ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೂಲ ಸೌಕರ್ಯಕ್ಕೆ ಎಸ್‌ಐಒ ಆಗ್ರಹ

Date:

ಬೆಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಐಒ ಕಾರ್ಯಕರ್ತರು ಬೆಂಗ್ರೆಯ ಶಾಲೆಯ ಎದುರು ಪ್ರತಿಭಟನೆ ನಡೆಸಿದರು.

ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರು ಭಾಗವಹಿ‌ಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್‌ಐಒ ಸಂಘಟನೆಯೊಂದಿಗೆ ಜೊತೆಗೂಡಿದರು.

ಜಿಲ್ಲಾಧ್ಯಕ್ಷ ಆಸಿಫ್ ಮಾತನಾಡಿ, “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಲವು ಬಾರಿ ಶಿಕ್ಷಣ ಇಲಾಖೆಯ ಗಮನಕ್ಕೆ ತರುವುದರ ಜೊತೆಗೆ ಮನವಿ ಪತ್ರ ಸಲ್ಲಿಸಿದರೂ ಈವರೆಗೆ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರವು ನೀಡುವ ಸವಲತ್ತು ಅದು ಔದಾರ್ಯವಲ್ಲ. ಬದಲಾಗಿ ಮಕ್ಕಳ ಹಕ್ಕು ಮತ್ತು ಅದನ್ನು ಖಾತರಿಪಡಿಸುವುದು ಸರ್ಕಾರದ ಹೊಣೆಗಾರಿಕೆ. ಈ ಶಾಲೆಯಲ್ಲಿ ಮಧ್ಯಮ ವರ್ಗದ ಬಡ ಕುಟುಂಬದ ಹಿನ್ನೆಲೆಯುಳ್ಳ ಮಕ್ಕಳು ಅಭ್ಯಾಸ ಮಾಡುತ್ತಿದ್ದು, ಅವರಿಗೂ ಸಹ ಶಿಕ್ಷಣ ಹಕ್ಕು ಕಾಯ್ದೆ ಒದಗಿಸುವ ಗುಣಮಟ್ಟ ಶಿಕ್ಷಣವನ್ನು ದೊರಕಿಸಬೇಕು” ಎಂದು ಆಗ್ರಹಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷ ಗಪೂರ್ ಖುಲಾಯಿ ಮಾತನಾಡಿ, “ಸರ್ಕಾರಿ ಶಾಲೆಯ ಸಮರ್ಪಕ ವ್ಯವಸ್ಥೆಗಾಗಿ ಸ್ಥಳೀಯರು ಬೀದಿಗಿಳಿದು ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಆಗ್ರಹ ಪಡಿಸುವುದು ಖೇದಕರ ಸಂಗತಿ. ಇಲಾಖೆಯೇ ಖುದ್ದಾಗಿ ಶಾಲೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬದಲಾಗಿ ಸುಮ್ಮನೆ ಕುಳಿತಿರುವುದು ಸರಿಯಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಾಸ್ಟೆಲ್‌ ಊಟದಲ್ಲಿ ಹುಳುಗಳು ಪತ್ತೆ; ವಿದ್ಯಾರ್ಥಿಗಳ ಪ್ರತಿಭಟನೆ

ಜಿಐಒ ಬೆಂಗ್ರೆಯ ಸಂಚಾಲಕಿ ಅಸ್ಮಿನಾ ಮಾತನಾಡಿ, “ಸರ್ಕಾರಿ ಶಿಕ್ಷಣ ವ್ಯವಸ್ಥೆ ಬಲಪಡಿಸಲು ನಾವೆಲ್ಲರೂ ಸೇರಿ ಹೋರಾಡಬೇಕು” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಮತ್ತು ಶಿಕ್ಷಣದ ಮೂಲ ಭಾಗಿದಾರರು ತಮ್ಮ ಹಕ್ಕಿಗಾಗಿ ಆಗ್ರಹಿಸಿದರು. ಎಸ್‌ಐಒ ಜಿಲ್ಲಾಧ್ಯಕ್ಷ ಆಸಿಫ್, ಜಿಲ್ಲಾ ಕಾರ್ಯದರ್ಶಿ ಅಯಾನ್, ಬೆಂಗ್ರೆ ಘಟಕದ ಅಧ್ಯಕ್ಷ ಅಬ್ದುಲ್ ರಫಿ ಸೇರಿದಂತೆ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...