ದಕ್ಷಿಣ ಕನ್ನಡ | ಶಾಲಾ ಮೈದಾನ ಅತಿಕ್ರಮಣಕ್ಕೆ ಶಾಸಕ ಭರತ್ ಶೆಟ್ಟಿ ವೈಫಲ್ಯ ಕಾರಣ; ಬಿ.ಎ.ಮೊಯಿದಿನ್ ಬಾವ ಆರೋಪ

Date:

ಸುರತ್ಕಲ್ ಕಾನಾ ಕಟ್ಲ ಸರ್ಕಾರಿ ಶಾಲೆಯ ಭೂಮಿ ಖಾಸಗಿಯವರಿಂದ ಅತಿಕ್ರಮಣವಾಗಲು ಕ್ಷೇತ್ರದ ಶಾಸಕರ ವೈಫಲ್ಯವೇ ಕಾರಣ ಎಂದು ಮಾಜಿ ಶಾಸಕ ಬಿ.ಎ. ಮೊಯಿದಿನ್ ಬಾವ ಆರೋಪಿಸಿದ್ದಾರೆ.

ಸುರತ್ಕಲ್ ಕಾನ-ಕಟ್ಲ ಜನತಾಕಾಲನಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸರ್ಕಾರಿ ಶಾಲೆಯ ಮೈದಾನ ವಿವಾದಕ್ಕೆ ಕಾರಣರಾದ ಎಲ್ಲಾ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಆಗ್ರಹಿಸಿ ಸುರತ್ಕಲ್ ನಾಡ ಕಚೇರಿ ಚಲೋ ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ಇಲ್ಲಿನ ಶಾಸಕರಿಗೆ ಬಡವರ ಮಕ್ಕಳು ಕಲಿಯುವ ಸರ್ಕಾರಿ ಶಾಲೆಯನ್ನು ಉಳಿಸುವ ಬಗ್ಗೆ ಕಾಳಜಿ ಇಲ್ಲ.  ಶಾಲೆಯ ಸ್ವಾಧೀನ ಇರುವ ಜಾಗದಲ್ಲಿ ಅಕ್ರಮ ಮನೆಗಳು ನಿರ್ಮಾಣಗೊಳ್ಳುತ್ತಿದೆ. ಶಾಸಕರು ಮೌನವಾಗಿರುವುದು ಶಾಸಕರ ಶಾಮೀಲಾತಿಯಲ್ಲಿ ಭೂ ಅತಿಕ್ರಮಣ ನಡೆದಿರುವ ಬಗ್ಗೆ ಸಂದೇಹ ಮೂಡುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನ್ನ ಶಾಸಕತ್ವದ ಅವಧಿಯಲ್ಲಿ ಮಂಜೂರುಗೊಂಡು ನಿರ್ಮಾಣಗೊಳ್ಳುತ್ತಿರುವ 800 ಆಶ್ರಯ ಮನೆಗಳಿಗೆ ಬಡವರಿಗಾಗಿ ಈ ಸರ್ಕಾರಿ ಶಾಲೆಯನ್ನು ಜಿಲ್ಲಾಡಳಿತ ಉಳಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಹೋರಾಟ ಸಮಿತಿಯ ಸಂಚಾಲಕ ಬಿ.ಕೆ. ಇಮ್ತಿಯಾಝ್ ಮಾತನಾಡಿ ಶಾಲೆಯ ಭೂ ವಿವಾದದಲ್ಲಿ ಅನೇಕ ಅಧಿಕಾರಿಗಳ ಕೈವಾಡ ಇದೆ, ಭೂ ಮಾಪಕನೊಬ್ಬನನ್ನು ಅಮಾನತು ಮಾಡಿ ಜಿಲ್ಲಾಡಳಿತ  ಹೋರಾಟದ ಬಿಸಿಯನ್ನು ತಣಿಸಲು ನೋಡುತ್ತಿದೆ. ಸುರತ್ಕಲ್ ನಾಡ ಕಚೇರಿ ಭ್ರಷ್ಟಾಚಾರದ ಕೇಂದ್ರವಾಗಿದೆ ಸಾರ್ವಜನಿಕರು ಲಂಚ ನೀಡದೆ ಯಾವುದೇ ಕೆಲಸಗಲಾಗುವುದಿಲ್ಲ. ಇಲ್ಲಿ ನಿವೃತ್ತರಾದ ಅಧಿಕಾರಿಗಳು ಕಚೇರಿಯಲ್ಲೇ ಟಿಕಾಣಿ ಹೂಡಿ ಜನರನ್ನು ದೋಚುತ್ತಿದ್ದಾರೆ ಎಂದು ಅವರು ಆಪಾದಿಸಿದ ಅವರು, ಸರ್ಕಾರಿ ಶಾಲೆಯ ಉಳಿಸುವ ಹೋರಾಟವನ್ನು ಬಹಳ ಬದ್ಧತೆಯಿಂದ ಮುಂದುವರಿಸುತ್ತೇವೆ ಎಂದರು.

