ದಕ್ಷಿಣ ಕನ್ನಡ | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ

Date:

ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ-ಕಾರ್ಮಿಕ-‌ಕೃಷಿ ಕೂಲಿಕಾರರಿಂದ ನಡೆದ ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿಯವರು ಮಾತನಾಡಿ, “ನೀತಿ ಆಯೋಗದ ಪರಿಕಲ್ಪನೆಗಳು ಬದಲಾಗಿದ್ದರ ಪರಿಣಾಮ ಇಂದಿನ ಆರ್ಥಿಕ ನೀತಿಗಳು ಉದ್ಯೋಗರಹಿತವಾಗಿ ಜಾರಿಯಾಗುತ್ತಿವೆ. ಉತ್ಪಾದನಾ ವಲಯದಲ್ಲಿ ಇದೇ ಮೊದಲ ಬಾರಿಗೆ ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಕುಸಿದಿದೆ. ಮೋದಿ ಸರ್ಕಾರ ಎಷ್ಟೇ ಜಂಭ ಕೊಚ್ಚಿಕೊಂಡರೂ ಬಂಡವಾಳ ಹೂಡಿಕೆ ಆಗುತ್ತಿಲ್ಲ.‌ ಉದ್ಯೋಗಸ್ಥರ ಬದಲಾಗಿ ಗುತ್ತಿಗೆ ಹೊರಗುತ್ತಿಗೆ ತಾತ್ಕಾಲಿಕ ಉದ್ಯೋಗಗಳು ಹೆಚ್ಚಾಗಿವೆ. ಬಂಡವಾಳಶಾಹಿಗಳ ಪರವಾಗಿ ಕಾರ್ಮಿಕ ಕಾನೂನುಗಳನ್ನು ಬದಲಿಸಿ ಸಂಹಿತೆಗಳನ್ನಾಗಿ ಪರಿವರ್ತಿಸಲಾಗಿದೆ” ಎಂದು ಹೇಳಿದರು.

ಎಐಯುಟಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೇರಿಂಜ ಮಾತನಾಡಿ, “ಕಳೆದ 10 ವರ್ಷಗಳ ಮೋದಿ ಸರ್ಕಾರದ ನೀತಿಗಳು ಕಾರ್ಮಿಕ ವರ್ಗದ ಬದುಕಿನ ಮೇಲೆ ಪ್ರಹಾರಗಳನ್ನು ನಡೆಸಿವೆ. ಆದಾಯ ಕುಸಿತ, ಖಾಯಂ ಉದ್ಯೋಗಗಳ ಕುಸಿತ, ಗುತ್ತಿಗೆ ಹೊರಗುತ್ತಿಗೆ ಹಾಗೂ ಬಿಟ್ಟಿ ದುಡಿಮೆ ಹೆಚ್ಚಳ, ಕೋವಿಡ್ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರು ಅನುಭವಿಸಿದ ಸಂಕಟ ಹಾಗೂ ಕೃಷಿ ಬಿಕ್ಕಟ್ಟಿನ ಪರಿಣಾಮದಿಂದ ಅಸಂಘಟಿತ ಕಾರ್ಮಿಕರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳ, ಸಾಮಾಜಿಕ ರಕ್ಷಣೆ ಇಲ್ಲದ ಅತಂತ್ರದ ಬದುಕು, ಯೋಜನಾ ಕಾರ್ಮಿಕರನ್ನು ಗೌರವಧನದ ಹೆಸರಲ್ಲಿ ಶೋಷಿಸುವ ನೀತಿ ತೀವ್ರಗೊಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಜನಸಾಮಾನ್ಯರ ಸಂಕಷ್ಟಗಳಿಗೆ ಪರಿಹಾರ ಒದಗಿಸಬೇಕಾದ ಕೇಂದ್ರ ಸರ್ಕಾರ ಪ್ರತಿಯೊಂದು ಹಂತದಲ್ಲಿಯೂ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭವಾಗುವ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದರಿಂದಾಗಿ ದೇಶದ ಶೇ.45ರಷ್ಟು ಸಂಪತ್ತು ಹೊಂದಿರುವ ಕೇವಲ ಶೇ.1ರಷ್ಟಿರುವ ಶ್ರೀಮಂತರಲ್ಲಿ ಕೇವಲ ಶೇ.3ರಷ್ಟು ಮಾತ್ರವೇ ಜಿಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ. ಆದರೆ ದೇಶದ ಶೇ.50ರಷ್ಟು ಜನರಿಂದ ಶೇ.65ರಷ್ಟು ಜಿಎಸ್‌ಟಿ ಸಂಗ್ರಹ ಮಾಡಲಾಗುತ್ತಿದೆ” ಎಂದು ಹೇಳಿದರು.

ಸಭೆಯನ್ನುದ್ದೇಶಿಸಿ ರಾಜ್ಯ ರೈತ ಸಂಘದ ನಾಯಕ ಸನ್ನಿ ಡಿಸೋಜ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಯಾದವ ಶೆಟ್ಟಿಯವರು ಮಾತನಾಡಿ, ಕೇಂದ್ರ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕಘಟನೆಗಳ ಸಮಿತಿಯ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ನಾಯಕರುಗಳಾದ ವಸಂತ ಆಚಾರಿ, ಯೋಗೀಶ್‌ ಜಪ್ಪಿನಮೊಗರು, ಸುಕುಮಾರ್, ಪದ್ಮಾವತಿ ಶೆಟ್ಟಿ, ಜಯಂತ ನಾಯಕ್, ಜಯಂತಿ ಶೆಟ್ಟಿ, ವಸಂತಿ ಕುಪ್ಪೆಪದವು, ರಾಧಾ ಮೂಡಬಿದ್ರೆ, ಗಿರಿಜಾ, ನೋಣಯ್ಯ ಗೌಡ, ರೋಹಿದಾಸ್, ಸುಂದರ ಕುಂಪಲ, ಬಿ ಕೆ‌ ಇಮ್ತಿಯಾಜ್,  ಎಐಟಿಯುಸಿ ಜಿಲ್ಲಾ ಮುಖಂಡರುಗಳಾದ ಬಿ ಶೇಖರ್, ವಿ ಕುಕ್ಯಾನ್, ಎಚ್ ವಿ ರಾವ್, ಕರುಣಾಕರ್, ಸುರೇಶ್ ಕುಮಾರ್, ಸುಲೋಚನ, ರೈತ ಸಂಘಟನೆಗಳ ಮುಖಂಡರುಗಳಾದ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಓಸ್ವಾಲ್ಡ್ ಪ್ರಕಾಶ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...