ದಕ್ಷಿಣ ಕನ್ನಡ | ಆಹಾರ ಸುರಕ್ಷತಾ ಕಾಯ್ದೆಯಡಿ ‘ಪಿಜಿ’ಗಳ ನೋಂದಣಿ ಕಡ್ಡಾಯ: ಡಿಎಚ್‌ಒ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಸೂಚನೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳು, ಬಿಸಿಯೂಟ ನಡೆಸುವ ಶಾಲೆಗಳಿಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ಇವನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದರು.

“ಜಿಲ್ಲೆಯ ಕೆಲವು ಖಾಸಗಿ ನರ್ಸಿಂಗ್ ಕಾಲೇಜುಗಳ ವಸತಿ ನಿಲಯಗಳಲ್ಲಿ ಇತ್ತೀಚೆಗೆ ವಾಂತಿ-ಬೇಧಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾ‌ಗೃತಾ ಕ್ರಮವಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಡಿಡಿಪಿಐ, ಸಂಬಂಧಪಟ್ಟ ಇಲಾಖೆಗಳ ಪ್ರಮುಖರು, ವಸತಿ ನಿಲಯಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೊಮ್ಮೆ ಸಂಸ್ಥೆಗಳು ನಿಯಮಗಳನ್ನು ಪಾಲಿಸದಿದ್ದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿಂದೆ ನಗರದ ಕದ್ರಿ ರಸ್ತೆಯ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರದಂದು ಇನ್ನೊಂದು ಸಂಸ್ಥೆಯ ವಸತಿ ನಿಲಯದಲ್ಲಿ ಇಂತಹದ್ದೇ ಪ್ರಕರಣ ನಡೆದಿರುವುದು ಕಂಡುಬಂದಿದೆ. ಘಟನೆಯ ಸ್ಥಳದಲ್ಲಿದ್ದ ಆಹಾರದ ಸ್ಯಾಂಪಲ್‌ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

“ವಳಚ್ಚಿಲ್‌ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಅಲ್ಲಿನ ಅಡುಗೆ ಕೋಣೆಗೆ ಬಾಗಿಲು ಹಾಕಿಸಲಾಗಿದೆ. ದಾಸ್ತಾನು ಕೊಠಡಿಯಲ್ಲಿ ದಿನಸಿ, ತರಕಾರಿಗಳು, ಆಹಾರ ಪದಾರ್ಥಗಳ ಸ್ವಚ್ಛತೆ ಕಾಪಾಡುವುದರ ಜತೆಗೆ, ಇಲಿ, ಹೆಗ್ಗಣ, ಹಲ್ಲಿ ಕ್ರಿಮಿಕೀಟಗಳ ಹಾವಳಿ ಇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ವಸತಿ ನಿಲಯಗಳು ಪಾಲಿಸಬೇಕಾದ ನಿಯಮಗಳನ್ನು ಕಳುಹಿಸಲಾಗಿದ್ದು, ಇದು ಬಿಸಿಯೂಟ ಒದಗಿಸುವ ಶಾಲೆಗಳಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

“ಅಡುಗೆ ಕೋಣೆಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕುಡಿಯಲು ಮತ್ತು ಅಡುಗೆಗೆ ಬಳಸುವ ನೀರು ಶುದ್ಧವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಡುಗೆ ಮಾಡುವವರು, ಸಹಾಯಕರು, ಊಟ ಬಡಿಸುವವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಿ, ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು” ಎಂದು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...