ದಕ್ಷಿಣ ಕನ್ನಡ | ಫೆ.12ರಂದು ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

Date:

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದು, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆಬ್ರವರಿ 12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್‌ಕುಮಾರ್ ಬಜಾಲ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಕೇಂದ್ರ ಸರಕಾರ ಭಾರತದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಬಾಧ್ಯತೆಗಳನ್ನು ನಾಶ ಮಾಡಲು ಕಾರ್ಮಿಕ ಚಳವಳಿಯನ್ನು ಹತ್ತಿಕ್ಕಲು ಹಾಗೂ ಬಂಡವಾಳಿಗರ ಲಾಭದ ಹಿತಾಸಕ್ತಿಗಳನ್ನು ಕಾಪಾಡಲು ಪ್ರಮುಖ 29 ಕಾನೂನುಗಳನ್ನು ರದ್ದುಗೊಳಿಸಿದೆ. ಉದ್ಯಮಸ್ನೇಹಿ ಹೆಸರಿನಲ್ಲಿ 4 ಕಾರ್ಮಿಕ ಸಂಹಿತೆಗಳಾದ ವೇತನ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆಗಳನ್ನು 2025 ನವೆಂಬರ್ 21ರಿಂದ ಜಾರಿಗೆ ಅಧಿಸೂಚನೆ ಹೊರಡಿಸಿದೆ. ಸ್ವಾತಂತ್ರ್ಯ ನಂತರ ಕಾರ್ಮಿಕರು ನಡೆಸಿದ ದೀರ್ಘ ಹೋರಾಟದ ಫಲವಾಗಿ ಕನಿಷ್ಠ ವೇತನ, ಕೆಲಸದ ಸಮಯದ ಮಿತಿ, ಸಂಘಟನೆ ಮತ್ತು ಮುಷ್ಕರದ ಹಕ್ಕು, ಸಾಮಾಜಿಕ ಭದ್ರತೆ ಕಾನೂನುಗಳು ಬಂದಿದ್ದು, ಆದರೆ ಈ ಎಲ್ಲಾ ಹಕ್ಕುಗಳನ್ನು ಹಿಂಪಡೆಯುವ ಪ್ರಯತ್ನವೇ ಈ 4 ಕಾರ್ಮಿಕ ಸಂಹಿತೆಗಳಾಗಿವೆ” ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಕೇಂದ್ರದಲ್ಲಿ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ 2014ರಿಂದ ದೇಶದ ಉನ್ನತ ತ್ರಿಪಕ್ಷೀಯ ವೇದಿಕೆಯಾದ ಭಾರತೀಯ ಕಾರ್ಮಿಕ ಸಮ್ಮೇಳನವನ್ನು ಈವರೆಗೂ ಕರೆಯಲಾಗಿಲ್ಲ. ಎಲ್ಲಾ ಕೇಂದ್ರ ಕಾರ್ಮಿಕ ಸಂಘಗಳು ಒಕ್ಕೊರಳಿನಿಂದ ಈ ಸಂಹಿತೆಗಳನ್ನು ವಿರೋಧಿಸಿವೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಇಲ್ಲದ ವೇಳೆ ಪ್ರಮುಖ ಆಕ್ಷೇಪಣೆಗಳನ್ನು ನಿರ್ಲಕ್ಷಿಸಿ ಚರ್ಚೆ ಇಲ್ಲದೆ ಈ ಸಂಹಿತೆಗಳಿಗೆ ಅಂಗೀಕಾರ ಪಡೆದಿದೆ. ಕೇಂದ್ರ ಸರಕಾರ ನಿಗದಿ ಮಾಡಿದ ನೆಲಮಟ್ಟದ ಕನಿಷ್ಠ ಕೂಲಿ ದಿನಕ್ಕೆ ರೂ. 178/- ಮಾತ್ರ. ಈ ಹಣದಲ್ಲಿ ಯಾವುದೇ ಕಾರ್ಮಿಕನಿಗೆ ಬದುಕು ನಿರ್ವಹಿಸಲು ಸಾಧ್ಯವಿಲ್ಲ. ಕೇಂದ್ರ ಸರಕಾರವೇ ನೇಮಕ ಮಾಡಿದ ಡಾ.ಅನೂಪ್ ಸತ್ಪತಿ ಸಮಿತಿ ಕನಿಷ್ಠ ಕೂಲಿ ದಿನಕ್ಕೆ ರೂ. 375/-ರಷ್ಟು ನೀಡಬೇಕೆಂದು ಶಿಫಾರಸು ಮಾಡಿತ್ತು. 7ನೇ ವೇತನ ಆಯೋಗ ತಿಂಗಳಿಗೆ ರೂ. 18,000/- ಎಂದು ಹೇಳಿತ್ತು. ಆದರೆ ಸರಕಾರ ಇವೆಲ್ಲವನ್ನೂ ತಿರಸ್ಕರಿಸಿತ್ತು. ಪ್ರೊವಿಡೆಂಟ್ ಫಂಡ್ (EPF) ವೇತನ ಮಿತಿ ರೂ. 15,000/-, ESI ವೇತನ ಮಿತಿ ರೂ. 21,000/-ಕ್ಕೆ ಮಿತಿಗೊಳಿಸಿದ ಕೇಂದ್ರ ಸರಕಾರವು ಬಹುಸಂಖ್ಯಾತ ಕಾರ್ಮಿಕರನ್ನು ಈ ಯೋಜನೆಗಳಿಂದ ಹೊರಗಿಡುವ ಸಂಚು ರೂಪಿಸಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 02 04 at 5.56.46 PM

