ದಕ್ಷಿಣ ಕನ್ನಡ | ಬಿಡಬ್ಲ್ಯೂಎಫ್‌ ಸಾಮೂಹಿಕ ವಿವಾಹʼಕ್ಕೆ ಅರ್ಜಿ ಆಹ್ವಾನ

Date:

ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡಲು ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿಡಬ್ಲ್ಯುಎಫ್) ಮುಂದಾಗಿದೆ. 2024ರ ಫೆಬ್ರವರಿ 3ರಂದು ಮಂಗಳೂರು ಬಳಿಯ ಗಂಜಿಮಠದ ‘ಝಾರಾ ಕನ್ವೆಂಶನ್‌ ಸೆಂಟರ್’ನಲ್ಲಿ ‘ಸರಳ ಸಾಮೂಹಿಕ ವಿವಾಹ’ವನ್ನು ಆಯೋಜಿಸಿದೆ. ಅಗತ್ಯವಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಬಹುದು ಎಂದು ಬಿಡಬ್ಲ್ಯೂಎಫ್‌ ಹೇಳಿದೆ.

ಸಾಮೂಹಿಕ ವಿವಾಹ ಆಯೋಜನೆಯ ಬಗ್ಗೆ ಬಿಡಬ್ಲ್ಯೂಎಫ್‌ನ ಅಧ್ಯಕ್ಷ ಮುಹಮ್ಮದ್‌ ಅಲಿ ಉಚ್ಚಿಲ್‌ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. “ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

“ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬಿಡಬ್ಲ್ಯೂಎಫ್‌ ಭರಿಸಲಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್‌ 25 ಕೊನೆಯ ದಿನಾಂಕವಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್‌ ಯು.ಹೆಚ್ (ಸಂಚಾಲಕರು, ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಎಲ್‌ಎಕ್ಸ್‌ಎಂ ಸೀ ಫುಡ್‌ ಎಕ್ಸ್‌ಪೋರ್ಟ್ಸ್, ನಂ. 14, ಒಂದನೇ ಮಹಡಿ, ಅಡೋನೈ ಟವರ್ಸ್‌, ಕಂಕನಾಡಿ ರಸ್ತೆ, ಹೈಲ್ಯಾಂಡ್‌ ಆಸ್ಪತ್ರೆ ಬಳಿ, ಮಂಗಳೂರು – 575002, ಫೋನ್: 98450 54191) ಅವರನ್ನು ಸಂಪರ್ಕಿಸಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...