ದ.ಕ | ʼಒಡೆಯೋಣ ನಮ್ಮ ನಡುವಿನ ಗೋಡೆಯನ್ನʼ ಎಂಬ ಧ್ಯೇಯದೊಂದಿಗೆ ಡಿ.21ರಿಂದ ರಥಯಾತ್ರೆ

Date:

41 ವರ್ಷದ ಮುಂಚೆ ಎಸ್‌ಐಒ( ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ) ಆರಂಭಿಸುವಾಗ ಉತ್ತಮ ಸಮಾಜಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಸಮಾಜದ ಆಸ್ತಿಯಾಗಿ ಸಿದ್ಧಪಡಿಸುವ ದೃಢ ಪ್ರತಿಜ್ಞೆ ತೆಗೆದುಕೊಂಡಿತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಐಒ ನಿಮ್ಮ ಮುಂದೆ ಬರುತ್ತಿರುವ ನಮ್ಮ ಈ ರಥ ತನ್ನ ಈ ಪ್ರತಿಜ್ಞೆಯನ್ನು ಪೂರೈಸಲು ಹಗಲಿರುಳು ಶ್ರಮಿಸುತ್ತಿದೆ ಎಂದು ಎಸ್‌ಐಒ ಕಾರ್ಯಕರ್ತರು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾರ್ಯಕರ್ತರು, “ಎಸ್‌ಐಒ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಜೀವನವನ್ನು ಪುನರ್ ನಿರ್ಮಾಣ ಮಾಡಲು ಸಹಕರಿಸುವ ಮೂಲಕ ದುಷ್ಟರ ವಿರುದ್ಧ ಹೋರಾಡಲು, ಸಮಾಜದಲ್ಲಿ ನೈತಿಕತೆ ಮತ್ತು ವಿಚಾರದ ಜ್ಯೋತಿ ಬೆಳಗಲು ನಿಜವಾದ ಜ್ಞಾನ ಮತ್ತು ಜಾಗೃತಿಯನ್ನು ನೀಡಲು ಬದ್ಧವಾಗಿದ್ದು ಅದಕ್ಕಾಗಿ ನಿರಂತರ ಶ್ರಮಿಸುತ್ತಿದೆ” ಎಂದರು.

“ದ್ವೇಷ ಭಾಷಣ ಎಂಬುದು ಪ್ರಸ್ತುತ ಭಾರತದಲ್ಲಿ ನಿತ್ಯದ ಸಾಮಾನ್ಯ ವಿಷಯವಾಗಿದೆ. ದೇಶದ ವಿವಿಧ ಪ್ರದೇಶಗಳಲ್ಲಿ ದ್ವೇಷದ ಅಪರಾಧಗಳು ವರದಿಯಾಗುತ್ತವೆ. ಕೆಲವು ವರ್ಷಗಳಿಂದ ನಮ್ಮ ರಾಷ್ಟ್ರದ ಜಾತ್ಯತೀತ ಸ್ವರೂಪವು ಭಾರೀ ಪ್ರಮಾಣದಲ್ಲಿ ಕೋಮುವಾದದೊಂದಿಗೆ ರಾಜಿಯಾಗಿದೆ. ಜನರ ಮನಸ್ಸಿನಲ್ಲಿ ಕೋಮುವಿಷ ತುಂಬುಲಾಗುತ್ತಿದೆ. ನಮ್ಮ ರಾಜ್ಯದ ಜಾತ್ಯಾತೀತ ಪರಂಪರೆಗೆ ಸಮಸ್ಯೆಯಾಗಿರುವ ರಾಜ್ಯದ ಜಾತ್ಯತೀತ ವಿರೋಧಿ ಶಕ್ತಿಗಳು, ನೈತಿಕ ಪೊಲೀಸ್‌ಗಿರಿ, ವ್ಯಾಪಾರ ಬಹಿಷ್ಕಾರಕ್ಕೆ ಕರೆ ನೀಡುವ ಮೂಲಕ ದ್ವೇಷವನ್ನು ಹರಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ “ಒಡೆಯೋಣ, ನಮ್ಮ ನಡುವಿನ ಗೋಡೆಯನ್ನು” ಎಂಬ ಧ್ಯೇಯವಾಕ್ಯದೊಂದಿಗೆ ಸಂಚರಿಸುವ ರಥಯಾತ್ರೆಯನ್ನು ನಾವು ಹಮ್ಮಿಕೊಂಡಿದ್ದೇವೆ. ಈ ರಥಯಾತ್ರೆಯು ಡಿಸೆಂಬರ್ 21 ರಿಂದ 24ರವರೆಗೆ ಸಂಚರಿಸಲಿದೆ. ರಥಯಾತ್ರೆಯಲ್ಲಿ ಈ ವಿಷಯದ ಮೇಲೆ ಬೀದಿ ನಾಟಕಗಳನ್ನು ಪ್ರದರ್ಶಿಸಲಿದೆ. ವಿಭಜಕ ಶಕ್ತಿಗಳು ಏನೇ ಮಾಡಲಿ, ತುದಿಗಾಲಲ್ಲಿ ನಿಂತರು ನೈತಿಕ ಮೌಲ್ಯಗಳು ಉತ್ತುಂಗದಲ್ಲಿರುವ ಜಾತ್ಯಾತೀತ ಸಮಾಜವಾಗಿ ನಾವು ಯಾವಾಗಲೂ ಜಯಿಸುತ್ತೇವೆಂದು ಸಾರ್ವಜನಿಕರಿಗೆ ಅರಿವು ಮೂಡಿಸುತ್ತೇವೆ” ಎಂದು ತಿಳಿಸಿದರು.

