ದಕ್ಷಿಣ ಕನ್ನಡ | ಕರ್ನಾಟಕ ಒನ್ ಕೇಂದ್ರದಲ್ಲಿ ಸೌಲಭ್ಯ ಕುಂಠಿತ; ವಿಶಿಷ್ಟ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಕದ್ರಿಯಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿನ ಕಳಪೆ ಸೌಲಭ್ಯಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗೆರಾರ್ಡ್ ಟವರ್ಸ್ ಶನಿವಾರ ವಿಶಿಷ್ಟ ಪ್ರತಿಭಟನೆ ನಡೆಸಿದರು.

ಕೇಂದ್ರವನ್ನು ಪ್ರವೇಶಿಸಿದ ಕೂಡಲೇ, ಅವರು ಅನಾರೋಗ್ಯದಿಂದ ಬಳಲುತ್ತಿರುವಂತೆ ನಟಿಸಿದ್ದು, ಸುತ್ತಲೂ ನೆರೆದಿದ್ದ ಸಾರ್ವಜನಿಕರ ಗಮನವನ್ನು ಸೆಳೆಯಲು ಮೂರ್ಛೆ ಹೋದರು. ಅನೇಕರು ಅವರಿಗೆ ಸಹಾಯ ಮಾಡಲು ಮುಂದಾಗಿದ್ದು, ಅವರಿಗೆ ನೀರನ್ನು ನೀಡಿದರು.

ಸಾಮಾಜಿಕ ಕಾರ್ಯಕರ್ತ ಗೆರಾರ್ಡ್ ಟವರ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಈವರೆಗೆ ಮಾಡಿದ ಹಲವಾರು ಮನವಿಗಳು ವ್ಯರ್ಥವಾದವು. ಹಾಗಾಗಿ ಈಗ ಹೊಸ ರೀತಿಯ ಪ್ರತಿಭಟನೆ ನಡೆಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿರಿಯ ನಾಗರಿಕರು ಸೇರಿದಂತೆ ಸುಮಾರು 1,000 ಜನರು ವಿವಿಧ ಸರ್ಕಾರಿ ಯೋಜನೆಗಳು ಮತ್ತು ಇತರ ಕೆಲಸಗಳಿಗಾಗಿ ಅರ್ಜಿಗಳನ್ನು ಸಲ್ಲಿಸಲು ಕೇಂದ್ರಕ್ಕೆ ಭೇಟಿ ನೀಡುತ್ತಾರೆ. ಕೇಂದ್ರದಲ್ಲಿನ ಹವಾನಿಯಂತ್ರಣ ಘಟಕಗಳು ಹಾಳಾಗಿದ್ದು, 14 ತಿಂಗಳಿಗಿಂತ ಹೆಚ್ಚು ಸಮಯದಿಂದ ಕಾರ್ಯನಿರ್ವಹಿಸುತ್ತಿಲ್ಲ. ಕಳೆದ 10 ತಿಂಗಳಿನಿಂದ ನಾನು ಈ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳಿಗೆ ದೂರು ನೀಡುತ್ತಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

“ಕೇಂದ್ರದ ಒಳಗೆ ಸರಿಯಾದ ಅನುಕೂಲತೆ ಇಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಹೆಚ್ಚಿನ ಕೋಣೆಯ ತಾಪಮಾನದಿಂದಾಗಿ ಮಹಿಳೆಯೊಬ್ಬರು ಮೂರ್ಛೆ ಹೋಗಿ ಕೇಂದ್ರದಲ್ಲಿ ನೆಲದ ಮೇಲೆ ಬಿದ್ದರು. ಕುಡಿಯುವ ನೀರಿಲ್ಲ, ಶೌಚಾಲಯವೂ ಇರಲಿಲ್ಲ. ಪದೇ ಪದೆ ದೂರು ನೀಡಿದ ಬಳಿಕ ಮಹಿಳೆಯರಿಗಾಗಿ ಒಂದು ಶೌಚಾಲಯವನ್ನು ತೆರೆಯಲಾಯಿತು. ವೃದ್ಧರು ಮತ್ತು ದೈಹಿಕ ವಿಕಲಚೇತನರ ಅನುಕೂಲಕ್ಕಾಗಿ ಅಂಗವಿಕಲ ಸ್ನೇಹಿ ಮಾರ್ಗವಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಿಂದುಳಿದ ಸಮುದಾಯಗಳ ಏಳಿಗೆಗೆ ಶಿಕ್ಷಣ ಮುಖ್ಯ: ಸಚಿವ ಹೆಚ್ ಸಿ ಮಹದೇವಪ್ಪ

ಕರ್ನಾಟಕ ಒನ್ ಕೇಂದ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಪ್ರಾಮಾಣಿಕ ವಿಧಾನವನ್ನು ಟವರ್ಸ್ ಶ್ಲಾಘಿಸಿದರು. “ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯವಾದ ಕೆಲಸ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಮಾತ್ರ ನಾನು ‘ಅಣಕು ಮೂರ್ಛೆ’ ಪ್ರತಿಭಟನೆಯನ್ನು ನಡೆಸಬೇಕಾಯಿತು” ಎಂದು ಟವರ್ಸ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...