ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

Date:

ಮಾದಕ ದ್ರವ್ಯ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕಾಗಿದೆ. ಈ ಹಾವಳಿಯ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ಸಂವೇದನಾಶೀಲರಾಗಿದ್ದರೆ, ನಾವು ಅಪರಾಧಿಗಳಾಗುತ್ತೇವೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು, ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡಿದಾಗ, ಈ ಹೋರಾಟವನ್ನು ಎದುರಿಸುವುದು ಸುಲಭವಾಗುತ್ತದೆ’ ಎಂದು ಮಂಗಳೂರಿನ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.

ಡ್ರಗ್ಸ್‌ಮುಕ್ತ ಧರ್ಮಕ್ಷೇತ್ರವಾಗಿಸುವ ಗುರಿಯೊಂದಿಗೆ ಧರ್ಮಕ್ಷೇತ್ರದ ಪಾಲನಾ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಡ್ರಗ್ಸ್ ವಿರೋಧಿ ಜಾಗೃತಿ ಮಾಸ ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಚಾಲನೆ ನೀಡಿ ಮಾತನಾಡಿದರು.

ಡ್ರಗ್ಸ್ ಸಂಗ್ರಹದಿಂದ ತುಂಬಿದ ಗಾಜಿನ ಭರಣಿಯನ್ನು ಇನ್ಸಿನರೇಟರ್ ಫೈರ್ ಬಿನ್‌ಗೆ ಖಾಲಿ ಮಾಡಿ ಭರಣಿಯೊಳಗೆ ಮುಳುಗಿರುವ ಮಗುವಿನ ಗೊಂಬೆಯನ್ನು ಮುಕ್ತಗೊಳಿಸುವುದರ ಮೂಲಕ ಸಾಂಕೇತಿಕವಾಗಿ ಅಭಿಯಾನವನ್ನು ಬಿಷಪ್ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದಕ ವ್ಯಸನಗಳಿಂದ ಕುಟುಂಬಗಳು, ಯುವಕರು ಮತ್ತು ಮಕ್ಕಳು ಬಳಲುತ್ತಿದ್ದಾರೆ. ಈ ಸಾಮಾಜಿಕ ಸಮಸ್ಯೆಗೆ ಒಮ್ಮನಸ್ಸಿನಿಂದ ಸ್ಪಂದಿಸಬೇಕಿದೆ. ಜಾತಿ, ಧರ್ಮ, ಭಾಷೆಯ ಗಡಿಗಳನ್ನು ಮೀರಿ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಒಟ್ಟಾಗಿ ಕೆಲಸ ಮಾಡೋಣ” ಎಂದು ಬಿಷಪ್ ಕರೆ ನೀಡಿದರು.

“ಡ್ರಗ್ಸ್ ತ್ಯಜಿಸಿ, ಜೀವನ ಆಲಿಂಗಿಸಿ’ ಎಂಬ ಘೋಷವಾಕ್ಯವನ್ನು ಹೊಂದಿರುವ ಅಭಿಯಾನವು, ಧರ್ಮಕ್ಷೇತ್ರದ ಚರ್ಚ್‌ಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೆಪ್ಟೆಂಬರ್ 1ರಿಂದ 30ರವರೆಗೆ ನಡೆಯಲಿದೆ” ಎಂದು ಸಂಚಾಲಕ ಲುವಿ ಜೆ ಪಿಂಟೊ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

ಗುರು ಮ್ಯಾಕ್ಸಿಮ್ ನೊರೊನ್ಹಾ, ಪಾಲನಾ ಪರಿಷತ್ ಕಾರ್ಯದರ್ಶಿ ಜಾನ್ ಡಿಸಿಲ್ವ, ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟೆಲಿನೊ, ತೆಲೊಕಾ ಅಡಿಕ್ಷನ್ ರಿಕವರಿ ಸೆಂಟರ್‌ನ ಮ್ಯಾನೇಜಿಂಗ್ ಟ್ರಸ್ಟಿ ಕ್ಲಾರಾ ಡಿಕುನ್ಹಾ, ಕುಟುಂಬ ಆಯೋಗದ ಕಾರ್ಯದರ್ಶಿ ಅನಿಲ್ ಆಲ್ಫ್ರೆಡ್ ಡಿಸೋಜ, ಶಿಕ್ಷಣ ಆಯೋಗದ ಕಾರ್ಯದರ್ಶಿ ಆಂಟೋನಿ ಶೇರಾ, ಆರೋಗ್ಯ ಆಯೋಗದ ಕಾರ್ಯದರ್ಶಿ ಅಜಿತ್ ಮಿನೇಜಸ್, ಯುವ ಆಯೋಗದ ಕಾರ್ಯದರ್ಶಿಅಶ್ವಿನ್ ಕಾರ್ಡೋಜಾ, ಸಂಪರ್ಕ ಆಯೋಗದ ಕಾರ್ಯದರ್ಶಿ ಅನಿಲ್ ಐವನ್ ಫರ್ನಾಂಡೀಸ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...