“ಹೊಸ ಸಂಹಿತೆಯಲ್ಲಿ ಸಂಘಟನೆ ಮತ್ತು ಮುಷ್ಕರಕ್ಕೆ ಅವಕಾಶವಿಲ್ಲ, 1926ರ ಟ್ರೇಡ್ ಯೂನಿಯನ್ ಆಕ್ಟ್ನಲ್ಲಿ ಒಂದು ಕೈಗಾರಿಕೆಯ 7 ಕಾರ್ಮಿಕರು ಒಟ್ಟಾಗಿ ಸಂಘ ರಚಿಸಲು ಅವಕಾಶವಿತ್ತು. ಹಿಂದಿನ ಕಾನೂನಿನ ಪ್ರಕಾರ ಮುಷ್ಕರ ನಡೆಸಲು 15 ದಿನಗಳ ಮುಂಚಿತವಾಗಿ ನೋಟೀಸು ನೀಡಿದರೆ ಸಾಕಿತ್ತು. ಆದರೆ ಹೊಸ ಸಂಹಿತೆ ಪ್ರಕಾರ ಅದನ್ನು 60 ದಿವಸಗಳಿಗೆ ಏರಿಕೆ ಮಾಡಲಾಗಿದೆ. ಮಾತ್ರವಲ್ಲ ಸಂಧಾನ ನಡೆಯುವವರೆಗೆ ಮುಷ್ಕರ ನಡೆಸುವುದು ಅಕ್ರಮವೆಂದು ಘೋಷಿಸಲಾಗಿದೆ. ಅಲ್ಲದೆ ಇನ್ನೊಬ್ಬರ ಹೋರಾಟಕ್ಕೆ ಬೆಂಬಲ ಸೂಚಿಸಿ ಮುಷ್ಕರ ಮಾಡಿದರೆ ಅದು ಕೂಡಾ ಅಪರಾಧವಾಗಿದೆ. ಒಟ್ಟಿನಲ್ಲಿ ಇದು ಅಂತರಾಷ್ಟ್ರೀಯ ಕಾರ್ಮಿಕ ಸಂಘಟನೆ (ULO)ಯ ಒಪ್ಪಂದಗಳಿಗೂ ವಿರುದ್ಧವಾಗಿದೆ. ಹಾಗೂ ಸಂವಿಧಾನ ವಿರೋಧಿಯಾಗಿದೆ” ಎಂದು ಅಸಮಾಧಾನಗೊಂಡರು.

“ಮಹಾತ್ಮಾ ಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ವಿಕಸಿತ್ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ, 2025 ಎಂದು ಬದಲಾಯಿಸಲಾಗಿದೆ. ಈ ಹೊಸ ಕಾಯ್ದೆಯು ತೀವ್ರ ನಿರುದ್ಯೋಗದಿಂದ ಬಳಲುತ್ತಿರುವ ಗ್ರಾಮೀಣ ಜನತೆಯ ಬದುಕಿಗೆ ಗಂಭೀರ ಪೆಟ್ಟು ನೀಡಲಿದೆ ಹಾಗೂ ಹಣಕಾಸಿನ ಹೊರೆಯನ್ನು ರಾಜ್ಯಗಳ ಮೇಲೆ ವರ್ಗಾಯಿಸುತ್ತದೆ. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ ನೀಡಲಾಗಿದ್ದು, ಇದು ಪ್ರಾಯೋಗಿಕವಾಗಿ ವಿದೇಶಿ ಕಂಪನಿಗಳಿಗೆ ದೇಶೀಯ ವಿಮಾ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಹಕ್ಕನ್ನು ನೀಡಿದೆ. ಕೇಂದ್ರ ಸರ್ಕಾರವು ಕರಡು ಬೀಜ ಮಸೂದೆ ಮತ್ತು ಕರಡು ವಿದ್ಯುತ್ (ತಿದ್ದುಪಡಿ) ಮಸೂದೆ, 2025ನ್ನು ಮಂಡಿಸಿದೆ. ಈ ಮಸೂದೆಗಳನ್ನು ಮಂಡಿಸಿ ಅಂಗೀಕರಿಸಿದರೆ, ಕೃಷಿ, ಗೃಹ ಬಳಕೆ, ವಿದ್ಯುತ್ ಗ್ರಾಹಕರು ಮತ್ತು ನಮ್ಮ ದೇಶದ ಸಾರ್ವಜನಿಕ ವಿದ್ಯುತ್ ಕ್ಷೇತ್ರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ” ಎಂದರು.

