ಕಾರ್ಮಿಕ ವಿರೋಧಿ ಸಂಹಿತೆಗಳು: ಮೋದಿ ಸರ್ಕಾರದ ವಿರುದ್ಧ CITU ಆಕ್ರೋಶ

Date:

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ CITU ಆಕ್ರೋಶ ಹೊರಹಾಕಿದೆ. ಫೆಬ್ರವರಿ 12ರಂದು ನಡೆಯಲಿರುವ ದೇಶವ್ಯಾಪಿ ಅಖಿಲ ಭಾರತ ಮುಷ್ಕರದ ಪ್ರಚಾರಾರ್ಥವಾಗಿ ಸಿಐಟಿಯು ಉಳ್ಳಾಲ ತಾಲೂಕು ಸಮಿತಿಯ ವತಿಯಿಂದ ತಲಪಾಡಿಯಿಂದ ಪಂಪ್ವೆಲ್ ವರೆಗೆ ಬೃಹತ್ ಕಾಲ್ನಡಿಗೆ ಜಾಥಾವನ್ನು ಇಂದು ಆಯೋಜಿಸಲಾಗಿತ್ತು.

ಜಾಥಾವನ್ನು ತಲಪಾಡಿಯಲ್ಲಿ ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಮುಖಂಡ ಜೆ. ಬಾಲಕೃಷ್ಣ ಶೆಟ್ಟಿ, ಕೇಂದ್ರದ ಮೋದಿ ಸರ್ಕಾರ ಕಾರ್ಮಿಕ ಕಾನೂನುಗಳನ್ನು ಕಾರ್ಮಿಕರ ಹಿತಕ್ಕೆ ವಿರುದ್ಧವಾಗಿ ಮಾಲಿಕರ ಪರ ಕಾನೂನುಗಳಾಗಿ ಪರಿವರ್ತಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಸ್ವಾತಂತ್ರ್ಯ ನಂತರ ದೀರ್ಘ ಹೋರಾಟಗಳ ಫಲವಾಗಿ ಕಾರ್ಮಿಕರಿಗೆ ದೊರೆತ ಕನಿಷ್ಠ ವೇತನ, ಕೆಲಸದ ಸಮಯದ ಮಿತಿ, ಸಂಘಟನೆ ಹಾಗೂ ಮುಷ್ಕರದ ಹಕ್ಕು, ಸಾಮಾಜಿಕ ಭದ್ರತೆ ಮೊದಲಾದ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನವೇ ಈ ನಾಲ್ಕು ಕಾರ್ಮಿಕ ಸಂಹಿತೆಗಳು ಎಂದು ಅವರು ಹೇಳಿದರು.

2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಉನ್ನತ ತ್ರಿಪಕ್ಷೀಯ ವೇದಿಕೆಯಾದ ಭಾರತೀಯ ಕಾರ್ಮಿಕ ಸಮ್ಮೇಳನವನ್ನು ಕರೆಯದೇ ಇರುವುದು ಕಾರ್ಮಿಕ ವಿರೋಧಿ ನಿಲುವಿನ ಸ್ಪಷ್ಟ ಸಾಕ್ಷಿ ಎಂದು ಶೆಟ್ಟಿ ಟೀಕಿಸಿದರು. ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಒಕ್ಕೊರಳಿನಿಂದ ವಿರೋಧ ವ್ಯಕ್ತಪಡಿಸಿದ್ದರೂ, ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಗೈರುಹಾಜರಿಯ ವೇಳೆ ಯಾವುದೇ ಸಮಗ್ರ ಚರ್ಚೆಯಿಲ್ಲದೆ ಈ ಸಂಹಿತೆಗಳಿಗೆ ಅಂಗೀಕಾರ ಪಡೆಯಲಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 28 at 3.30.19 PM

