ದಕ್ಷಿಣ ಕನ್ನಡ | ತೊಕ್ಕೊಟ್ಟು ಜಂಕ್ಷನ್ ರಿಕ್ಷಾ ಪಾರ್ಕಿಂಗ್ ಅವ್ಯವಸ್ಥೆ; ಸರಿಪಡಿಕೆಗೆ ಸಿಐಟಿಯು ಒತ್ತಾಯ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಆಟೋರಿಕ್ಷಾ ನಿಲುಗಡೆ ಅವ್ಯವಸ್ಥೆಯನ್ನು ಸರಿಪಡಿಸಬೇಕು ಹಾಗೂ ಹೊರಗಿನ ರಿಕ್ಷಾಗಳ ಹಾವಳಿಯನ್ನು ತಡೆಗಟ್ಟಬೇಕು ಎಂದು ಸಿಐಟಿಯು ಸಂಯೋಜಿತ ಆಟೋ ರಿಕ್ಷಾ ಚಾಲಕರ ಫೆಡರೇಷನ್‌ನ ಉನ್ನತ ಮಟ್ಟದ ನಿಯೋಗವೊಂದು ಸಂಚಾರ ಪೊಲೀಸ್ ಅಧಿಕಾರಿ ಹಾಗೂ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

“ಕಳೆದ ಹಲವಾರು ದಶಕಗಳಿಂದ ಕಾರ್ಯಾಚರಿಸುತ್ತಿರುವ ಆಟೋರಿಕ್ಷಾ ಪಾರ್ಕಿಂಗ್‌ ಪ್ರದೇಶ ತೀರಾ ಅವ್ಯವಸ್ಥೆಗಳಿಂದ ಕೂಡಿದೆ. ಹೊರಗಿನ ರಿಕ್ಷಾಗಳ ಹಾವಳಿ ತೀರಾ ಮಿತಿ ಮೀರುತ್ತಿದ್ದು, ಪಾರ್ಕಿಂಗ್‌ನಲ್ಲಿ ರಿಕ್ಷಾಗಳು ಕ್ಯೂ ನಿಂತಿದ್ದರೂ ಕಣ್ಣೆದುರಲ್ಲೇ ಸರ್ವಿಸ್ ಮಾಡುತ್ತಿರುವುದರಿಂದ ಸ್ವತಃ ಪಾರ್ಕಿಂಗ್‌ನಲ್ಲಿರುವ ಸುಮಾರು 50ರಷ್ಟು ರಿಕ್ಷಾ ಚಾಲಕರಿಗೆ ದುಡಿಯಲು ಅಸಾಧ್ಯವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಂಗಳೂರಿನಿಂದ ಉಳ್ಳಾಲ ತಲಪಾಡಿ ಕಡೆಗೆ ಹೋಗುವ ಬಸ್‌ಗಳು ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಬಳಿಕ ಮತ್ತೆ ರಿಕ್ಷಾ ಪಾರ್ಕಿಂಗ್ ಇರುವ ತೊಕ್ಕೊಟ್ಟು ಜಂಕ್ಷನ್ ಬಳಿಯಲ್ಲಿ ನಿಲ್ಲಿಸಿ ಅನಗತ್ಯವಾಗಿ ರಿಕ್ಷಾ ಚಾಲಕರಿಗೆ ತೊಂದರೆ ನೀಡಲಾಗುತ್ತಿದೆ. ರಿಕ್ಷಾ ಪಾರ್ಕಿಂಗ್ ಬಳಿಯಲ್ಲೇ ಡ್ರೈನೇಜ್ ತ್ಯಾಜ್ಯಗಳು ಹರಿದಾಡುತ್ತಿದ್ದು‌, ದುರ್ನಾತದಿಂದ ಕೂಡಿರುವ ಅಲ್ಲಿ ನಿಲ್ಲಲು ಅಸಾಧ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಸ್ಪಂದನ ಇಲ್ಲವಾಗಿದೆ. ಆದಷ್ಟು ಶೀಘ್ರದಲ್ಲಿ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ” ಎಂದು ಫೆಡರೇಷನ್ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

ನಿಯೋಗದಲ್ಲಿ ಆಟೋರಿಕ್ಷಾ ಚಾಲಕರ ಫೆಡರೇಷನ್‌ನ ಜಿಲ್ಲಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ತೊಕ್ಕೊಟ್ಟು ಜಂಕ್ಷನ್ ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರುಗಳಾದ ದಯಾನಂದ್, ನಝೀರ್, ಪುರಂದರ, ರಾಮಕೃಷ್ಣ, ಕೃಷ್ಣ ಶೆಟ್ಟಿ ಪಿಲಾರ್, ಮುತ್ತಲಿಬ್, ಅಶ್ರಫ್, ನಾರಾಯಣ, ರಮೇಶ್, ಬಶೀರ್, ಅಬ್ಬಾಸ್, ಆಫ್ರಿದ್, ಮೆಲ್ವಿನ್ ಸೇರಿದಂತೆ 50ಕ್ಕೂ ಅಧಿಕ ರಿಕ್ಷಾ ಚಾಲಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...