“ಅಖಿಲ ಭಾರತ ಮಹಾಮುಷ್ಕರದ ಸಂದೇಶವನ್ನು ಜನಸಾಮಾನ್ಯರ ಮಧ್ಯೆ ಕೊಂಡೊಯ್ಯಲು ಫೆಬ್ರವರಿ 5, 6, 7ರಂದು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾಹನ ಪ್ರಚಾರ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 5ರಂದು ಬೆಳಿಗ್ಗೆ 9.30ಕ್ಕೆ ನಗರದ ಲೇಡಿಗೋಷನ್ ಬಳಿಯಲ್ಲಿ ಜಾಥಾದ ಉದ್ಘಾಟನಾ ಸಮಾರಂಭವು ಜರುಗಲಿದೆ. ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರದಾನ ಕಾರ್ಯದರ್ಶಿ ಫಣೀಂದ್ರ ಕೆ.ಯವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಬ್ಯಾಂಕ್ ನೌಕರರ ರಾಜ್ಯ ನಾಯಕರಾದ ವಿನ್ಸೆಂಟ್ ಡಿ.ಸೋಜ ಹಾಗೂ ಬಿ.ಎಂ. ಮಾಧವರವರು ಭಾಗವಹಿಸಲಿದ್ದಾರೆ. ಬಳಿಕ ಜಾಥಾವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಂಚರಿಸಿ ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಸಮಾರೋಪಗೊಳ್ಳಲಿದೆ”

ಇದನ್ನೂ ಓದಿ: ಮಂಗಳೂರು | ಪಾವೂರು ಗ್ರಾಮ ಪಂಚಾಯತ್‌ನಲ್ಲಿ BSWT ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ

ಅಖಿಲ ಭಾರತ ಮುಷ್ಕರ ನಡೆಯಲಿರುವ ಫೆ. 12ರಂದು ಬೆಳಿಗ್ಗೆ 9 ಗಂಟೆಗೆ ದ.ಕ. ಜಿಲ್ಲೆಯಾದ್ಯಂತ ಏಕಕಾಲದಲ್ಲಿ ತಾಲೂಕು, ವಲಯ ಕೇಂದ್ರಗಳು ಸೇರಿದಂತೆ ಸುಮಾರು 25ಕ್ಕೂ ಮಿಕ್ಕಿದ ಕಡೆಗಳಲ್ಲಿ ರಸ್ತೆತಡೆ ಚಳುವಳಿ ನಡೆಯಲಿದೆ. ನೂರಾರು ಸಂಖ್ಯೆಗಳಲ್ಲಿ ಕಾರ್ಮಿಕರು, ರೈತರು, ವಿದ್ಯಾರ್ಥಿ ಯುವಜನರು, ಮಹಿಳೆಯರು, ದಲಿತ ಆದಿವಾಸಿಗಳು ಸೇರಿದಂತೆ ಜಿಲ್ಲೆಯ ಪ್ರಜ್ಞಾವಂತ ಜನತೆ ರಸ್ತೆತಡೆ ಚಳುವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆರಿಂಜ, ಎಐಟಿಯುಸಿ ಜಿಲ್ಲಾ ಮುಖಂಡ ಬಿ. ಶೇಖರ್, ಸಿಐಟಿಯು ಜಿಲ್ಲಾ ಮುಖಂಡ ಯೋಗಿಶ್ ಜಪ್ಪಿನಮೊಗರು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಕೆ. ಯಾದವ ಶೆಟ್ಟಿ, ರಾಜ್ಯ ರೈತ ಸಂಘದ ನಾಯಕ ಓಸ್ವಾಲ್ ಪ್ರಕಾಶ್ ಫೆರ್ನಾಂಡೀಸ್, ಬ್ಯಾಂಕ್ ನೌಕರರ ಮುಖಂಡ ಬಿ.ಎಂ. ಮಾಧವ, ವಿಮಾ ನೌಕರರ ಸಂಘಟನೆಯ ಮುಖಂಡ ಬಿ.ಎನ್. ದೇವಾಡಿಗ, ವಿಮಾ ಪ್ರತಿನಿಧಿಗಳ ಸಂಘಟನೆಯ ಜಿಲ್ಲಾ ಮುಖಂಡ ರಾಜನ್ ಡಿ.ಕೋಸ್ತ, ಕರ್ನಾಟಕ ರಾಜ್ಯ ಹೊಟೇಲ್ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಪಿ.ಹೆಚ್. ಮೋಹನ್ ಹಾಗೂ ಹೋಟೆಲ್ ಕಾರ್ಮಿಕರ ಮುಖಂಡ ಕಿರಣ್ ರಾಜ್ ಇದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...