“ದ್ವೇಷದ ವಿನಾಶಕಾರಿ ಪರಿಣಾಮವು ದುಃಖಕರವಾಗಿದೆ. ಅದರಲ್ಲಿ ಹೊಸತೇನಿಲ್ಲ. ಅದರ ಪ್ರಮಾಣ ಮತ್ತು ಪ್ರಭಾವವು ಇಂದು ಸಾಮಾಜಿಕ ಮಾಧ್ಯಮದಿಂದ ಹೆಚ್ಚಾಗಿದೆ. ಎಷ್ಟರಮಟ್ಟಿಗೆ ಎಂದರೆ ಜಾಗತಿಕ ಮಟ್ಟದಲ್ಲಿ ದ್ವೇಷ ಭಾಷಣದ ವಾಕ್ಚಾತುರ್ಯ ವಿಭಜಕ ಸಿದ್ದಾಂತಗಳನ್ನು ಹರಡುವ ಒಂದು ಸಾಮಾನ್ಯ ವಿಧಾನವಾಗಿದೆ. ಇದನ್ನು ನಿಯಂತ್ರಿಸದೆ ಬಿಟ್ಟರೆ ದ್ವೇಷದ ಭಾಷಣವು ದೇಶದ ಶಾಂತಿ ಮತ್ತು ಅಭಿವೃದ್ಧಿಗೆ ಹಾನಿಯುಂಟು ಮಾಡುತ್ತದೆ. ಏಕೆಂದರೆ ಇದು ಸಂಘರ್ಷಗಳನ್ನು ಮತ್ತು ವ್ಯಾಪಕ ಪ್ರಮಾಣದ ಮಾನವ ಹಕ್ಕುಗಳ ಉಲ್ಲಂಘನೆಗಳಿಗೆ ಪ್ರೋತ್ಸಾಹ ನೀಡುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮ ರದ್ದಿಗೆ ಆಗ್ರಹ

“ದ್ವೇಷದ ಭಾಷಣವು ಸಹಿಷ್ಣುತೆ ವೈವಿಧ್ಯತೆ ಮತ್ತು ಮಾನವ ಹಕ್ಕುಗಳ ನಿಯಮಗಳ ಮತ್ತು ತತ್ವಗಳ ಮೂಲತತ್ವದ ಮೌಲ್ಯಗಳ ನಿರಾಕರಣೆಯಾಗಿದೆ. ಇದು ತಾರತಮ್ಯ ರಾಷ್ಟ್ರದ ಶಕ್ತಿ ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯ ನಾವು ನಮ್ಮ ವೈವಿಧ್ಯಗಳನ್ನು ಅಳವಡಿಸಿಕೊಳ್ಳಬೇಕು. ರಾಷ್ಟ್ರದ ಅಭಿವೃದ್ಧಿಗೆ ಕೆಲಸ ಮಾಡುವ ಒಂದು ಘಟಕವಾಗಿ ಕಾರ್ಯನಿರ್ವಹಿಸಬೇಕು. ಶಾಂತಿ ಮತ್ತು ಸಮೃದ್ಧಿಯ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಶ್ರಮಿಸೋಣ. ಆದ್ದರಿಂದ ನಾವು ನಮ್ಮ ಈ ಉತ್ತಮ ಸಂದೇಶವನ್ನು ಮತ್ತು ನಮ್ಮ ಈ ಕಾರ್ಯಕ್ರಮವನ್ನು ಪ್ರಸಾರ ಪಡಿಸುತ್ತಿದ್ದೇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...