ದಕ್ಷಿಣ ಕನ್ನಡ | ಮುಸ್ಲಿಮರ ವಿರುದ್ಧ ದ್ವೇಷ ಭಾಷಣ; ಬಿಜೆಪಿ ಅಭ್ಯರ್ಥಿ ಮತ್ತು ಮೇಯರ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಿದ್ದು, ಮೊಗವೀರರನ್ನು ಮುಸ್ಲಿಮರ ವಿರುದ್ದ ಎತ್ತಿಕಟ್ಟುವ, ಆ ಮೂಲಕ ಮತೀಯ ದ್ವೇಷವನ್ನು ಹುಟ್ಟು ಹಾಕಿ ಚುನಾವಣೆಯಲ್ಲಿ ರಾಜಕೀಯ ಲಾಭ ಗಿಟ್ಟಿಸುವ ಯತ್ನ ನಡೆಸಿರುತ್ತಾರೆ ಎಂದು ಸಿಪಿ‌ಐಎಂ ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಸಿಪಿಎಂ ಕಾರ್ಯಕರ್ತರು, ಬಿಜೆಪಿ ನಾಯಕರ ರಾಜಕೀಯ ದುರುದ್ದೇಶ ಪರಸ್ಪರ ಎತ್ತಿಕಟ್ಟುವ ಮಾತುಗಳನ್ನು ಖಂಡಿಸಿದ್ದು, “ಮೇಯರ್ ಸುಧೀರ್ ಶೆಟ್ಟಿ ಹಾಗೂ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ವಿರುದ್ದ ಚುನಾವಣಾ ಆಯೋಗ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ತಿಳಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸತತ ಗೆಲುವು ಸಾಧಿಸಿರುವುದು ಹಿಂದು ಮುಸ್ಲಿಮರನ್ನು ಪರಸ್ಪರ ಎತ್ತಿಕಟ್ಟಿ. ಈ ಚುನಾವಣೆಯಲ್ಲಿ ಹೇಳಿಕೊಳ್ಳಲು ಯಾವುದೇ ಸಾಧನೆ ಇಲ್ಲದೆ ಬಿಜೆಪಿ ಹಾಗೂ ಅದರ ಅಭ್ಯರ್ಥಿ ಬೃಜೇಶ್ ಚೌಟ ಅದೇ ಮತೀಯ ದ್ವೇಷದ ಅಜೆಂಡಾವನ್ನು ಮುನ್ನಲೆಗೆ ತರಲು ಯತ್ನಿಸುತ್ತಿದ್ದಾರೆ. ಅದರ ಭಾಗವಾಗಿ ಮೀನುಗಾರಿಕೆ ಉದ್ಯಮದಲ್ಲಿ ಪರಸ್ಪರ ಅನ್ಯೋನ್ಯತೆಯಲ್ಲಿ ತೊಡಗಿಸಿಕೊಂಡಿರುವ ಮೊಗವೀರರು ಹಾಗೂ ಮುಸ್ಲಿಮರ ಮಧ್ಯೆ ಒಡಕು ಮೂಡಿಸಲು ಕೊಳಕು ಮಾತುಗಳನ್ನು ಆಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ವೇಷ ಭಾಷಣ

“ಮುಸ್ಲಿಮರಿಗೆ ಮೀನು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದೆಂದು ಓರ್ವ ಜವಾಬ್ದಾರಿಯುತ ಮೇಯರ್ ಲೋಕಸಭಾ ಚುನಾವಣಾ ಅಭ್ಯರ್ಥಿಯ ಮುಂದೆ ಮೊಗವೀರರಿಗೆ ದ್ವೇಷ ಭಾಷಣದ ಮೂಲಕ ಕರೆನೀಡುತ್ತಾರೆ. ಇದು ಚುನಾವಣಾ ಪೂರ್ವದಲ್ಲಿ ದ್ವೇಷದ ವಾತಾವರಣ, ಹಿಂಸಾಚಾರ ಉಂಟು ಮಾಡುವ ಯತ್ನ. ಆ ಮೂಲಕ ಯಾವುದೇ ಸಾಧನೆ ಇಲ್ಲದ ಬಿಜೆಪಿ ಅಭ್ಯರ್ಥಿಯನ್ನು ಅದೇ ಹಳೆಯ ಕೋಮುವಾದದ ಮಾದರಿಯಲ್ಲಿ ಗೆಲ್ಲಿಸಲು ಯತ್ನಿಸುಲಾಗುತ್ತಿದೆ. ಸೋಲಿನ ಭೀತಿಯಿಂದ ಬಿಜೆಪಿ ಇಂತಹ ಅತ್ಯಂತ ಅಪಾಯಕಾರಿ ರಾಜಕಾರಣವನ್ನು ಮಾಡುತ್ತಿದೆ. ಕಳೆದ ಹಲವು ಚುನಾವಣೆಗಳನ್ನು ಇದೇ ಮಾದರಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ” ಎಂದು ಯಾದವ ಶೆಟ್ಟಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

“ಚುನಾವಣೆಯ ಸಂದರ್ಭ ಸದ್ಯ ತಿಳಿಯಾದ ವಾತಾವರಣ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಕಲಹಕ್ಕೆ ಪ್ರಚೋದಿಸುವ ಬಿಜೆಪಿ ಮೇಯರ್ ಸುಧೀರ್ ಶೆಟ್ಟಿಯ ಈ ದ್ವೇಷ ಭಾಷಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಮೇಯರ್ ಸುಧೀರ್ ಶೆಟ್ಟಿ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ಬೃಜೇಶ್ ಚೌಟರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...