ಹೊಸ ಕಾರ್ಮಿಕ ಸಂಹಿತೆಗಳ ಮೂಲಕ ಸಂಘಟನೆ ಮತ್ತು ಮುಷ್ಕರದ ಹಕ್ಕನ್ನು ಕಾನೂನಾತ್ಮಕವಾಗಿ ಕುಂಠಿತಗೊಳಿಸಲಾಗಿದೆ ಎಂದು ಶೆಟ್ಟಿ ಹೇಳಿದರು. 1926ರ ಟ್ರೇಡ್ ಯೂನಿಯನ್ ಕಾಯ್ದೆಯ ಪ್ರಕಾರ ಏಳು ಕಾರ್ಮಿಕರು ಸೇರಿ ಸಂಘ ರಚಿಸಲು ಅವಕಾಶವಿದ್ದರೆ, ಈಗ ಅದಕ್ಕೂ ಅಡೆತಡೆ ಸೃಷ್ಟಿಸಲಾಗಿದೆ. ಹಿಂದಿನ ಕಾನೂನಿನಂತೆ ಮುಷ್ಕರಕ್ಕೆ 15 ದಿನಗಳ ನೋಟಿಸ್ ಸಾಕಾಗುತ್ತಿತ್ತು. ಆದರೆ ಹೊಸ ಸಂಹಿತೆಗಳಲ್ಲಿ ಅದನ್ನು 60 ದಿನಗಳಿಗೆ ಏರಿಸಲಾಗಿದೆ. ಸಂಧಾನ ಪ್ರಕ್ರಿಯೆಯ ಅವಧಿಯಲ್ಲಿ ಮುಷ್ಕರ ನಡೆಸುವುದು ಅಕ್ರಮವಾಗಿದ್ದು, ಮತ್ತೊಬ್ಬರ ಹೋರಾಟಕ್ಕೆ ಬೆಂಬಲ ಸೂಚಿಸಿ ಮುಷ್ಕರ ಮಾಡಿದರೂ ಅಪರಾಧವೆಂದು ಪರಿಗಣಿಸುವಂತಹ ಕರಾಳ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಬೆಳ್ತಂಗಡಿ | ಕೆರೆಯಲ್ಲಿ ಬಾಲಕನ ಮೃತದೇಹ ಪತ್ತೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು

ಈ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಎಲ್ಲಾ ಕಾರ್ಮಿಕ ವರ್ಗದವರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕೆಂದು ಜೆ. ಬಾಲಕೃಷ್ಣ ಶೆಟ್ಟಿ ಕರೆ ನೀಡಿದರು.

ಕಾರ್ಮಿಕ ಮುಖಂಡರಾದ ಸುಕುಮಾರ್ ತೊಕ್ಕೊಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಥಾದಲ್ಲಿ ಕಾರ್ಮಿಕ ಮುಖಂಡರಾದ ಸುಂದರ ಕುಂಪಲ, ಜಯಂತ್ ನಾಯಕ್, ರೈತ ಮುಖಂಡರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ವಿಲಾಸಿನಿ ತೊಕ್ಕೊಟ್ಟು, ರಫೀಕ್ ಹರೇಕಳ, ನಿತಿನ್ ಕುತ್ತಾರ್, ಶೇಖರ್ ಕುಂದರ್, ಮಹಾಬಲ ದೆಪ್ಪೆಲಿಮಾರ್, ರೋಹಿದಾಸ್ ಭಟ್ನಗರ, ಇಬ್ರಾಹಿಂ ಮದಕ, ರಮೇಶ್ ಉಳ್ಳಾಲ, ಸುನಿಲ್ ತೇವುಲ, ಪ್ರಮೋದಿನಿ ಕಲ್ಲಾಪು, ಜಯರಾಮ್ ತೇವುಲ, ಜನಾರ್ಧನ ಕುತ್ತಾರ್, ರಝಕ್ ಮುಡಿಪು, ಅಶ್ರಫ್ ಹರೇಕಳ, ರಿಜ್ವಾನ್ ಹರೇಕಳ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...