ದಕ್ಷಿಣ ಕನ್ನಡ | ಮುಸ್ಲಿಮರಿಗೆ ಬಾಯ್‌ಕಾಟ್ – ಹಿಂದು ವ್ಯಾಪಾರಿಗಳಿಗೆ ಆದಾಯ ಕ್ಷೀಣ; ವಿಎಚ್‌ಪಿ ತಂದ ಆಪತ್ತು

Date:

ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಾಲಯದಲ್ಲಿ ನಡೆಯುತ್ತಿರುವ ನವರಾತ್ರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕರೆಕೊಟ್ಟಿತ್ತು. ಆದರೆ, ಆ ಕರೆಯಿಂದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಮಾತ್ರವಲ್ಲದೆ, ಹಿಂದು ವ್ಯಾಪಾರಿಗಳಿಗೂ ಆದಾಯ ಕ್ಷೀಣಿಸುವಂತೆ ಮಾಡಿದೆ. ಜಾತ್ರೆ ಆರಂಭವಾಗಿ ಮೂರು ದಿನಗಳು ಕಳೆದರೂ ವ್ಯಾಪಾರ ಇನ್ನೂ ಚುರುಕುಗೊಂಡಿಲ್ಲವೆಂದು ಜಾತ್ರೆಯಲ್ಲಿ ಅಂಗಡಿ ತೆರೆದಿರುವ ಹಿಂದು ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ವಿಎಚ್‌ಪಿ ನೀಡಿದ್ದ ಬಾಯ್‌ಕಾಟ್ ಕರೆಯ ಹೊರತಾಗಿಯೂ ಗುರುವಾರ ಹಿಂದು-ಮುಸ್ಲಿಂ ಸಮುದಾಯದ ಜನರು ಉಭಯ ಸಮುದಾಯದ ವ್ಯಾಪಾರಿಗಳ ಅಂಗಡಿಗಳಿಗೆ ಹೋಗಿದ್ದಾರೆ. ತಮ್ಮಿಷ್ಟದ ವಸ್ತುಗಳು, ಆಟಿಕೆಗಳು ಹಾಗೂ ತಿನಿಸುಗಳನ್ನು ಖರೀದಿಸಿದ್ದಾರೆ. ಯಾವ ಉದ್ದೇಶದಿಂದ ವಿಎಚ್‌ಪಿ ಬಾಯ್‌ಕಾಟ್‌ ಕರೆ ಕೊಟ್ಟಿತ್ತೋ ಆ ಉದ್ದೇಶವನ್ನು ಹುಸಿಗೊಳಿಸಿದ್ದಾರೆ.

ಆದರೆ, ಬಾಯ್‌ಕಾಟ್‌ ಕರೆಯ ಕಾರಣದಿಂದಾಗಿ ಜಾತ್ರೆಯು ವಿವಾದದ ತಾಣವಾಗಬಹುದೆಂದು ಹೆಚ್ಚಿನ ಜನರು ಇನ್ನೂ ಜಾತ್ರೆಯತ್ತ ಸುಳಿದಿಲ್ಲ. ಪರಿಣಾಮ ವ್ಯಾಪಾರ ಕಡಿಮೆಯಾಗಿದೆ. ಪ್ರಸ್ತುತ ಸನ್ನಿವೇಶವನ್ನು ನೋಡಿದರೆ, ಜಾತ್ರೆಯ ಇನ್ನುಳಿದಿರುವ ದಿನಗಳಲ್ಲಿಯೂ ಹೆಚ್ಚು ವ್ಯಾಪಾರ ನಡೆಯುವ ಸಾಧ್ಯತೆಯಿಲ್ಲವೆಂದು ಅನೇಕ ಹಿಂದು ವ್ಯಾಪಾರಿಗಳು ಭಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯಾಪಾರದಲ್ಲಿ ಭಾರೀ ಕುಸಿತ ಕಂಡಿದೆ. ಈ ಹಿಂದೆ ಜಾತ್ರೆಗೆ ಸಾಕಷ್ಟು ಹಿಂದುಯೇತರ ಗ್ರಾಹಕರು ಬರುತ್ತಿದ್ದರು. ಆದರೆ, ಈ ಬಾರಿ ಗ್ರಾಹಕರ ಸಂಖ್ಯೆ ಕಡಿಮೆಯಾಗಿದೆ” ಎಂದು ಜಾತ್ರೆಯಲ್ಲಿದ್ದ ವ್ಯಾಪಾರಿಯೊಬ್ಬರು ಹೇಳಿದ್ದಾರೆ.

