ಧರ್ಮಸ್ಥಳ ಪ್ರಕರಣ | ಎಸ್‌ಐಟಿ ಮುಖ್ಯಸ್ಥರಿಗೆ ʼಕೊಂದವರು ಯಾರು?ʼ ಆಂದೋಲನದಿಂದ ಹಕ್ಕೊತ್ತಾಯ ಸಲ್ಲಿಕೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪ್ರದೇಶದಲ್ಲಿನ ಮಹಿಳೆಯರ ಸಾವುಗಳು ಮತ್ತು ನಾಪತ್ತೆ ಮೊದಲಾದ ಬಗೆಹರಿಯದ ಪ್ರಕರಣಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಲಾದ ‘ಕೊಂದವರು ಯಾರು- who killed women in Dharmasthala?’ ಆಂದೋಲನದ ಪ್ರತಿನಿಧಿಗಳು ನವೆಂಬರ್ 26 ರ ಬುಧವಾರದಂದು ಎಸ್‌ಐಟಿ ಮುಖ್ಯಸ್ಥ ಶ್ರೀ ಪ್ರಣಬ್ ಮೊಹಂತಿ ಅವರನ್ನು ಭೇಟಿ ಮಾಡಿ ಈ ವಿಷಯದ ಕುರಿತು ನಡೆಯುತ್ತಿರುವ ತನಿಖೆಗಳಿಗೆ ಸಂಬಂಧಿಸಿದಂತೆ ಒಂದು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

ಸರ್ಕಾರಿ ಆದೇಶದ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಮಹಿಳೆಯರ ಅಸ್ವಾಭಾವಿಕ ಸಾವುಗಳು, ಅತ್ಯಾಚಾರಗಳು ಮತ್ತು ಕಣ್ಮರೆಗಳ ದೊಡ್ಡ ವಿಚಾರವನ್ನು ಕೈಗೆತ್ತಿಕೊಂಡಿದ್ದಕ್ಕಾಗಿ ಎಸ್‌ಐಟಿಯನ್ನು ಶ್ಲಾಘಿಸಿದ ನಿಯೋಗ, ಬಲಿಪಶುಗಳು, ಬದುಕುಳಿದವರು, ಸಾಕ್ಷಿಗಳು ಮತ್ತು ಕುಟುಂಬಗಳು ಯಾವುದೇ ಪ್ರತೀಕಾರದ ಭಯವಿಲ್ಲದೆ ಮುಂದೆ ಬರಲು ಅನುವು ಮಾಡಿಕೊಡುವ ಕ್ರಮವನ್ನು ತಕ್ಷಣವೇ ಜಾರಿಗೆ ತರಬೇಕೆಂದು ಎಸ್‌ಐಟಿಯನ್ನು ಒತ್ತಾಯಿಸಿತು. ಇದು ತನಿಖೆಗಳನ್ನು ಬಲಗೊಳಿಸಿ, ವಿಶ್ವಾಸಾರ್ಹತೆ ಖಾತ್ರಿಪಡಿಸುತ್ತದೆ ಮತ್ತು ಇದರಿಂದಾಗಿ ತನಿಖೆಯು ಸಮಗ್ರ ಮತ್ತು ಪರಿಣಾಮಕಾರಿಯಾಗುತ್ತದೆ ಎಂಬ ಭರವಸೆ ನೀಡಿದರು.

ಇಂತಹ ನಿರ್ಣಾಯಕ ಕ್ರಮಗಳು ಅಧಿಕಾರಿಗಳು ಸ್ಥಳೀಯ ಶಕ್ತಿ ಅಥವಾ ಪ್ರಭಾವವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರು ಮತ್ತು ಗುಂಪುಗಳನ್ನು ಸಮಾನವಾಗಿ ಪರಿಗಣಿಸುತ್ತಿದ್ದಾರೆ ಎಂಬ ಬಲವಾದ ಸಾರ್ವಜನಿಕ ಸಂದೇಶವನ್ನು ರವಾನಿಸುತ್ತದೆ ಎಂದು ನಿಯೋಗದಲ್ಲಿ ಭಾಗವಹಿಸಿದ್ದ ಆಂದೋಲನದ ಪ್ರತಿನಿಧಿಗಳು ಹೇಳಿದರು. ಹಕ್ಕೊತ್ತಾಯದಲ್ಲಿ ದಾಖಲಿಸಲಾಗಿರುವ ಕ್ರಮಗಳಲ್ಲಿ- ಸಾರ್ವಜನಿಕ ಸೂಚನೆ ನೀಡುವುದು ಮತ್ತು ಸಾವುಗಳಿಗೆ ಸಂಬಂಧಿಸಿದ ದೂರುಗಳು ಮತ್ತು ಮಾಹಿತಿಗಾಗಿ ಸಹಾಯವಾಣಿಯನ್ನು ಸ್ಥಾಪಿಸುವುದು, ಸಾಕ್ಷಿಗಳು ಮತ್ತು ದೂರುದಾರರು ಮುಂದೆ ಬರಲು ಅಗತ್ಯವಾದ ರಕ್ಷಣೆ, ಸುರಕ್ಷತೆ ಮತ್ತು ಅನಾಮಧೇಯತೆಯನ್ನು ಒದಗಿಸುವುದು ಮತ್ತು ಲಿಂಗ ನ್ಯಾಯ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಸ್ವತಂತ್ರ ಬೆಂಬಲ ಗುಂಪನ್ನು ಸ್ಥಾಪಿಸುವುದು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಂದವರು ಯಾರು ಆಂದೋಲನದ ಪ್ರತಿನಿಧಿಗಳು, ಈ ಸಲಹೆಗಳು ಮತ್ತು ಬೇಡಿಕೆಗಳನ್ನು ಸರ್ಕಾರದ ಮುಂದೆಯೂ ಮಂಡಿಸಿ, ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ನಿಯೋಗದ ಸದಸ್ಯರಲ್ಲಿ ಹಿರಿಯ ಕಾರ್ಯಕರ್ತೆಯರಾದ ಕೆ.ಎಸ್. ವಿಮಲಾ, ಆಶಾ ರಮೇಶ್ ಮತ್ತು ಮಲ್ಲಿಗೆ ಸಿರಿಮನೆ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...