ಥಿಕವಾಗಿ ಹಿಂದುಳಿದ ಅಗತ್ಯ ಉಳ್ಳವರಿಗೆ ಉಚಿತವಾಗಿ ಕನ್ನಡಕ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ದ.ಕ ಜಿಲ್ಲಾ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯನ್ ಅಧ್ಯಕ್ಷ ಎಂ ಎಚ್ ಮೊಹಿದಿನ್ ಹಾಜಿ ಅಡ್ಡೂರು, ಜಲ್ಲಾ ಪಂಚಾಯತ್ ಮಾಜಿ ಸದಸ್ಯ ಯು ಪಿ ಇಬ್ರಾಹಿಂ ಅಡ್ಡೂರು, ಉಸ್ಮಾನ್ ಹಾಜಿ ಏರ್ ಇಂಡಿಯಾ ಕೋಶಾಧಿಕಾರಿ ದಾರುನ್ನೂರು ಕಾಶಿಪಟ್ನ, ಡೆಕ್ಕನ್ ಪ್ಲಾಸ್ಟ್ ಮಾಲಕರು ಅಸ್ಕರ್ ಅಲಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...