ದಕ್ಷಿಣ ಕನ್ನಡ | ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆತ; ಶಾಲೆ-ವಿದ್ಯುತ್ ಕಂಬ ಕುಸಿದು ಬೀಳುವ ಆತಂಕ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್‌ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್‌ ತಂತಿ ಹಾದು ಹೋಗಿರುವ ಕಂಬ ಕುಸಿದು ಬೀಳುವ ಆಂತಕ ಎದುರಾಗಿದೆ. ಅಗೆಯಲಾಗಿರುವ ಗುಡ್ಡಕ್ಕೆ ಶಾಲೆ ಮತ್ತು ವಿದ್ಯುತ್‌ ಕಂಬದ ಬಳಿ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಗುಡ್ಡ ಅಗೆದ ಬಳಿಕ ಶಾಲೆಗೆ ಗೋಡೆ ಮತ್ತು ವಿದ್ಯುತ್ ಕಂಬ ಕುಸಿದು ಬೀಳುತ್ತದೆ ಎಂದು ಸ್ಥಳೀಯರು ಆಂತಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸೋಮವಾರ ಶಾಲೆಗೆ ರಜೆ ನೀಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಬಂಟ್ವಾಳ ತಹಶೀಲ್ದಾರ್, ಮಂಗಳವಾರದಿಂದ (ಜುಲೈ 4) ತಡೆಗೋಡೆ ನಿರ್ಮಾಣ ಕಾಮಗಾರಿ ಆರಂಭಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...