ಕರಾವಳಿ | ಸಂಘಪರಿವಾರದ ವಿವಾದದ ನಡುವೆಯೂ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂಗಳು

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ ಸಿ ರೋಡ್‌ನಲ್ಲಿ ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಮೀಲಾದುನ್ನಬಿಯ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ, ಬೋಳಿಯಾರ್, ಅನಂತಾಡಿ, ಕಾಡುಮಠ, ಪೆರ್ಲದಬೈಲು ಇತ್ಯಾದಿ ಪ್ರದೇಶಗಳಲ್ಲಿ ಮೀಲಾದುನ್ನಬಿಯ ಮೆರವಣಿಗೆಯಲ್ಲಿದ್ದ ಮುಸ್ಲಿಮರಿಗೆ ಸಿಹಿ ತಿಂಡಿ, ಪಾನೀಯಗಳನ್ನು ಹಂಚುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನದ ಹಿನ್ನೆಲೆಯಲ್ಲಿ ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಮೀಲಾದುನ್ನಬಿಯನ್ನು ಆಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಟ್ವಾಳ ಕಾಂಗ್ರೆಸ್‌ ಮುಖಂಡನ ಪ್ರಚೋದನಕಾರಿ ಹೇಳಿಕೆಯ ಹಿನ್ನೆಲೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು, ವಿವಾದಾತ್ಮಕ ಹೇಳಿಕೆ ನೀಡುವ ಶರಣ್ ಪಂಪ್‌ವೆಲ್ ನೇತೃತ್ವದಲ್ಲಿ ಬಿಸಿ ರೋಡ್‌ನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಇದರಿಂದಾಗಿ ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.

ಇದೆಲ್ಲದರ ನಡುವೆ ಮಾಣಿ, ಅನಂತಾಡಿ, ಕೊಡಾಜೆ, ಬೋಳಿಯಾರ್ ಸೇರಿದಂತೆ ಹಲವು ಕಡೆಯ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆ ಮೆರೆದಿದ್ದಾರೆ.

ಉಡುಪಿಯಲ್ಲೂ ಹಿಂದೂಗಳಿಂದ ಸಿಹಿ ತಿಂಡಿ ವಿತರಣೆ

ಹಬ್ಬಗಳ ಸಂದರ್ಭದಲ್ಲಿ ಪರಸ್ಪರ ವೈನಮಸ್ಸು ಉಂಟು ಮಾಡುವ ಪ್ರಸಂಗಗಳು ಕರಾವಳಿಯಲ್ಲಿ ನಡೆಯುತ್ತಿವೆ.ನಾಗಮಂಗಲದಲ್ಲಿ ನಡೆದ ಘಟನೆ ಮತ್ತು ಬಂಟ್ವಾಳದಲ್ಲಿ ಈಗ ನಡೆಯುತ್ತಿರುವ ಘಟನೆಗಳೇ ಇದಕ್ಕೆ ಸಾಕ್ಷಿ. ಆದರೆ ಸೌಹಾರ್ದ ಬಯಸುವ ಮನಸ್ಸುಗಳು ಎಲ್ಲ ಧರ್ಮಗಳಲ್ಲೂ ಇದ್ದಾರೆ ಎಂಬುದಕ್ಕೆ ಪದೇಪದೆ ಸಾಕ್ಷಿಗಳು ಸಿಗುತ್ತಿವೆ.

ಇಂದು ಉಡುಪಿಯ ನೇಜಾರಿನ ಜಾಮಿಯಾ ಮಸೀದಿಯಲ್ಲಿ ಮೀಲಾದ್ ಪ್ರಯುಕ್ತ ನಡೆದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೆಳಾರ್ಕಳಬೆಟ್ಟು -ನೇಜಾರಿನ ಹಿಂದೂ ಬಾಂಧವರು ಮುಸಲ್ಮಾನ ಬಾಂಧವರಿಗೆ ತಂಪು ಪಾನೀಯ ನೀಡುವ ಮೂಲಕ ಪರಸ್ಪರ ಧರ್ಮ ಸೌಹಾರ್ದತೆ ಮೆರೆದಿದ್ದು, ಕರಾವಳಿಯ ಜನರಿಗೆ ಸೌಹಾರ್ದದ ಸಂದೇಶ ರವಾನಿಸಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಸಾಮಾಜಿಕ ಕಾರ್ಯಕರ್ತ ಮುನೀರ್ ಕಾಟಿಪಳ್ಳ, “ಬಂಟ್ವಾಳದ ಬಿಸಿ ರೋಡ್ ನಲ್ಲಿ “ಈದ್ ಮಿಲಾದ್ ಮೆರವಣಿಗೆ ತಡೆಯುತ್ತೇವೆ” ಎಂದು ಬಜರಂಗದಳದ ಕಾರ್ಯಕರ್ತರು ಶರಣ್ ಪಂಪ್ ವೆಲ್ ನ ಸಿನಿಮಾ ಸ್ಟೈಲ್ ನಾಯಕತ್ವದಲ್ಲಿ ಆರ್ಭಟಿಸುತ್ತಿರುವಾಗ ಪಕ್ಕದ ಅನಂತಾಡಿ, ಕೊಡಾಜೆ, ಮಾಣಿಯಲ್ಲಿ ಹಿಂದೂ ಸಮುದಾಯದ ಸೌಹಾರ್ದ ಪ್ರಿಯ ಬಂಧುಗಳು ಮೀಲಾದ್ ಮೆರವಣಿಗೆಗೆ ಸಿಹಿ ಹಂಚಿ ಮನುಷ್ಯ ಧರ್ಮವನ್ನು ಎತ್ತಿಹಿಡಿದಿದ್ದಾರೆ. ಅವರಿಗೆ ನಾಡು ಋಣಿ” ಎಂದು ತಿಳಿಸಿದ್ದಾರೆ.

ಸೌಹಾರ್ದ 2

“ನಿನ್ನೆಯಿಂದ ಶುರುವಾಗಿರುವ ರಾಜಕೀಯ ಪ್ರೇರಿತ ಉದ್ವಿಗ್ನ ಸ್ಥಿತಿಯ ನಡುವೆಯೂ, ವಿಚಲಿತರಾಗದೆ ಸಿಹಿ ಹಂಚುವ ನಿರ್ಧಾರಕ್ಕೆ ಬದ್ದರಾದ ಈ ಯುವಕರಿಗೆ ಜನತೆ ಎಷ್ಟು ಧನ್ಯವಾದ ಸಲ್ಲಿಸಿದರೂ ಸಾಲದು. ನಮ್ಮ ರಾಜಕಾರಣಿಗಳು, ಶಾಸಕರುಗಳು ಈ ಯುವಕರಿಂದ ಪಾಠ ಕಲಿಯಬೇಕು. ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ, ಶಾಸಕ ಭರತ್ ಶೆಟ್ಟಿ, ವೇದವ್ಯಾಸ್ ಕಾಮತರಿಗೆ ಈ ಯುವಕರು ತಮ್ಮ ಕೃತಿಯ ಮೂಲಕ ಸರಿಯಾದ ಉತ್ತರ ಕೊಟ್ಟಿದ್ದಾರೆ. ಇಷ್ಟು ಸಾಕು” ಎಂದು ತಿಳಿಸಿದ್ದಾರೆ.

ಸೌಹಾರ್ದ5
ಸೌಹಾರ್ದ3
ಸೌಹಾರ್ದ 3
ಮೀಲಾದ್
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...