ದ. ಕನ್ನಡ | ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಒಂದು ತಲೆಮಾರಿಗೆ ಪ್ರಭಾವ ಬೀರಿದವರು: ಪ್ರೊ ಪುರುಷೋತ್ತಮ ‌ಬಿಳಿಮಲೆ

Date:

ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರು ತನ್ನ ಲೇಖನ ಹಾಗೂ ವರದಿಗಳ ಮೂಲಕ ಒಂದು ತಲೆಮಾರಿನ ಮೇಲೆ‌ ಗಾಢ ಪ್ರಭಾವ ಬೀರಿರುವ ಪತ್ರಕರ್ತ ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ, ಚಿಂತಕ ಪ್ರೊ ಪುರುಷೋತ್ತಮ್ ಬಿಳಿಮಲೆ ಅಭಿಪ್ರಾಯಪಟ್ಟರು.

ಕರ್ನಾಟಕ ಅಧ್ಯಯನ ಕೇಂದ್ರ ಹಾಗೂ ಸುಳ್ಯದ ಬಂಟಮಲೆ ಅಕಾಡೆಮಿ ಆಶ್ರಯದಲ್ಲಿ ಮಂಗಳೂರು ಬಲ್ಮಠದ ಸಹೋಯೋಗದಲ್ಲಿ ನಡೆದ ಪತ್ರಕರ್ತ ಪಾರ್ವತೀಶ್ ಬಿಳಿದಲೆ ಸಂಪಾದಿಸಿದ ʼಕಲ್ಲೆ ಶಿವೋತ್ತಮ ರಾವ್ ಜನಪ್ರಗತಿಯ ಪಂಜು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

“70ರ ದಶಕದ ಎಲ್ಲ ಚಳವಳಿಗಳನ್ನು ಬೆಂಬಲಿಸಿದ್ದ ಕಲ್ಲೆ ಶಿವೋತ್ತಮ ರಾವ್ ಅವರು ಆ ಕಾಲಘಟ್ಟದಲ್ಲಿ ಅನೇಕ ಪ್ರಗತಿಶೀಲ ಬದಲಾವಣೆಗೆ ಕಾರಣರಾದರು” ಎಂದು ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂದಿನ ಕಾಲದಲ್ಲಿ ಬ್ರಾಹ್ಮಣೇತರ ಬರಹಗಾರರನ್ನು ಹುಡುಕಿ, ಬೆನ್ನುತಟ್ಟಿ ತನ್ನ ಜನಪ್ರಗತಿ ಪತ್ರಿಕೆಯಲ್ಲಿ ಬರೆಸುತ್ತಿದ್ದರು. ದೊಡ್ಡ ಸಂಖ್ಯೆಯಲ್ಲಿ ಉದಯೋನ್ಮುಖ ಬರಹಗಾರರಿಗೆ ಪ್ರೋತ್ಸಾಹ ನೀಡಿದರು ಎಂದು ನೆನಪಿಸಿದರು.

“ಕಲ್ಲೆ ಶಿವೋತ್ತಮ ರಾವ್ ಅವರು ತನ್ನ ನೇರ, ನಿಷ್ಠುರ‌ ಬರಹಗಳ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುವುದರ ಜತೆಗೆ ಸರ್ಕಾರ ಮತ್ತು ಸಮಾಜದ ನಡುವೆ ಸಂಪರ್ಕ ಸೇತುವಾಗಿ ಕಾರ್ಯನಿರ್ವಹಿಸಿದರು. ಸರ್ಕಾರದ ಅನೇಕ ಕಲ್ಯಾಣ ಯೋಜನೆಗಳ ಜಾರಿಗೂ ಕಾರಣಕರ್ತರಾದರು” ಎಂದು ಹೇಳಿದರು.‌

“ಇವತ್ತಿನ ಭಾರತದ ಮಾಧ್ಯಮ ಕ್ಷೇತ್ರದ ಸ್ಥಿತಿಯನ್ನು ಅಂದಿನ ಕಾಲದ ಪರಿಸ್ಥಿತಿ ಜತೆಗೆ ಹೋಲಿಸಲು ಸಾಧ್ಯವಿಲ್ಲ. ಅಂದು ಪ್ರಜಾಪ್ರಭುತ್ವ ನೈಜ ನಾಲ್ಕನೇ ಅಂಗವಾಗಿದ್ದ ಮಾಧ್ಯಮ ಇಂದು ಸರ್ಕಾರದ ತುತ್ತೂರಿಯಾಗಿದ್ದು ಮಾತ್ರವಲ್ಲದೆ, ರಾಜಕಾರಣಿಗಳ ಓಲೈಕೆಯ ಕೆಲಸವನ್ನಷ್ಟೇ ಮಾಡುತ್ತಿದೆ” ಎಂದು ಟೀಕಿಸಿದರು.‌

ಸಮಾರಂಭದ ಅಧ್ಯಕ್ಷತೆ‌ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮಾತನಾಡಿ, “ತನ್ನ ರಾಜಕೀಯ ಬೆಳವಣಿಗೆಯಲ್ಲಿ ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್ ಅವರ ಕೊಡುಗೆ ಇದೆ. ನನ್ನಲ್ಲಿ ಹಿಂದುಳಿದ ವರ್ಗದ ಬಗ್ಗೆ ರಾಜಕೀಯ ಪ್ರಜ್ಞೆ ಮೂಡಿಸಿದವರು ಶಿವೋತ್ತಮ ರಾವ್ ಅವರೇ ಆಗಿದ್ದರು. ಅವರೊಬ್ಬ ಆದರ್ಶ ಪತ್ರಕರ್ತರಾಗಿದ್ದರು” ಎಂದು ನೆನಪಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಿಜೆಪಿ ಟಿಕೆಟ್‌

ಬಂಟಮಲೆ ಅಕಾಡೆಮಿಯು ಪ್ರಧಾನ ಮಾಡುವ ಕುವೆಂಪು ಬಂಟಮಲೆ ಪ್ರಶಸ್ತಿಯನ್ನು ಕಲ್ಲೆ ಶಿವೋತ್ತಮ ರಾವ್ ಅವರ ಪರವಾಗಿ ಅವರ ಪುತ್ರ ಅಜಿತ್ ಅಶುತೋಷ್ ಕಲ್ಲೆ ಹಾಗೂ ಪುತ್ರಿ ಅಲ್ಕಾ ಕುಮಾರ್ ಅವರು ಸ್ವೀಕರಿಸಿದರು. ಹಿರಿಯ ಶಿಕ್ಷಣ ತಜ್ಞ ‌ಸುಕುಮಾರ ಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಬಂಟಮಲೆ ಪ್ರತಿಷ್ಠಾನಾದ ಎ.ಕೆ.ಹಿಮಕರ ಕಾರ್ಯಕ್ರಮ ನಿರೂಪಿಸಿದರು. ಕೃತಿ ಸಂಪಾದಕ ಪಾರ್ವತೀಶ ಬಿಳಿದಾಳೆ ಕೃತಿ ಬಗ್ಗೆ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು .

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...