ದಕ್ಷಿಣ ಕನ್ನಡ | ಶಾಲೆಗಳ ಪುನರಾರಂಭ; ಲೇಖನಿ ಸಾಮಗ್ರಿ ಕೊಂಡುಕೊಳ್ಳಲು ನಿರಾಸಕ್ತಿ

Date:

ಪ್ರಸ್ತುತ ವಾರದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದರೂ ಪುಸ್ತಕಗಳು, ಲೇಖನಿ ಸಾಮಗ್ರಿ(ಸ್ಟೇಷನರಿ)ಗಳು ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈ ವರ್ಷ ಹೆಚ್ಚಿನ ಜನಸಂದಣಿ ಕಾಣುತ್ತಿಲ್ಲ. ಮಂಗಳೂರು ಭಾಗದಲ್ಲಿ ನೀರಿನ ಕೊರತೆಯಿಂದಾಗಿ ಈ ವಾರ ಶಾಲೆಗಳನ್ನು ಪುನರಾರಂಭಿಸಲು ಸಂದಿಗ್ದ ಪರಿಸ್ಥಿತಿ ಉಂಟಾಗಿದ್ದು, ಹೊಸ ಶೈಕ್ಷಣಿಕ ವರ್ಷಕ್ಕೆ ಜೂನ್ 1 ರಿಂದ ಶಾಲೆಗಳು ತೆರೆಯಲಿವೆ ಎಂದು ಅಂಗಡಿಯವರು ತಿಳಿಸಿದ್ದಾರೆ.

“ನೀರಿನ ಸಮಸ್ಯೆಯಿಂದಾಗಿ ಈ ವಾರ ಶಾಲೆಗಳನ್ನು ಪುನರಾರಂಭಿಸುವ ಅನಿಶ್ಚಿತತೆ ಮೊದಲ ಕಾರಣವಾಗಿರಬಹುದು. ಹಾಗಾಗಿ ಜೂನ್‌ 1ರಿಂದ ಶಾಲೆ ಆರಂಭವಾಗಬಹುದು. ಈ ಹಿನ್ನೆಲೆಯಲ್ಲಿ ಪೋಷಕರು ಸ್ಟೇಷನರಿ ವಸ್ತುಗಳನ್ನು ಖರೀದಿಸಲು ಮುಗಿಬೀಳುತ್ತಿರುವದು ಕಂಡುಬರುತ್ತಿಲ್ಲ. ಎರಡನೆಯದಾಗಿ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಸ್ಟೇಷನರಿ ವಸ್ತುಗಳು ಮತ್ತು ನೋಟ್‌ಬುಕ್‌ಗಳನ್ನು ಒದಗಿಸುವುದರಿಂದ ಅವುಗಳ ಮಾರಾಟವು ಕಡಿಮೆಯಾಗಿದೆ. ಮೂರನೆಯದಾಗಿ, ಸ್ಟೇಷನರಿ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳವಾಗಿರುವುದರಿಂದ ಪೋಷಕರು ಹಿಂಜರಿಯುತ್ಎಂತಿದ್ದುದಾರೆ” ಎಂದು ಸ್ಟೇಷನರಿ ಅಂಗಡಿ ಮಾಲಿಕರು ತಿಳಿಸಿದ್ದಾರೆ.

“ಕಳೆದ ವರ್ಷಕ್ಕೆ ಹೋಲಿಸಿದರೆ ಕಾಗದದ ವಸ್ತುಗಳ ಬೆಲೆ ಶೇ.50ರಷ್ಟು ಹೆಚ್ಚಾಗಿದೆ. ಬರವಣಿಗೆ ಉಪಕರಣಗಳ ಬೆಲೆಗಳೂ ಹಾಗೆಯೇ ಇವೆ. ಸ್ಟೇಷನರಿ ವಸ್ತುಗಳ ಮೇಲೆ ವಿಧಿಸಿರುವ ಶೇ.18ರಷ್ಟು ಜಿಎಸ್‌ಟಿಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರವು ಪರಿಹಾರವನ್ನು ಕಂಡುಹಿಡಿಯಬೇಕು. ಕೆಲವು ರಾಜ್ಯಗಳು ಈಗಾಗಲೇ ಅವುಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡಿವೆ. ಇದರಿಂದ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟದ ಸಹಾಯವಾಗುತ್ತದೆ” ಎಂದು ಮಾಲೀಕರು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿಕ್ಷಣ ಕ್ಷೇತ್ರದ ಬದಲಾವಣೆಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಲಿ: ನಿರಂಜನಾರಾಧ್ಯ ವಿ ಪಿ

