ದಕ್ಷಿಣ ಕನ್ನಡ | ರೈಲು ನಿಲ್ದಾಣವನ್ನೇ ಸಭಾಂಗಣ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದ ಸಂಘಪರಿವಾರ; ಸಾರ್ವಜನಿಕರ ಆರೋಪ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಸೆಂಟ್ರಲ್‌ ರೈಲು ನಿಲ್ದಾಣವನ್ನು ಸಂಘ ಪರಿವಾರವು ಸಭಾಂಗಣ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗಿರುವ ವೀಡಿಯೊ ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರು ಮಂಗಳೂರಿನಿಂದ ಅಯೋಧ್ಯೆಗೆ ತೆರಳುವಾಗ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಮಾಡಿದ್ದ ಕಾರ್ಯಕ್ರಮದ್ದು ಎನ್ನಲಾಗಿದೆ.

ವೈರಲ್‌ ವೀಡಿಯೊದಲ್ಲಿ ರೈಲು ನಿಲ್ದಾಣದಲ್ಲಿ ನೂರಾರು ಮಂದಿ ಕುಳಿತುಕೊಳ್ಳಲು ಮಾಡಲಾಗಿದ್ದ ಕುರ್ಚಿಗಳನ್ನು ಜೋಡಿಸಿರುವುದು ಕಾಣಿಸುತ್ತಿದೆ. ಮೈಕ್‌ ಬಳಸಿಕೊಂಡು ಆರ್‌ಎಸ್‌ಎಸ್‌ನ ಪ್ರಾರ್ಥನೆ ಹೇಳುತ್ತಿರುವುದು ಹಾಗೂ ಅಲ್ಲಿರುವವರೆಲ್ಲರೂ ಆ ಪ್ರಾರ್ಥನೆಯನ್ನು ಪುನಾರಾವರ್ತಿಸುತ್ತಿರುವುದು ಕೇಳಿಸುತ್ತಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಅವರೂ ಕೈ ಎತ್ತಿಕೊಂಡು ಪ್ರಾರ್ಥನೆ ಹೇಳುತ್ತಿರುವುದು ವೀಡಿಯೊದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾರ್ಥನೆ ಹೇಳುತ್ತಿರುವಾಗ ಪೊಲೀಸರು ನಿಂತಿರುವುದು ವೀಡಿಯೊದಲ್ಲಿ ಕಾಣಿಸುತ್ತಿದೆ. ಪ್ರಾರ್ಥನೆ ಹೇಳಲು ಸಂಘ ಪರಿವಾರದವರು ಬಳಸಿದ್ದ ಮೈಕ್‌ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡಲು ಬಳಸುವ ಮೈಕ್‌ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿಯಿಲ್ಲ.

“ಸಾರ್ವಜನಿಕ ಸ್ಥಳ ಹಾಗೂ ಭದ್ರತೆಯ ದೃಷ್ಠಿಯಿಂದ ಸೂಕ್ಷ್ಮ ಸ್ಥಳವಾಗಿರುವ ರೈಲು ನಿಲ್ದಾಣವನ್ನು ಸಭಾಂಗಣದಂತೆ ಮಾರ್ಪಾಡು ಮಾಡಿಕೊಂಡು, ನೂರಾರು ಮಂದಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿ ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಿದವರು ಯಾರು” ಎಂದು ಸಾರ್ವಜನಿಕರು ಸರ್ಕಾರ ಮತ್ತು ರೈಲ್ವೇ ಇಲಾಖೆಯನ್ನು ಪ್ರಶ್ನಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊಗಳು ಭಾರೀ ಪ್ರಮಾಣದಲ್ಲಿ ವೈರಲ್‌ ಆಗುತ್ತಿದ್ದರೂ, ರೈಲು ನಿಲ್ದಾಣದ ಭದ್ರತೆಗೆ ಅಡ್ಡಿ ಪಡಿಸಿರುವ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿರುವ ಕುರಿತು ರೈಲು ನಿಲ್ದಾಣದ ಅಧಿಕಾರಿಗಳು ಈವರೆಗೆ ಯಾವುದೇ ದೂರನ್ನು ದಾಖಲಿಸಿರುವ ವರದಿ ಬಂದಿಲ್ಲ. ರೈಲ್ವೇ ಪೊಲೀಸರಿಂದಲೂ ಯಾವುದೇ ಕ್ರಮವಾದ ಬಗ್ಗೆ ಮಾಹಿತಿಯಿಲ್ಲ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಎಸ್‌ಪಿ ನಿಖಿಲ್ ಬಿ

“ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಪಾಲಿಸಬೇಕಾಗಿದ್ದ ನಿಯಮಗಳನ್ನು ಪಾಲಿಸದೇ ಈ ರೀತಿ ಸಂಘಪರಿವಾರದ ಕಾರ್ಯಕ್ರಮ ನಡೆಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ನಗರದ ಹೃದಯಭಾಗದಲ್ಲಿರುವ ರೈಲು ನಿಲ್ದಾಣದಲ್ಲಿ ಭದ್ರತೆಗೆ ಸವಾಲಾಗಿರುವ, ಕಾನೂನುಗಳನ್ನು ಗಾಳಿಗೆ ತೂರಿರುವ ಸಂಘಪರಿವಾರ ಕಾರ್ಯಕರ್ತರ ಮೇಲೆ ಮಂಗಳೂರು ನಗರ ಪೊಲೀಸರೂ ಸ್ವಯಂ ಪ್ರೇರಿತ ಪ್ರಕರಣ ದಾಖಸಿ ಕ್ರಮಕೈಗೊಂಡಿಲ್ಲ” ಎಂದು ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...