ದಕ್ಷಿಣ ಕನ್ನಡ | ಶಕ್ತಿನಗರದ ಪಿಯು ಕಾಲೇಜಿಗಿಲ್ಲ ಸ್ವಂತ ಕಟ್ಟಡ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶಕ್ತಿನಗರದ ನಲ್ಯಪದವು ಎಂಬಲ್ಲಿ ಪ್ರಾರಂಭವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇವಲ ಎರಡು ತರಗತಿ ಕೊಠಡಿಗಳಿದ್ದು, ಸರ್ಕಾರಿ ಪ್ರೌಢಶಾಲಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ, ನಾಲ್ಕು ವರ್ಷಗಳ ಹಿಂದೆ ಆರಂಭವಾದ ಕಾಲೇಜು ಉತ್ತಮ ಸಂಖ್ಯೆಯ ಪ್ರವೇಶ ಮತ್ತು ಫಲಿತಾಂಶಗಳನ್ನು ಹೊಂದಿದೆ. ಆದರೆ ತರಗತಿ ಕೊಠಡಿಗಳು ಲಭ್ಯವಿಲ್ಲದ ಕಾರಣ ಕಾಲೇಜಿಗೆ ಹೆಚ್ಚಿನ ದಾಖಲಾತಿ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮೈಸೂರಿನ ಕೆ ಜಿ ಕೊಪ್ಪಲಿನ ಸರ್ಕಾರಿ ಪಿಯು ಕಾಲೇಜನ್ನು ಮಂಗಳೂರಿನ ಶಕ್ತಿನಗರಕ್ಕೆ ಸ್ಥಳಾಂತರಿಸಿ ಸರ್ಕಾರ 2020ರ ನವೆಂಬರ್ 25ರಂದು ಆದೇಶ ಹೊರಡಿಸಿತ್ತು. ನಲ್ಯಪದವು ಕಾಲೇಜು ಜಿಲ್ಲೆಯ 54ನೇ ಸರ್ಕಾರಿ ಪಿಯು ಕಾಲೇಜಾಗಿದ್ದು, ಈ ಹಿಂದೆ ನಗರ ಪ್ರದೇಶದ ಇತರ ಕಾಲೇಜುಗಳನ್ನು ಅವಲಂಬಿಸಿದ್ದ ಶಕ್ತಿನಗರ ಮತ್ತು ಸುತ್ತಮುತ್ತಲಿನ ನೂರಾರು ವಿದ್ಯಾರ್ಥಿಗಳು ಈ ಕಾಲೇಜಿಗೆ ದಾಖಲಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾ ವಿಭಾಗದ 11 ವಿದ್ಯಾರ್ಥಿಗಳು ಸೇರಿದಂತೆ 15 ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾರಂಭವಾಗಿರುವುದಾಗಿ ಕಾಲೇಜಿನ ಪ್ರಾಂಶುಪಾಲೆ ಜಯಾನಂದ ಎನ್ ಸುವರ್ಣ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

“ಕುತೂಹಲಕಾರಿ ಸಂಗತಿಯೆಂದರೆ, ಕಾಲೇಜು ಆರಂಭವಾದಾಗ ಎಲ್ಲ ವಿದ್ಯಾರ್ಥಿಗಳು ಪುನರಾವರ್ತಿತರಾಗಿದ್ದರೇ ಹೊರತು, ಹೊಸಬರಲ್ಲ. ಅವರು ಕಳೆದ ಶೈಕ್ಷಣಿಕ ವರ್ಷದಲ್ಲಿ ತಮ್ಮ ದ್ವಿತೀಯ ಪಿಯುಸಿಯನ್ನು ಪೂರ್ಣಗೊಳಿಸಿದ್ದು, ಕಾಲೇಜು ಶೇ.100ರಷ್ಟು ಫಲಿತಾಂಶವನ್ನು ಗಳಿಸಿತ್ತು. ಪ್ರಸ್ತುತ, ಶಕ್ತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ 15 ಬಾಲಕಿಯರು ಸೇರಿದಂತೆ 45 ವಿದ್ಯಾರ್ಥಿಗಳು ಇದ್ದಾರೆ” ಎಂದು

