ದಕ್ಷಿಣ ಕನ್ನಡ | ಮಹಿಳೆಯರು ಸಬಲೀಕರಣದತ್ತ ದೃಢ ಹೆಜ್ಜೆ ಇಡಬೇಕಾಗಿದೆ: ಸ್ವರ್ಣ ಭಟ್

Date:

ಮೀಸಲಾತಿ, ಸಮಾನತೆ, ಸಬಲೀಕರಣದತ್ತ ಮಹಿಳೆಯರು ದೃಢವಾದ ಹೆಜ್ಜೆ ಇಡಬೇಕಾಗಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಸ್ವರ್ಣ ಭಟ್‌ ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ದ‌.ಕ. ಜಿಲ್ಲಾ ಸಮ್ಮೇಳನದ ಸಿದ್ದತೆಯ ಪ್ರಯುಕ್ತ ಮಂಗಳೂರಿನ ಖಾಸಗಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾಗತ ಸಮಿತಿಯ ರಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ ಐವತ್ತರಷ್ಟು ಅವಕಾಶ ದೂರದ ಕನಸಾಗಿಯೇ ಉಳಿದಿದೆ‌. ಇನ್ನು ಸ್ಥಳೀಯ ಸಂಸ್ಥೆಗಳಲ್ಲಿ ದೊರಕುತ್ತಿರುವ ಅವಕಾಶದ ಸ್ಥಿತಿಗತಿ ಎಲ್ಲರಿಗೂ ತಿಳಿದಿದೆ. ಮುಂದುವರಿದಿರುವ ಕರಾವಳಿ ಜಿಲ್ಲೆಗಳಲ್ಲಿಯೂ ಹೆಣ್ಣುಮಕ್ಕಳಿಗೆ ಸರಿಯಾದ ಪ್ರಾತಿನಿಧ್ಯ ದೊರಕದಿರುವುದು ವಿಷಾದನೀಯ. ಅನೈತಿಕ ಪೊಲೀಸ್ ಗಿರಿ, ಮತೀಯ ರಾಜಕರಾಣದ ಮೇಲಾಟಗಳಲ್ಲಿಯೂ ಇಲ್ಲಿ ಮಹಿಳೆಯೇ ಬಲಿಪಶು‌. ಇಲ್ಲಿ ಹೆಣ್ಣುಮಕ್ಕಳು ಪ್ರದರ್ಶನದ ಸರಕು ಮಾತ್ರ. ಇಂತಹ ಜಿಲ್ಲೆಯಲ್ಲಿ ಅನ್ಯಾಯ, ಅಸಮಾನತೆಯ ವಿರುದ್ದ ಧ್ವನಿ ಎತ್ತಬಲ್ಲ ಸ್ವಾಭಿಮಾನಿ ಮಹಿಳಾ ಚಳವಳಿ ಕಟ್ಟುವ ಕಡೆಗೆ ನಾವು ಮುನ್ನಡೆಯಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

JMS ಹಿರಿಯ ನಾಯಕಿ ಪದ್ಮಾವತಿ ಶೆಟ್ಟಿ, ಮಹಿಳಾ ಮುಖಂಡರಾದ ಮಂಜುಳಾ ನಾಯಕ್, ಗ್ರೇಟ್ಟಾ ಟೀಚರ್, ಪ್ಲೇವಿ ಕ್ರಾಸ್ತಾ ಅತ್ತಾವರ, ಪೌಲಿ, ಪ್ರಮೀಳಾ ಶಕ್ತಿನಗರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಜಯಂತಿ ಬಿ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ವಕೀಲರಾದ ಶಾಲಿನಿ, JMS ನಾಯಕಿ ಭಾರತಿ ಬೋಳಾರ ಉಪಸ್ಥಿತರಿದ್ದರು. ಸಭೆಯಲ್ಲಿ ಮಹಿಳಾಪರ ಚಿಂತಕರಾದ ಅರ್ಚನಾ ರಾಮಚಂದ್ರ, ಮರ್ಲಿನ್ ರೇಗೋ, ಬದ್ರುನ್ನೀಸಾ, ಉಮೈನಾ, ಪ್ರಮೋದಿನಿ ಕಲ್ಲಾಪು, ಜಯಲಕ್ಷ್ಮಿ, ಆಶಾ ಸಂಜೀವನಾ, ದೀಷಾ ರೀಟಾ ಪುರ್ತಾಡೋ, ಚಂದ್ರಿಕಾ, ಚಿತ್ರಲೇಖಾ, ವೀಣಾ ಸಂತೋಷ್, ಹೇಮಾ ಪಚ್ಚನಾಡಿ, ಮಾಲತಿ ತೊಕ್ಕೋಟು, ಪೂರ್ವಿ ಶೆಟ್ಟಿ, ಗೌತಮಿ, ವೈಲೆಟ್, ಸ್ವಾತಿ ಮನೋಜ್ ವಾಮಂಜೂರು, ಮಾನಸ, ಗುಣವತಿ ಕಿನ್ಯಾ ಮುಂತಾದವರು ಭಾಗವಹಿಸಿದ್ದರು.

ಇದನ್ನೂ ಓದಿ: ದಕ್ಷಿಣ ಕನ್ನಡ | ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ; ಮೂವರ ಬಂಧನ

ಜುಲೈ 27ರಂದು ನಡೆಯಲಿರುವ ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಹಿರಿಯ ರಂಗ ಕಲಾವಿದೆ ಗೀತಾ ಸುರತ್ಕಲ್, ಅಧ್ಯಕ್ಷರಾಗಿ ಪ್ಲೇವಿಕ್ರಾಸ್ತಾ ಅತ್ತಾವರ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತಿ ಬಿ ಶೆಟ್ಟಿ, ಖಜಾಂಚಿಯಾಗಿ ಅಸುಂತ ಡಿಸೋಜರವರನ್ನು ಆಯ್ಕೆಗೊಳಿಸಲಾಯಿತು. ಉಪಾಧ್ಯಕ್ಷರುಗಳಾಗಿ ಚಂದ್ರಕಲಾ ನಂದಾವರ, ಬಿ ಎಂ ರೋಹಿಣಿ, ಗುಲಾಬಿ ಬಿಳಿಮಲೆ, ಶಾಲಿನಿ, ಧನವಂತಿ ನೀರುಮಾರ್ಗ ಮಂಜುಳಾ ನಾಯಕ್ ಸೇರಿದಂತೆ ಸುಮಾರು 75 ಮಂದಿಯ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...