ದಕ್ಷಿಣ ಕನ್ನಡ | ಮಗನ ಅಂಗಾಂಗ ದಾನ; ಸಂತ್ರಸ್ತ ಕುಟುಂಬಕ್ಕೆ ಯು.ಟಿ ಖಾದರ್‌ ನೆರವು

Date:

  • ಮುಖ್ಯಮಂತ್ರಿ ವಿಶೇಷ ಅನುದಾನದಿಂದ 5 ಲಕ್ಷ ರೂ. ಪರಿಹಾರ
  • ಯಶ್‌ರಾಜ್‌ ಅಂಗಾಂಗದಿಂದ ಆರು ಮಂದಿಗೆ ಮರುಜೀವ

ಬಸ್ಸಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಹಾಗೂ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸಂತ್ರಸ್ತ ಕುಟುಂಬಕ್ಕೆ ಮುಖ್ಯಮಂತ್ರಿ ವಿಶೇಷ ಅನುದಾನದಿಂದ‌ 5 ಲಕ್ಷ ಪರಿಹಾರ ಕೊಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆ, ಬೈದೆರೆಪಾಲು ನಿವಾಸಿಗಳಾಗಿರುವ ತ್ಯಾಗರಾಜ್, ಮಮತಾ ಕರ್ಕೇರ ದಂಪತಿಯ ಮೊದಲ ಪುತ್ರ ಯಶ್‌ರಾಜ್‌ (16) ಅಪಘಾತಕ್ಕೀಡಾದ ದುರ್ದೈವಿ.  

ಮಾತು ಕೊಟ್ಟಂತೆ ಪರಿಹಾರ ಕೊಡಿಸಿದ ಶಾಸಕ: ಸಾವಲ್ಲೂ ಸಾರ್ಥಕತೆ ಮೆರೆದ ಯಶರಾಜ್ ಮನೆಗೆ ಭೇಟಿ ನೀಡಿದ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್, ‘ಮುಖ್ಯಮಂತ್ರಿಗಳ ವಿಶೇಷ ಅನುದಾನ’ದಿಂದ‌ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ತಮ್ಮ ಆಪ್ತ ಸಹಾಯಕರ ಮೂಲಕವೇ ಎಲ್ಲ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಇದೀಗ ಯಶರಾಜ್ ತಂದೆ ತ್ಯಾಗರಾಜ್ ಅವರ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ 5 ಲಕ್ಷ ರೂ. ಜಮೆ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಳದೇನೆ ಬಂದು ನೊಂದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಟ್ಟ ಶಾಸಕ ಯು.ಟಿ ಖಾದರ್ ಅವರ ಸರಳತೆ, ಕಾಳಜಿಗೆ ಮೃತನ ತಂದೆ ತ್ಯಾಗರಾಜ್‌ ಕೃತಜ್ಞತೆ ಸಲ್ಲಿಸಿದ್ದಾರೆ.

“ಮನೆ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಎಷ್ಟು ಕೊಟ್ಟರೂ ಕಮ್ಮಿನೆ. ಅಂಗಾಂಗ ದಾನದ ನಿಮಿತ್ತ ಅವರನ್ನು ಅಭಿನಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿ ಪರಿಹಾರ ಕೊಡಿಸಿದ್ದೇನೆ. ಇತ್ತೀಚೆಗೆ ಕುತ್ತಾರಲ್ಲಿ ಸಂಭವಿಸಿದ ಅಪಘಾತದಲ್ಲಿ ಕಲ್ಲಾಪಿನ ಭೂಷಣ್ ರೈ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ಅವರ ದೇಹದ ಅಂಗಾಂಗ ದಾನ ಮಾಡಲಾಗಿತ್ತು. ಆ ಬಡ ಕುಟುಂಬಕ್ಕೂ ಸಹಾಯವಾಗುವ ಸಲುವಾಗಿ ಪರಿಹಾರ ಒದಗಿಸಲು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ. ಶೀಘ್ರವೇ ಹಣ ಬಿಡುಗಡೆಯಾಗುವುದು” ಎಂದು ಶಾಸಕ ಯು ಟಿ ಖಾದರ್ ತಿಳಿಸಿದ್ದಾರೆ.

ಅಂಗಾಂಗ ದಾನದ ಕುರಿತು ಜನಜಾಗೃತಿ ಮೂಡಿಸಬೇಕು: ಅಂಗಾಂಗ ದಾನದ ಬಗ್ಗೆ ಜನಜಾಗೃತಿ ಮೂಡಿಸಬೇಕು. ಯಶರಾಜ್‌ನ ಮೆದುಳು ನಿಷ್ಕ್ರಿಯಗೊಂಡಿದ್ದ ಸಂದರ್ಭದಲ್ಲಿ ಆತನ ಕುಟಂಬದವರು ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾದರು. ಆತನಿಂದ ಇಂದು ಆರು ಮಂದಿ ಜೀವಿಸುವಂತಾಗಿದೆ.

ಘಟನೆ ಹಿನ್ನೆಲೆ

ಉಳ್ಳಾಲ ಮಾಸ್ತಿಕಟ್ಟೆ, ಬೈದೆರೆಪಾಲು ನಿವಾಸಿಗಳಾಗಿರುವ ತ್ಯಾಗರಾಜ್, ಮಮತಾ ಕರ್ಕೇರ ದಂಪತಿಯ ಮೊದಲ ಪುತ್ರ ಯಶರಾಜ್ (16) ಕಳೆದ ಸೆಪ್ಟೆಂಬರ್​ 7ರಂದು ಬೆಳಿಗ್ಗೆ ಉಳ್ಳಾಲದಿಂದ ಸಿಟಿ ಬಸ್‌ನಲ್ಲಿ ಮಂಗಳೂರಿನ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಿಂದ ಹೊರಗೆ ಬಿದ್ದಿದ್ದರು. ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಯಶರಾಜ್‌ನನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಯಶರಾಜ್‌ಗೆ ಚಿಕಿತ್ಸೆ ನೀಡಿದ ವೈದ್ಯರು ಸೆ.13 ರಂದು ಆತನ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದ್ದರು. ಪೋಷಕರ ನಿರ್ಧಾರದಂತೆ ಯಶರಾಜ್‌ನ ಅಂಗಾಂಗಗಳನ್ನು ದಾನ ಮಾಡಲಾಗಿತ್ತು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...