ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಪೊಲೀಸ್ ಠಾಣಾ ಭೇಟಿ

Date:

ಬಂಟ್ವಾಳ ಸಮೀಪದ ಕಲ್ಲಡ್ಕದ ಗೋಳ್ತಮಜಲು ಎಂಬಲ್ಲಿರುವ, ಬಾಲಕಿಯರ ವಿದ್ಯಾಸಂಸ್ಥೆ ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಂದ ಇತ್ತೀಚೆಗೆ ಪೊಲೀಸ್ ಠಾಣಾ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ, ಇಲ್ಲಿನ, ಪ್ರಥಮ ಪಿಯುಸಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿನಿಯರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

ಈ ಕುರಿತು ಪ್ರಸ್ತುತ ಯುವಜನತೆಯಲ್ಲಿ ಪೊಲೀಸ್ ಠಾಣೆಯ ಕಾರ್ಯ ಚಟುವಟಿಕೆಗಳ ಬಗೆಗಿನ ಅರಿವು ಮೂಡಿಸುವ ಜತೆಗೆ ಪೊಲೀಸರ ಬಗ್ಗೆ ಇರುವ ಭಯ ಮತ್ತು ಗೊಂದಲದ ಭಾವನೆಯನ್ನು ಹೋಗಲಾಡಿಸುವ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.

ಈ ನಿಟ್ಟಿನಲ್ಲಿ, ಬಂಟ್ವಾಳ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಧನ್ಯಶ್ರೀಯವರು ವಿದ್ಯಾರ್ಥಿನಿಯರಿಗೆ ಪೊಲೀಸ್ ಠಾಣೆಯ ಕುರಿತು ತಿಳುವಳಿಕೆ ನೀಡಿದ್ದಲ್ಲದೆ, “ವಿದ್ಯಾರ್ಥಿನಿಯರು ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಯುಪಿಎಸ್‌ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ಪೊಲೀಸ್ ಇಲಾಖೆ ಸೇರಿದಂತೆ, ಸರ್ಕಾರಿ ಉದ್ಯೋಗ‌ ಗಿಟ್ಟಿಸಿಕೊಳ್ಳುವಲ್ಲಿ ಗಮನಹರಿಸಬೇಕು. ಅದಕ್ಕೆ ಪೂರಕವಾಗಿ ವಿದ್ಯಾರ್ಥಿನಿಯರು ನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅನುಗ್ರಹ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು 1

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಿ ಕೃಷ್ಣಯ್ಯಶೆಟ್ಟಿ ಜ್ಯುವೆಲ್ಲರ್ಸ್ನಿಂದ ವಜ್ರ ಮತ್ತು ಚಿನ್ನಾಭರಣ ಪ್ರದರ್ಶನ

ಠಾಣೆಯ ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್‌ ವಾಕಿ-ಟಾಕಿಯನ್ನು ಬಳಸುವ ವಿಧಾನದ ಬಗ್ಗೆ ಹಾಗೂ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಕುರಿತು ಮಾಹಿತಿ ನೀಡಿದರು. ಹಾಗೆಯೇ ವಿದ್ಯಾರ್ಥಿನಿಯರು ತಮಗೆ ಇರುವ ಗೊಂದಲ-ಸಂದೇಹಗಳ ಬಗ್ಗೆ ಪೊಲೀಸರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...