ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

Date:

ಜಾನುವಾರುಗಳ ರಕ್ಷಣೆ ಹೆಸರಿಲ್ಲಿ ನಡೆಯುತ್ತಿರುವ ಮುಸ್ಲಿಮರ ಮೇಲಿನ ದೌರ್ಜನ್ಯ ಹಾಗೂ ಪೊಲೀಸರ ಅತಿರೇಕದ ವರ್ತನೆಯ ನಿಯಂತ್ರಣಕ್ಕಾಗಿ ಸರ್ಕಾರ ಅಧಿಕೃತವಾಗಿ ಕಸಾಯಿಖಾನೆಗೆ ಅನುಮತಿ ನೀಡಬೇಕು ಎಂದು ಮುಸ್ಲಿಂ ಮುಖಂಡರ ಸಭೆಯಲ್ಲಿ ಒತ್ತಾಯಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಜಾನುವಾರುಗಳ ಹೆಸರಿನಲ್ಲಿ ನಡೆಯುತ್ತಿರುವ ತಾರತಮ್ಯ ಧೋರಣೆ ಕೃತ್ಯವನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಾಜಕೀಯ, ಸಾಮಾಜಿಕ ಮುಖಂಡರು, ಧಾರ್ಮಿಕ ನೇತಾರರು ಹಲವಾರು ಮಸೀದಿಗಳ ಅಧ್ಯಕ್ಷರುಗಳನ್ನು ಒಳಗೊಂಡ ಮುಸ್ಲಿಂ ಮುಖಂಡರ ಸಭೆಯು ಶುಕ್ರವಾರ ಸಭೆ ಬಿಸಿರೋಡ್ ನಲ್ಲಿ ನಡೆಯಿತು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಹೆಸರಿನಲ್ಲಿ ಮುಸ್ಲಿಮರನ್ನು ಗುರಿಪಡಿಸಿಕೊಂಡು ನಡೆಯುತ್ತಿರುವ ಶೂಟೌಟ್, ಮನೆ, ಕಟ್ಟಡಗಳ ಜಪ್ತಿ, ಪ್ರಾರ್ಥನೆ ಸಲ್ಲಿಸುವ ಮಸೀದಿಗಳ ಒಳಗೆ ಪೊಲೀಸ್ ಪೇದೆಗಳು ಗೋಹತ್ಯೆ ಕಾಯಿದೆಯ ಮಾಹಿತಿ ಕೊಡುವ ನೆಪದಲ್ಲಿ ಮುಸ್ಲಿಮರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರವನ್ನು ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ದ್ವೇಷ ಭಾಷಣ ಮಾಡುವ ಸಂಘಪರಿವಾರದ ಮುಖಂಡರ ಮೇಲೆ ಮೃದು ದೋರಣೆ ಬಗ್ಗೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 15 at 2.10.33 PM

ಮಂಗಳೂರಿನ ಕುದ್ರೋಳಿಯಲ್ಲಿರುವ ಅಧಿಕೃತ ಕಸಾಯಿಖಾನೆಯನ್ನು ಕಳೆದ ಹಲವಾರು ವರ್ಷಗಳಿಂದ ಬಂದ್ ಮಾಡಿ ಇಟ್ಟಿದೆ. ಇದರಿಂದ ಸರಕಾರದ ಆದಾಯವು ಕೈತಪ್ಪಿದ್ದು ಮಾತ್ರವಲ್ಲ ಕಾನೂನಾತ್ಮಕವಾದ ಆಹಾರವನ್ನು ಕಸಿದುಕೊಳ್ಳುವ ಷಡ್ಯಂತ್ರವಾಗಿದೆ. ಆದ್ದರಿಂದ ಕುದ್ರೋಳಿ ಕಸಾಯಿಖಾನೆಯನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಪ್ರತೀ ತಾಲೂಕು ಮಟ್ಟದಲ್ಲಿ ಸುಸಜ್ವಿತವಾದ ಕೋಣ, ಎತ್ತು ಮತ್ತು ಕುರಿಯ ಕಸಾಯಿಖಾನೆಯನ್ನು ತೆರೆಯಲು ಸರಕಾರ ಮತ್ತು ಜಿಲ್ಲಾಡಳಿತ ಮುಂದಾಗಬೇಕು. ಮತ್ತು ಅವೈಜ್ಞಾನಿಕ, ರೈತ ವಿರೋಧಿ, ಮತ್ತು ರಾಜಕೀಯ ಪ್ರೇರಿತ ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಹಿಂಪಡೆಯುವ ವಿಚಾರವಾಗಿ ಸರ್ಕಾರಕ್ಕೆ ಒತ್ತಡ ಹಾಕುವ ಬಗ್ಗೆ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಸರ್ಕಲ್‌ಗೆ ಡಿಕ್ಕಿ ಹೊಡೆದ ಕಾರು; ಮೂವರು ಸಾವು

ಅದೇ ರೀತಿ ಬಿಜೆಪಿ ಸರಕಾರದ ಅವಧಿಯಲ್ಲಿ ಮುಸ್ಲಿಂ ಸಮುದಾಯದಕ್ಕೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ಅನ್ಯಾಯಕ್ಕೂ ಹೆಚ್ಚು ಸಮಸ್ಯೆ ಮುಸ್ಲಿಮರೇ ಅಧಿಕಾರಕ್ಕೆ ತಂದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಆಗುತ್ತಿದೆ. ಇಂತಹ ಪರಿಸ್ಥಿತಿ ಅಗುವುದಾದರೆ ಇದರ ವಿರುದ್ಧ ಪಕ್ಷಾತೀತವಾಗಿ ಹೋರಾಟ ನಡೆಸಲು ನಾವೆಲ್ಲರೂ ತಯಾರಾಗಿದ್ದೇವೆ ಎಂದು ಮುಖಂಡರು ಸಭೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಮುಸ್ಲಿಂ ಮುಖಂಡರ ನಿಯೋಗ ಶೀಘ್ರದಲ್ಲೇ ಮುಖ್ಯಮಂತ್ರಿ, ಮುಸ್ಲಿಂ ಸಚಿವರಿಗೆ ಮನವಿ ಸಲ್ಲಿಸುವ ಬಗ್ಗೆ, ತೀರ್ಮಾನಿಸಲಾಯಿತು. ಅದೇರೀತಿ ಎಲ್ಲಾ ಮುಸ್ಲಿಂ ಸಂಘಟನೆ, ರಾಜಕೀಯ ಪಕ್ಷಗಳ ಮುಖಂಡರನ್ನೊಳಗೊಂಡ ಜಿಲ್ಲಾ ಮುಸ್ಲಿಂ ಒಕ್ಕೂಟ ರಚನೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜಕೀಯ, ಸಾಮಾಜಿಕ ಮುಖಂಡರು, ಧಾರ್ಮಿಕ ನೇತಾರರು ಹಲವಾರು ಮಸೀದಿಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...