ಪ್ರವಾಸಕ್ಕೆಂದು ಸೋಮೇಶ್ವರ ಬೀಚ್ಗೆ ಬಂದಿದ್ದ ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಮತ್ತು ಮೂವರು ಯುವತಿಯರ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿ, ಅನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ. ಹಲ್ಲೆ ಮಾಡಿದ ನಾಲ್ವರು ಪುಂಡರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಯುವಕ-ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪಿ ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ ಹಾಗೂ ಇನ್ನೋರ್ವ ಅಪ್ರಾಪ್ತ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ ಬೀಚ್ಗೆ ಬಂದಿದ್ದ ಆರು ಮಂದಿಯಲ್ಲಿ ಮೂವರು ಯುವತಿಯರು ಹಾಗೂ ಮೂವರು ಯುವಕರಿದ್ದರು. ಆ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬ ಸಂಶಯದ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ.
An incident of #moralpolicing reported at someshwar beach in #Mangalore. Three #Muslim youths assaulted for hanging out with female #Hindu friends. All are reportedly medical students & 4m #kerala studying there. Cops inform no case regd yet. More details awaited-#Karnataka pic.twitter.com/lBMdtSWYAv
— Imran Khan (@KeypadGuerilla) June 1, 2023
ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...
ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...
ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...
ಗಾಯಗೊಂಡಿದ್ದ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