ಪ್ರತಿಭಟನೆಗೆ ಮುನ್ನ ಸುರತ್ಕಲ್ ಮೆಸ್ಕಾಂ ಕಚೇರಿ ಬಳಿಯಿಂದ ನಾಡ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಶಾಲೆ ಉಳಿಸಲು ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಆರಂಭ ಆಗುತ್ತಿದ್ದಂತೆ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಲು ಬಾರದೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದರಿಂದ, ಮನವಿ ಸ್ವೀಕರಿಸಲು ಬಂದ ಉಪ ತಹಸೀಲ್ದಾರ್ ಅವರನ್ನು ವಾಪಸ್ ಕಳಿಸಿದರು. ನಂತರ ಮಂಗಳೂರು ತಹಸೀಲ್ದಾರ್ ಬಂದು ಮನವಿ ಸ್ವೀಕರಿಸಿ ಶಾಲೆ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು. ನಂತರ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ನಗರಪಾಲಿಕೆ ಮಾಜಿ ಸದಸ್ಯ ದಯಾನಂದ ಶೆಟ್ಟಿ, ಹರೀಶ್ ಕೆ. ಸುರತ್ಕಲ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಹೋರಾಟ ಸಮಿತಿಯ ಪ್ರಮುಖರಾದ ಹಮ್ಮಬ್ಬ, ವಾರಿಜ ಸಾಲ್ಯಾನ್ ಮಾತನಾಡಿದರು. ಎಸ್ ಡಿಎಂಸಿ ಅಧ್ಯಕ್ಷರು ಕೈರುನ್ನಿಸ, ಜೋಕಟ್ಟೆ ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವ, ಡಿವೈಎಫ್ಐ ಮುಖಂಡರಾದ ಬಿ.ಕೆ. ಮಕ್ಸೂದ್, ಶ್ರೀನಾಥ್ ಕುಲಾಲ್, ಶೈಫರ್ ಆಲಿ, ರಿಜ್ವಾನ್ ಹರೇಕಳ, ಮುವಾಜ್, ಕಾಂಗ್ರೆಸ್ ಮುಖಂಡರಾದ ಹಾರಿಸ್ ಬೈಕಂಪಾಡಿ, ಹೋರಾಟ ಸಮಿತಿಯ ಪ್ರಮುಖರಾದ ಉಮರ್ ಫಾರೂಕ್, ಶರೀಫ್ ಜನತಾಕಾಲನಿ, ಶಬನ, ಸಿಸಿಲಿಯ ಡಿಸೋಜಾ, ಯಶೋಧ, ಅಸ್ಕಾಫ್, ಅಶ್ರಫ್, ಆಸೀಫ್ ದಯಾನಂದ ಶೆಟ್ಟಿ ಜನತಾಕಾಲನಿ, ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಬಷೀರ್ ಕಾನ, ರಶೀದ್ ಮುಕ್ಕ, ಹನೀಫ್ ಇಡ್ಯಾ, ಐ. ಮೊಹಮ್ಮದ್, ಸಾದಿಕ್ ಕಿಲ್ಪಾಡಿ, ಭಾರತಿ, ಕ್ರಿಸ್ತಿನ ಡಿಸೋಜಾ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...