ದಕ್ಷಿಣ ಕನ್ನಡ | ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ವರದಿ ಬಹಿರಂಗಗೊಳಿಸದಂತೆ ಬೆದರಿಕೆ 

Date:

ಪಲ್ಗುಣಿ ನದಿಗೆ ಎಂಆರ್‌ಪಿಎಲ್‌ ಕಡೆಯಿಂದ ಮಾರಕ ಕೈಗಾರಿಕಾ ತ್ಯಾಜ್ಯ ಹರಿಯ ಬಿಡಲಾಗುತ್ತಿದೆ. ಮಾರಕ ತ್ಯಾಜ್ಯ ನೇರವಾಗಿ ಹರಿದು ಬಂದು ತೋಕೂರು ಹಳ್ಳ ಸೇರಿ ಪೂರ್ತಿ ನೀರು ಮಲಿನಗೊಂಡಿದ್ದನ್ನು ಗಮನಿಸಿದ ಮಂಗಳೂರಿನ ಹಲವು ಮಾಧ್ಯಮಗಳ ವರದಿಗಾರರು ಆಗಮಿಸಿದ್ದರು. ಸುದ್ದಿ ಚಿತ್ರೀಕರಣ ಮುಗಿಸಿ ಪತ್ರಕರ್ತರು ವಾಪಾಸ್ ಆದ ಬಳಿಕ ಎಂಆರ್‌ಪಿಎಲ್ ಅಧಿಕಾರಿಗಳು ಹಾಗೂ ರಕ್ಷಣಾ ವಿಭಾಗದವರು ಆಗಮಿಸಿ ಹೋರಾಟಗಾರರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಕಂಪೆನಿಯ ಒಪ್ಪಿಗೆ ಇಲ್ಲದೆ ಕಂಪೆನಿಯ ಕಾಂಪೌಂಡ್ ಹೊರ ಸುತ್ತಲ ಪ್ರದೇಶದಲ್ಲಿ ನದಿ ವೀಕ್ಷಿಸುವುದು, ನೀರು ಪರೀಕ್ಷೆ ಮಾಡುವುದು, ಸ್ಥಳೀಯ ಪರಿಸರದ ಫೋಟೊ, ವೀಡಿಯೊ ಮಾಡುವಂತಿಲ್ಲ” ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹಾಗೂ ಸ್ಥಳೀಯ ನಾಗರಿಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಮಾತಿನ ಚಕಮಕಿ ನಡೆದಿದ್ದು, “ಎಂಆರ್‌ಪಿಎಲ್ ಕಂಪೆನಿಯ ಕಾಂಪೌಂಡ್ ಹೊರಗಡೆಯಲ್ಲಿ ಫೋಟೊ, ವೀಡಿಯೊ ಚಿತ್ರೀಕರಣ ಮಾಡಲು ಹಾಗೂ ಅಡ್ಡಾಡಲು, ನದಿ ಪರಿಸರದ ಪೊಟೋ ತೆಗೆಯಲು ನಿರ್ಬಂಧಿಸಲು ಕಂಪೆನಿಗೆ ಏನು ಅಧಿಕಾರ ಇದೆ” ಎಂದು ಮುನೀರ್ ಕಾಟಿಪಳ್ಳ ಹಾಗೂ ಸ್ಥಳೀಯರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರ್ವಜನಿಕ ರಸ್ತೆಯಲ್ಲಿನ ಜನರ ಓಡಾಟ ನಿರ್ಬಂಧಿಸಲು ಹಾಗೂ ಪೊಟೋ ತೆಗೆಯುವುದನ್ನು ಆಕ್ಷೇಪಿಸಲು ಯಾವ ಅಧಿಕಾರ ಇದೆ” ಎಂದು ಮರು ಪ್ರಶ್ನಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಸರ್ಕಾರಿ ಶಾಲೆ ಆಟದ ಮೖದಾನ ಉಳಿಸಲು ಮೌನ ಪ್ರತಿಭಟನೆ

“ಎಂಆರ್‌ಪಿಎಲ್ ಅಧಿಕಾರಿಗಳು ಸುಮಾರು ಹದಿನೈದು ನಿಮಿಷಗಳಿಗೂ ಹೆಚ್ಚು ಹೊತ್ತು ಮಾತಿನ ಚಕಮಕಿ ನಡೆಸಿದ್ದಾರೆ. ಅಷ್ಟೂ ಹೊತ್ತು ಮಾತಿನ ಚಕಮಕಿ ನಡೆದಾಗಲೂ ನದಿಗೆ ಕಂಪೆನಿಯ ತ್ಯಾಜ್ಯವನ್ನು ನೇರವಾಗಿ ಬಿಡುತ್ತಿರುವ ಬಗ್ಗೆ ಎಂಆರ್‌ಪಿಎಲ್ ಕಂಪೆನಿ ಅಧಿಕಾರಿಗಳು ಒಂದು ಶಬ್ದವನ್ನೂ ಮಾತನಾಡಿಲ್ಲ. ಅವರ ಎಲ್ಲ ಆಕ್ಷೇಪ ಇದ್ದದ್ದು ಮಲಿನಗೊಂಡ ನದಿಯ ಫೋಟೋ ತೆಗೆದ ಬಗ್ಗೆ ಮಾತ್ರ” ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...