“ಪ್ರವೇಶಕ್ಕೆ ಉತ್ತಮ ಬೇಡಿಕೆ ಇದೆ. ಆದರೆ ಮೂಲಸೌಕರ್ಯಗಳಿಲ್ಲದ ಕಾರಣ ನಮಗೆ ಏನೂ ತೋಚದಂತಾಗಿದೆ. ತರಗತಿಗಳು ಸರ್ಕಾರಿ ಪ್ರೌಢಶಾಲಾ ಕಟ್ಟಡದಲ್ಲಿ ನಡೆಯುತ್ತಿದ್ದು, ನಮಗೆ ಎರಡು ತರಗತಿಗಳನ್ನು ನೀಡಲಾಗಿದೆ. ಪ್ರಥಮ ಮತ್ತು ದ್ವಿತೀಯ ವರ್ಷದ ಕಲಾ ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಈ ಎರಡು ತರಗತಿ ಕೊಠಡಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ವಾಣಿಜ್ಯ ವಿಷಯಕ್ಕೆ ಇಬ್ಬರು ಅತಿಥಿ ಬೋಧಕರು ಸೇರಿದಂತೆ ಆರು ಮಂದಿ ಬೋಧಕ ಸಿಬ್ಬಂದಿ ಇದ್ದಾರೆ” ಎಂದು ಸುವರ್ಣ ವಿವರಿಸಿದರು.

“ಕಾಲೇಜಿಗೆ ವಿಜ್ಞಾನ ವಿಭಾಗವೂ ಮಂಜೂರಾಗಿದೆ. ತರಗತಿ ಕೊಠಡಿಗಳು ಮತ್ತು ಪ್ರಯೋಗಾಲಯ ಆಗುವವರೆಗೆ ವಿಜ್ಞಾನ ವಿಭಾಗ ಪ್ರಾರಂಭಿಸಲು ಸಾಧ್ಯವಿಲ್ಲ. ಕಾಲೇಜು, ಯಾವುದೇ ಸೌಲಭ್ಯಗಳಿಲ್ಲದರ ನಡುವೆಯೂ ಕ್ರೀಡೆಯಲ್ಲಿ ಸಾಧನೆ ಮಾಡಿದೆ. ಕಾಲೇಜಿನ ಇಬ್ಬರು ಬಾಲಕಿಯರು ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಅದೇ ಕ್ಯಾಂಪಸ್‌ನಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 600 ಮಂದಿ ವಿದ್ಯಾರ್ಥಿಗಳು ಮತ್ತು ಪ್ರೌಢಶಾಲೆಯಲ್ಲಿ 150 ಮಂದಿ ವಿದ್ಯಾರ್ಥಿಗಳನ್ನು ಹೊಂದಿದೆ” ಎಂದು ಸುವರ್ಣ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಸವಣ್ಣ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಸೌಭಾಗ್ಯ ನನ್ನದು: ಸಿಎಂ ಸಿದ್ದರಾಮಯ್ಯ

“ಈ ಹಿಂದೆ ಸುಮಾರು ಎಂಟು ತರಗತಿ ಕೊಠಡಿಗಳನ್ನು ನಿರ್ಮಿಸಲು ಹಣ ಮಂಜೂರು ಮಾಡಲಾಗಿತ್ತು. ಆದರೆ, ಸರ್ಕಾರ ಬದಲಾದ ಕಾರಣ ಟೆಂಡರ್ ಪ್ರಕ್ರಿಯೆ ವಿಳಂಬವಾಯಿತು. ಆದರೂ ಹಣ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಶಕ್ತಿನಗರದಲ್ಲಿರುವ ಪಿಯು ಕಾಲೇಜು ಆ ಪ್ರದೇಶದ ಪ್ರಮುಖ ಬೇಡಿಕೆಯಾಗಿದ್ದು, ಅದನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು” ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...