“ನೋಟ್ ಬುಕ್‌ಗಳ ಬೆಲೆ ಹೆಚ್ಚಾಗಿದೆ. ಪ್ಲಾಸ್ಟಿಕ್ ಬೆಲೆ ಏರಿಕೆಯಿಂದಾಗಿ ಪೆನ್ನುಗಳು ಮತ್ತು ಸಂಬಂಧಿತ ಪರಿಕರಗಳ ಬೆಲೆಯೂ ಶೇ.10 ರಷ್ಟು ಹೆಚ್ಚಾಗಿದೆ. ಈ ವರ್ಷ ಚುನಾವಣಾ ಫಲಿತಾಂಶದ ನಂತರವೇ ಮಾರಾಟ ಪ್ರಾರಂಭವಾಯಿತು. ಆದರೂ, ಕೊಂಡುಕೊಳ್ಳುವವರು ಮುಗಿಬೀಳುತ್ತಿಲ್ಲ” ಎಂದು ಕಾರ್ತಿಕ್ ಸ್ಕೂಲ್ ಬುಕ್ಸ್ ಅಂಡ್ ಸ್ಟೇಷನರೀಸ್‌ ಮಾಲೀಕ ಹೇಳಿದ್ದಾರೆ.

ನೋಟ್ ಬುಕ್ ಬೆಲೆ ಏರಿಕೆ

ನೋಟ್‌ಬುಕ್‌ಗಳು, ಪೆನ್ನುಗಳು ಮತ್ತು ಇತರ ಲೇಖನಿ ಸಾಮಗ್ರಿಗಳ ಬೆಲೆ ಏರಿಕೆಯಾಗಿದ್ದರೂ, ಛತ್ರಿಗಳನ್ನು ಹೊರತುಪಡಿಸಿ ಸಮವಸ್ತ್ರ, ಶಾಲಾ ಬ್ಯಾಗ್ ಮತ್ತು ಶೂಗಳ ಬೆಲೆ ಸ್ಥಿರವಾಗಿದೆ.‌ ಛತ್ರಿಗಳ ಬೆಲೆ ಶೇ. 10ರಿಂದ 15 ರಷ್ಟು ಏರಿಕೆ ಕಂಡಿದ್ದು, ಉಳಿದ ವಸ್ತುಗಳ ಬೆಲೆ ಹಿಂದಿನ ವರ್ಷದಂತೆಯೇ ಇದೆ ಎಂದು ನಗರದ ಕೇಂದ್ರ ಮಾರುಕಟ್ಟೆಯಲ್ಲಿರುವ ಸೌರಾಷ್ಟ್ರ ಕ್ಲಾತ್ ಸ್ಟೋರ್ಸ್‌ ಮಾಲೀಕ ತಿಳಿಸಿದ್ದಾರೆ.

“ನೋಟ್‌ಬುಕ್‌ಗಳನ್ನು ಒದಗಿಸುವ ಶಾಲೆಗಳು ಪ್ರಸ್ತುತ ವರ್ಷದಲ್ಲಿ ಸ್ಟೇಷನರೀಸ್‌ ಬೆಲೆಯನ್ನು ₹700ರಿಂದ ₹1,000ದವರೆಗೆ ಹೆಚ್ಚಿಸಿವೆ” ಎಂದು ಕೆಲವು ಪೋಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...