ದಕ್ಷಿಣ ಕನ್ನಡ | ‘ಸಂಸದರ ಈಜು ಕೊಳ’ ಸಮಸ್ಯೆಗೆ ಕೊನೆಗೂ ಪರಿಹಾರ

Date:

ಮಂಗಳೂರು – ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದ ಒಂದೂವರೆ ದಶಕದ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕುವಂತಾಗಿದ್ದು, ಮಳೆ ನೀರು ಹರಿದು ಹೋಗಲು ಮೋರಿ ಅಳವಡಿಸುವ ಕಾಮಗಾರಿ ಆರಂಭಗೊಂಡಿದೆ.

ಮಂಗಳೂರು – ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆ ಗ್ರಾಮದ ಬಿ.ಎ. ಕಾಲೇಜಿನ ಬಳಿಯ ತಿರುವಿನಲ್ಲಿ ಮಳೆ ನೀರು ನಿಂತು ರಸ್ತೆ ಕೊಳದಂತೆ ಆಗುತ್ತಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ಭಾರೀ ಸಮಸ್ಯೆ ಉಂಟಾಗುತ್ತಿತ್ತು. ಅಲ್ಲದೆ ಇಲ್ಲಿನ ರಸ್ತೆ ಅಪಾಯಕಾರಿ ತಿರುವು ಆಗಿರುವುದರಿಂದ ವೇಗವಾಗಿ ಬರುವ ವಾಹನಗಳ ಚಾಲಕರು ನೀರು ಕಂಡು ಏಕಾಏಕಿ ಬ್ರೇಕ್ ಹಾಕುವುದರಿಂದ ಸಣ್ಣ ಪುಟ್ಟ ಅಪಘಾತಗಳು ಪದೇ ಪದೇ ಸಂಭವಿಸುತ್ತಿದ್ದವು.

ಇತ್ತೀಚೆಗೆ ತುಂಬೆಯಲ್ಲಿ ನಡೆದ ‘ತುಂಬೆ ಫೆಸ್ಟ್’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲೂ ಈ ಸಮಸ್ಯೆಯ ಬಗ್ಗೆ ತುಂಬೆ ಗ್ರಾಮದ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ದ್ವಿಪಥ ರಸ್ತೆಯಾಗಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ಒಂದೂವರೆ ದಶಕಕ್ಕೂ ಹಿಂದೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಂಡ ಬಳಿಕ ಈ ಸಮಸ್ಯೆ ತಲೆದೋರಿತ್ತು. ಈ ಸಮಸ್ಯೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ ಮನವಿಗಳ ಮೇಲೆ ಮನವಿಗಳನ್ನು ನೀಡಿದರೂ ಯಾವುದೇ ಸ್ಪಂದನೆ ದೊರೆಯುತ್ತಿರಲಿಲ್ಲ ಎಂದು ತುಂಬೆಯ ಜನರು ಆಕ್ರೋಶ ವ್ಯಕ್ತಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ ಪೂರ್ತಿ ಇಡೀ ರಸ್ತೆಯಲ್ಲಿ ಕೊಳದಂತೆ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿತ್ತು. ಮನವಿ ನೀಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸ್ಪಂದನೆ ದೊರೆಯದ ಕಾರಣ ಆಕ್ರೋಶಿತ ಗ್ರಾಮಸ್ಥರು ಇಲ್ಲಿ “ಜಿಲ್ಲೆಯ ನಂ.1 ಸಂಸದರ ಈಜು ಕೊಳ ಇದೆ, ನಿಧಾನವಾಗಿ ಚಲಿಸಿ” ಎಂದು ಫ್ಲೆಕ್ಸ್ ಅಳವಡಿಸಿದ್ದರು. ಆ ಬಳಿಕ ಇಲ್ಲಿ ನೀರು ತುಂಬಿದಾಗ ‘ಸಂಸದರ ಈಜು ಕೊಳ’ ಎಂದೇ ಜನರು ಕರೆಯುತ್ತಿದ್ದರು.

ಇದೀಗ ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ಅದರ ಸಲುವಾಗಿ ರಸ್ತೆಯನ್ನು ಅಗೆದು ಮೋರಿ ಅಳವಡಿಸುವ ಕಾಮಗಾರಿ ಸೋಮವಾರದಿಂದ ಆರಂಭಗೊಂಡಿದೆ. ಸುಮಾರು ಒಂದು ವಾರದ ಒಂದು ವಾರದ ಕಾಮಗಾರಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...