ಸಾಮಾನ್ಯವಾಗಿ, ಚಪ್ಪಲಿಗಳು, ಬಟ್ಟೆಗಳು, ಆಲಂಕಾರಿಕ ವಸ್ತುಗಳು ಇತ್ಯಾದಿಗಳು ಜಾತ್ರೆಗೆ ಹೆಚ್ಚು ಜನರನ್ನು ಸೆಳೆಯುತ್ತವೆ. ಆದರೆ, ಇವುಗಳನ್ನು ಹೆಚ್ಚಾಗಿ ಮಾರಾಟ ಮಾಡುವ ಹಲವು ಹಿಂದುಯೇತರ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ಮಳಿಗೆಗಳು ದೊರೆಯದ ಕಾರಣ, ಇಂತಹ ವಸ್ತುಗಳ ಮಳಿಗೆಗಳು ತುಂಬಾ ಕಡಿಮೆ ಇದೆ. ಹೀಗಾಗಿ, ಹೆಚ್ಚು ಗ್ರಾಹಕರು ಬರುತ್ತಿಲ್ಲವೆಂದು ಸ್ಥಳೀಯರು ಹೇಳುತ್ತಾರೆ.

ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಹಾವೇರಿ ಜಿಲ್ಲೆಯ ಹಿರೂರಿನ ಸಂಜೀವ್ ಸೇರಿದಂತೆ ಹಲವು ಮಾರಾಟಗಾರರು ಈ ಬಾರಿ ವ್ಯಾಪಾರ ವಹಿವಾಟು ಕ್ಷೀಣಿಸಿದೆ ಎಂದು ಹೇಳಿದ್ದಾರೆ.

ಗ್ರಾಹಕರು ವ್ಯಾಪಾರ ವಹಿವಾಟಿನಲ್ಲಿ ಧರ್ಮದ ತಾರತಮ್ಯ ಮಾಡುವುದಿಲ್ಲ. ವಿಎಚ್‌ಪಿ ಮತ್ತು ಬಜರಂಗದಳದ ಕರೆಗೆ ಜನರು ಮಹತ್ವ ನೀಡಿಲ್ಲ. ಎಲ್ಲರೂ ಎಲ್ಲ ಮಳಿಗೆಗಳಿಗೂ ಭೇಟಿ ನೀಡಿ, ವ್ಯಾಪಾರ ಮಾಡುತ್ತಿದ್ದಾರೆ ಎಂದು ಮತ್ತೊಬ್ಬ ವ್ಯಾಪಾರಿ ಹೇಳಿದ್ದಾರೆ.

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಯನ್ನು ಹಿಂದುವೆಂದು ಭಾವಿಸಿದ್ದ ಹಿಂದುತ್ವವಾದಿ ಕಾರ್ಯಕರ್ತ, ಆತನ ಮಳಿಗೆಗೆ ಕೇಸರಿ ಧ್ವಜವನ್ನು ಹಾಕಿದ್ದ. ಆದರೆ, ತಾನು ಹಿಂದು ಅಲ್ಲ ಎಂದು ವ್ಯಾಪಾರಿ ಹೇಳಿದ ಬಳಿಕ ನಯವಾಗಿ ಧ್ವಜವನ್ನು ತೆಗೆದುಕೊಂಡು ಹೋದನೆಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...